ಕನ್ನಡದಲ್ಲೇ ದೀಪಿಕಾ ಎದುರು ಪ್ರೀತಿ ವ್ಯಕ್ತಪಡಿಸಿದ್ದ ರಣವೀರ್ ಸಿಂಗ್

ದೀಪಿಕಾ ಪಡುಕೋಣೆ ಅವರು ಕರ್ನಾಟಕದವರು. ಅವರಿಗೆ ಕನ್ನಡ ಬರುತ್ತದೆ. ಬೆಂಗಳೂರಲ್ಲಿ ದೀಪಿಕಾ ಶಿಕ್ಷಣ ಪಡೆದಿದ್ದರು. ಅವರು ನಟಿಸಿದ ಮೊದಲ ಸಿನಿಮಾ ಕನ್ನಡದ್ದು. ಅವರು ಈ ಮೊದಲು ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ ಮಾಡಿದ್ದರು ಅನ್ನೋದು ವಿಶೇಷ.

ಕನ್ನಡದಲ್ಲೇ ದೀಪಿಕಾ ಎದುರು ಪ್ರೀತಿ ವ್ಯಕ್ತಪಡಿಸಿದ್ದ ರಣವೀರ್ ಸಿಂಗ್
ರಣವೀರ್-ದೀಪಿಕಾ
Follow us
| Updated By: ರಾಜೇಶ್ ದುಗ್ಗುಮನೆ

Updated on:Sep 11, 2024 | 9:01 AM

ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಹೆಣ್ಣು ಮಗುವಿನ ಪಾಲಕರಾಗಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದೀಪಿಕಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರಣವೀರ್ ಹಾಗೂ ದೀಪಿಕಾ ಪ್ರೀತಿ ಶುರುವಾಗಿದ್ದು ದಶಕಗಳ ಹಿಂದೆ. ಈಗ ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಅವರ ಕುಟುಂಬಕ್ಕೆ ಹೊಸ ಸದಸ್ಯೆಯ ಆಗಮನ ಆಗಿದ್ದು ಕುಟುಂಬದ ಖುಷಿ ಹೆಚ್ಚಿಸಿದೆ.

ದೀಪಿಕಾ ಪಡುಕೋಣೆ ಅವರು ಕರ್ನಾಟಕದವರು. ಅವರಿಗೆ ಕನ್ನಡ ಬರುತ್ತದೆ. ಬೆಂಗಳೂರಲ್ಲಿ ದೀಪಿಕಾ ಶಿಕ್ಷಣ ಪಡೆದಿದ್ದರು. ಅವರು ನಟಿಸಿದ ಮೊದಲ ಸಿನಿಮಾ ಕನ್ನಡದ್ದು. ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ರಣವೀರ್ ಸಿಂಗ್ ಅವರದ್ದು ಪಂಜಾಬಿ ಕುಟುಂಬ. ಅವರು ಕೆಲವೊಮ್ಮೆ ಬೆಂಗಳೂರಿಗೆ ಬಂದಿದ್ದಾರೆ ಅಷ್ಟೇ ಹೊರತು, ಕನ್ನಡದ ಟಚ್ ಇಲ್ಲ. ಅವರು ಈ ಮೊದಲು ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ ಮಾಡಿದ್ದರು ಅನ್ನೋದು ವಿಶೇಷ.

ಹೌದು, ರಣವೀರ್ ಸಿಂಗ್ ಕಾರ್ಯಕ್ರಮ ಒಂದಕ್ಕಾಗಿ ವೇದಿಕೆ ಏರಿದ್ದರು. ಅಲ್ಲಿ ಇದ್ದಿದ್ದು ಕನ್ನಡದ ಅಕುಲ್ ಬಾಲಾಜಿ. ಅವರು ಕನ್ನಡದ ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಆ ಶೋನ ಅಕುಲ್ ಅವರೇ ನಡೆಸಿಕೊಡುತ್ತಾ ಇದ್ದರು. ಈ ವೇಳೆ ರಣವೀರ್ ಸಿಂಗ್​ಗೆ ಕನ್ನಡದಲ್ಲಿ ಪ್ರಪೋಸ್ ಮಾಡೋದನ್ನು ಹೇಗೆ ಎಂದು ಹೇಳಿಕೊಟ್ಟಿದ್ದರು.

View this post on Instagram

A post shared by Asimiii (@asim000071)

‘ದೀಪಿಕಾ, ಓ ನನ್ನ ದೀಪಿಕಾ’ ಎಂದರು ಅಕುಲ್. ಆದರೆ ರಣವೀರ್​ ಸಿಂಗ್​ಗೆ ನಂಬಿಕೆ ಬರಲಿಲ್ಲ. ಏನೋ ಬೇರೆ ಹೇಳಿಕೊಡುತ್ತಿದ್ದಾರೆ ಎಂಬ ಅನುಮಾನ ರಣವೀರ್​ಗೆ ಮೂಡಿತು. ಈ ಕಾರಣದಿಂದಲೇ ‘ನಾನು ಈ ಮಾತನ್ನು ಹೇಳಲ್ಲ, ನನಗೆ ಮನೆಗೆ ಹೋಗಬೇಕು’ ಎಂದರು ಅವರು. ಆಗ, ಅಕುಲ್ ಅವರು ಬೇರೆ ಏನನ್ನೂ ಹೇಳಿಕೊಡಲ್ಲ ಎಂದು ಪ್ರಾಮಿಸ್ ಮಾಡಿದರು. ಅದರಂತೆಯೇ, ‘ದೀಪಿಕಾ, ಓ ನನ್ನ ದೀಪಿಕಾ, ನೀನೆ ನನ್ನ ಜೀವನದ ದೀಪ’ ಎಂದು ಅಕುಲ್ ಹೇಳಿಕೊಟ್ಟರು. ದೀಪ ಎನ್ನುತ್ತಿದ್ದಂತೆ ‘ಯು ಆರ್​ ದಿ ಲೈಟ್ ಆಫ್ ಮೈ ಲೈಫ್’ ಎಂದರು ರಣವೀರ್.

ಇದನ್ನೂ ಓದಿ: ದೀಪಿಕಾ ಪಡುಕೋಣೆ ಮಗುವಿಗಾಗಿ ದುಬೈನಲ್ಲಿ ಶಾಪಿಂಗ್ ಮಾಡಿ ಟ್ರೋಲ್ ಆದ ರಾಖಿ ಸಾವಂತ್

ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ 2018ರಲ್ಲಿ ಮದುವೆ ಆದರು. ಈಗ ಅವರು ಆರು ವರ್ಷಗಳ ಬಳಿಕ ತಂದೆ ಆಗಿದ್ದಾರೆ. ದೀಪಿಕಾ ಪಡುಕೋಣೆ ಮಗಳನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ದೀಪಿಕಾ ಸದ್ಯ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟಿದ್ದಾರೆ. ಈ ಮೊದಲು ಇವರು ವಿಚ್ಛೇದನ ಪಡೆಯುತ್ತಾರೆ ಎಂದೆಲ್ಲ ಸುದ್ದಿ ಆಗಿತ್ತು. ಆದರೆ, ಯಾವುದೂ ನಿಜ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:00 am, Wed, 11 September 24

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ