AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರನ್ಯಾ ಮನಸ್ಥಿತಿ ನೋಡಿದರೆ ಜೈಲಿನಲ್ಲಿ ಇರುವುದು ಸೂಕ್ತ’: ಡಿಆರ್​ಐ ಪರ ವಕೀಲರ ವಾದ

ಗೋಲ್ಡ್ ಸ್ಮಗ್ಲಿಂಗ್ ಆರೋಪಿ ರನ್ಯಾ ರಾವ್ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರಿಗೆ ಜಾಮೀನು ನೀಡಬಾರದು ಎಂದು ಡಿಆರ್​ಐ ಪರ ವಕೀಲರು ವಾದ ಮಾಡಿದ್ದಾರೆ. ಒಂದು ವೇಳೆ ಜಾಮೀನು ನೀಡಿದರೆ ಏನೆಲ್ಲ ತೊಂದರೆ ಆಗಲಿದೆ ಎಂಬುದನ್ನು ವಕೀಲರು ವಿವರಿಸಿದ್ದಾರೆ. ಜಾಮೀನು ಅರ್ಜಿ ವಿಚಾರಣೆಯ ಆದೇಶ ಮಾ.14ಕ್ಕೆ ಪ್ರಕಟ ಆಗಲಿದೆ.

‘ರನ್ಯಾ ಮನಸ್ಥಿತಿ ನೋಡಿದರೆ ಜೈಲಿನಲ್ಲಿ ಇರುವುದು ಸೂಕ್ತ’: ಡಿಆರ್​ಐ ಪರ ವಕೀಲರ ವಾದ
Ranya Rao
Ramesha M
| Updated By: ಮದನ್​ ಕುಮಾರ್​|

Updated on: Mar 12, 2025 | 6:24 PM

Share

ದುಬೈನಿಂದ ಚಿನ್ನ ಕಳ್ಳ ಸಾಗಣೆ (Gold Smuggling) ಮಾಡಿದ ಆರೋಪದಲ್ಲಿ ಸಿಕ್ಕಿ ಬಿದ್ದಿರುವ ನಟಿ ರನ್ಯಾ ರಾವ್ (Ranya Rao) ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಇಂದು (ಮಾರ್ಚ್​ 12) ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ಈ ಅರ್ಜಿ ವಿಚಾರಣೆ ನಡೆದಿದೆ. ಡಿಆರ್​ಐ (DRI) ಅಧಿಕಾರಿಗಳ ಪರ ವಕೀಲರು ಹಾಗೂ ರನ್ಯಾ ರಾವ್ ಪರ ವಕೀಲರ ವಾದವನ್ನು ಆಲಿಸಲಾಗಿದೆ. ರನ್ಯಾ ಅವರ ಜಾಮೀನು ಅರ್ಜಿ ಆದೇಶವನ್ನು ಮಾರ್ಚ್​​ 14ಕ್ಕೆ ಕಾಯ್ದಿರಿಸಲಾಗಿದೆ. ಅಲ್ಲಿಯವರೆಗೂ ರನ್ಯಾ ಅವರು ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯ ಆಗಿದೆ. ರನ್ಯಾಗೆ ಜಾಮೀನು ನೀಡಲೇಬಾರದು ಎಂದು ಡಿಆರ್​ಐ ಅಧಿಕಾರಿಗಳ ಪರ ವಕೀಲರಾದ ಮಧು ಎನ್. ರಾವ್​ ಅವರು ವಾದ ಮಂಡಿಸಿದ್ದಾರೆ.

‘ಮಹಿಳೆಯಾಗಿದ್ದರೂ ಆಕೆಯ ಕೃತ್ಯವನ್ನು ಪರಿಗಣಿಸಿ ಜಾಮೀನು ನಿರಾಕರಿಸಬೇಕು. ರಾಧಿಕಾ ಅಗರ್ವಾಲ್ ಕೇಸ್​ನ ಸುಪ್ರೀಂ ಕೋರ್ಟ್ ತೀರ್ಪು ಪರಿಗಣಿಸಬೇಕು. ದೇಶ ತೊರೆಯುವ ಸಾಧ್ಯತೆ ಇದೆ. ಸಾಕ್ಷ್ಯನಾಶದ ಸಾಧ್ಯತೆ ಪರಿಗಣಿಸಬಹುದು. ದೊಡ್ಡ ಮಟ್ಟದ ಸ್ಮಗ್ಲಿಂಗ್ ಆಗಿರುವುದನ್ನು ಪರಿಗಣಿಸಬೇಕು. ತನಿಖಾ ತಂಡ ಈ ಹಂತದಲ್ಲಿ ಸಂಗ್ರಹಿಸಿದ ದಾಖಲೆ ಸಂಶಯಿಸುವಂತಿಲ್ಲ. ಹೇಗಿದೆಯೋ ಹಾಗೆಯೇ ಕೋರ್ಟ್ ಅದನ್ನು ಪರಿಗಣಿಸಬೇಕು. ಆರ್ಟಿಕಲ್ 22ರಂತೆ ಬಂಧನಕ್ಕೆ ಕಾರಣಗಳನ್ನು ನೀಡಲಾಗಿದೆ. ಮಾರ್ಚ್​ 4ರಂದು 4 ಗಂಟೆಗೆ ಬಂಧಿಸಿ ಸಂಜೆ 7.15ಕ್ಕೆ ಮ್ಯಾಜಿಸ್ಟ್ರೇಟ್ ಮುಂದೆ‌ ಹಾಜರುಪಡಿಸಲಾಗಿದೆ’ ಎಂದು ಜಾನ್ ಮೊಸೆಸ್ ಕೇಸ್​ನಲ್ಲಿನ ತೀರ್ಪು ಉಲ್ಲೇಖಿಸಿ ಡಿಆರ್​ಐ ಪರ ವಕೀಲ ಮಧು ರಾವ್ ವಾದಿಸಿದ್ದಾರೆ.

‘ಕಸ್ಟಡಿ ಅವಧಿಯಲ್ಲಿ ರನ್ಯಾ ರಾವ್‌ ತನಿಖೆಗೆ ಸಹಕರಿಸಿಲ್ಲ. 2ನೇ ಆರೋಪಿಯನ್ನೂ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಮಾರ್ಚ್‌ 4ರ ಬೆಳಗ್ಗೆ ರನ್ಯಾ ರಾವ್‌ ಮನೆಯಲ್ಲಿ ಶೋಧ ನಡೆಸಲಾಯಿತು. 2.67 ಕೋಟಿ ನಗದು, 2.6 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ರನ್ಯಾ ರಾವ್‌ಗೆ ಜಾಮೀನು ನೀಡಲು ಯಾವುದೇ ಯೋಗ್ಯ ಕಾರಣಗಳಿಲ್ಲ. 12.56 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆಯಾಗಿದೆ. ಸ್ಟೇಟ್ ಪೊಲೀಸ್ ಪ್ರೋಟೋಕಾಲ್ ಆಫೀಸರ್ ನೆರವು ಪಡೆದು ಸ್ಮಗ್ಲಿಂಗ್ ಆಗಿದೆ. ಹೀಗಾಗಿ ಇದೊಂದು ಗಂಭೀರ ಅಪರಾಧವಾಗಿದೆ. ರನ್ಯಾ ಬಳಿ ದುಬೈ ನಿವಾಸಿಯಾಗಿರುವ ಐಡೆಂಟಿಟಿ ಕಾರ್ಡ್ ಇದೆ. ಆಕೆ ದೇಶ ಬಿಟ್ಟು ಪರಾರಿಯಾಗುವ ಸಾಧ್ಯತೆ ಇದೆ’ ಎಂದು ಡಿಆರ್​ಐ ಪರ ವಕೀಲರು ವಾದ ಮಾಡಿದ್ದಾರೆ.

ಇದನ್ನೂ ಓದಿ
Image
ಅಪ್ಪ ಪೋಲಿಸ್.. ಮಗಳು ಕಳ್ಳಿ.. ನಟಿ ರನ್ಯಾ ಚಿನ್ನದ ರಹಸ್ಯ!
Image
ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್​ನಲ್ಲಿ ಮಲತಂದೆ ಡಿಜಿಪಿಯ ಕೈವಾಡವೂ ಇತ್ತೇ?
Image
ರನ್ಯಾ ರಾವ್ ಪ್ರಕರಣ, ಚಿನ್ನ, ನಗದು ಸೇರಿ 17.29 ಕೋಟಿ ಪತ್ತೆ
Image
ಚಿನ್ನ ಕಳ್ಳಸಾಗಣೆ: ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್​ಗೆ ನ್ಯಾಯಾಂಗ ಬಂಧನ

ಇದನ್ನೂ ಓದಿ: ರನ್ಯಾ ಕಾರಣಕ್ಕೆ ಸುದೀಪ್​ಗೆ ಆದ ಕಷ್ಟ ಒಂದೆರಡಲ್ಲ: ಶಾಕಿಂಗ್ ವಿಚಾರ ತಿಳಿಸಿದ ರವಿ ಶ್ರೀವತ್ಸ

‘ಚಿನ್ನ ಕಳ್ಳಸಾಗಣೆಯ ಪ್ರಮಾಣವನ್ನೂ ಗಮನಿಸಬೇಕು. ಹವಾಲಾ ಮೂಲಕ ಚಿನ್ನದ ಬದಲು ನಗದು ವರ್ಗಾವಣೆ ಆಗಿದೆ. ಈ ಹವಾಲಾ ಬಗ್ಗೆಯೂ ತನಿಖೆ ನಡೆಸಬೇಕಿದೆ. ಇಷ್ಟು ಚಿನ್ನ ಖರೀದಿಸಲು ‌ಹಣ ಎಲ್ಲಿಂದ ಬಂತು? ಹಣ ಹೇಗೆ ವರ್ಗಾಯಿಸಲಾಯಿತು ಎಂಬ ಬಗ್ಗೆ ತನಿಖೆ ಅಗತ್ಯ. ಇದರಲ್ಲಿ ಸಿಂಡಿಕೇಟ್ ಭಾಗಿಯಾಗಿರುವ ಬಗ್ಗೆಯೂ ತನಿಖೆಯಾಗಬೇಕಿದೆ. ಪ್ರಾಥಮಿಕ ತನಿಖೆಯಲ್ಲಿ ಈಕೆಗೆ ಅಂತಾರಾಷ್ಟ್ರೀಯ ಲಿಂಕ್ ಬಗ್ಗೆಯೂ ಪರಿಶೀಲನೆ ಮಾಡಲಾಗಿದೆ. ಹವಾಲಾ ದಂಧೆ ಬಗ್ಗೆಯೂ ತನಿಖೆಯಾಗುತ್ತಿದೆ. ರಾಷ್ಟ್ರೀಯ ಭದ್ರತೆಯ ವಿಷಯವೂ ಇರುವುದರಿಂದ ಜಾಮೀನು ನೀಡಬಾರದು’ಎಂದು ವಾದ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ