AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranjani Raghavan: ನಿಸರ್ಗ ನೋಡಿ ತಾಳ್ಮೆ ಕಲಿತ ನಟಿ ರಂಜನಿ ರಾಘವನ್

ನಟಿ ರಂಜನಿ ರಾಘವನ್ ಅವರದ್ದು ಭಿನ್ನ ವ್ಯಕ್ತಿತ್ವ. ಅವರು ನಟನೆಯ ಜೊತೆಗೆ ಕಾದಂಬರಿ ಹಾಗೂ ಕಥೆಗಳನ್ನು ಕೂಡ ಬರೆಯುತ್ತಾರೆ. ಈಗ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಸುತ್ತಾಡುತ್ತಿದ್ದಾರೆ.

Ranjani Raghavan: ನಿಸರ್ಗ ನೋಡಿ ತಾಳ್ಮೆ ಕಲಿತ ನಟಿ ರಂಜನಿ ರಾಘವನ್
ರಂಜನಿ
ರಾಜೇಶ್ ದುಗ್ಗುಮನೆ
|

Updated on:Jul 28, 2023 | 2:44 PM

Share

ನಟಿ ರಂಜನಿ ರಾಘವನ್ (Ranjani Raghavan) ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ವಿಡಿಯೋ ಹಾಗೂ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ರಂಜನಿ ಅವರು ಕೇರಳದ ವಯನಾಡಿನಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರಕೃತಿಯನ್ನು ಅವರು ಆರಾಧಿಸುತ್ತಿದ್ದಾರೆ ಎಂಬುದು ಈ ಪೋಸ್ಟ್​ನಲ್ಲಿ ಗೊತ್ತಾಗಿದೆ. ಸದ್ಯ ಅವರು ಕಿರುತೆರೆ ಬಿಟ್ಟು ಹಿರಿತೆರೆಯಲ್ಲಿ ಬ್ಯುಸಿ ಆಗಿದ್ದಾರೆ.

ನಟಿ ರಂಜನಿ ರಾಘವನ್ ಅವರದ್ದು ಭಿನ್ನ ವ್ಯಕ್ತಿತ್ವ. ಅವರು ನಟನೆಯ ಜೊತೆಗೆ ಕಾದಂಬರಿ ಹಾಗೂ ಕಥೆಗಳನ್ನು ಕೂಡ ಬರೆಯುತ್ತಾರೆ. ‘ಕನ್ನಡತಿ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಅವರು ಈಗ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಸುತ್ತಾಡುತ್ತಿದ್ದಾರೆ. ಕೇರಳದ ವಯನಾಡಿನ ರೆಸಾರ್ಟ್ ಒಂದರಲ್ಲಿ ಸಮಯ ಕಳೆಯುತ್ತಿದ್ದಾರೆ.

ಪ್ರಕೃತಿ ಮಧ್ಯೆ ಇರುವ ರೆಸಾರ್ಟ್​​ನಲ್ಲಿ ರಂಜನಿ ರಾಘವನ್ ನಿಂತಿದ್ದಾರೆ. ಈ ವಿಡಿಯೋಗೆ ಅವರು, ‘ನಿಸರ್ಗ ನೋಡು.. ಆಕೆಯ ತಾಳ್ಮೆಯ ಕಲಿ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ರಂಜನಿ ರಾಘವನ್ ಅವರು ಹೇಳಿದ ಮಾತನ್ನು ಅನೇಕರು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ರಂಜನಿ ಅವರನ್ನು ಸುಂದರಿ ಎಂದು ಕರೆದಿದ್ದಾರೆ. ‘ಸುಂದರ ಲೋಕದಲ್ಲೊಬ್ಬಳು ಸುಂದರಿ’ ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ವಯನಾಡು ಪ್ರವಾಸದ ಫೋಟೋ ಹಂಚಿಕೊಂಡ ರಂಜನಿ ರಾಘವನ್

ಇತ್ತೀಚೆಗೆ ರಂಜನಿ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ‘ಡೆಡ್ಲಿ ಸೋಮ’ ಖ್ಯಾತಿಯ ಆದಿತ್ಯ ಅವರು ಈ ಚಿತ್ರಕ್ಕೆ ಹೀರೋ. ಈ ಸಿನಿಮಾಗೆ ಕಿಶೋರ್ ಮೇಗಳಮನೆ ಅವರು ನಿರ್ದೇಶನ ಮಾಡುತ್ತಿದ್ದಾರೆ‌‌. ಕಿಶೋರ್ ಮೇಗಳಮನೆ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ. ಈ ಸಿನಿಮಾಗೆ ಟೈಟಲ್ ಇನ್ನೂ ಫೈನಲ್ ಆಗಿಲ್ಲ. ಅಶ್ವಿನ್ ಹಾಸನ್, ಕರಿಸುಬ್ಬು, ಶಿವಮಣಿ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಆದಿತ್ಯ ಮತ್ತು ರಂಜನಿ ರಾಘವನ್ ಕಾಂಬಿನೇಷನ್​ ಬಗ್ಗೆ ನಿರೀಕ್ಷೆ ಮೂಡಿದೆ. ಈ ಮೊದಲು ರಂಜನಿ ಅವರು ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:39 pm, Fri, 28 July 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ