AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರನ್ಯಾ ರಾವ್ ಪ್ರಕರಣಕ್ಕೆ ಇಡಿ ಎಂಟ್ರಿ; ಹೊರ ಬಿತ್ತು ಹವಾಲಾ ದಂಧೆ

ದುಬೈನಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸಿಕ್ಕಿಬಿದ್ದಿದ್ದಾರೆ. ಈಗ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಆರಂಭಿಸಿದೆ. ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಸಿಐಆರ್ ದಾಖಲಾಗಿದೆ.

ರನ್ಯಾ ರಾವ್ ಪ್ರಕರಣಕ್ಕೆ ಇಡಿ ಎಂಟ್ರಿ; ಹೊರ ಬಿತ್ತು ಹವಾಲಾ ದಂಧೆ
ರನ್ಯಾ
ರಾಚಪ್ಪಾಜಿ ನಾಯ್ಕ್
| Edited By: |

Updated on:Mar 13, 2025 | 3:01 PM

Share

ದುಬೈನಿಂದ ಅಕ್ರಮವಾಗಿ ಭಾರತಕ್ಕೆ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಕರಣ ಬಗೆದಷ್ಟು ದೊಡ್ಡದಾಗುತ್ತಾ ಇದೆ. ಈ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರು ಸಿಕ್ಕಿ ಬಿದ್ದಿದ್ದಾರೆ. ಸದ್ಯ ಅವರ ವಿಚಾರಣೆ ನಡೆಯುತ್ತಿದೆ. ಈಗ ಈ ಪ್ರಕರಣಕ್ಕೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಎಂಟ್ರಿ ಆಗಿದೆ. ಹೌದು, ರನ್ಯಾ ಪ್ರಕರಣದಲ್ಲಿ ಈಗ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕೂಡ ತನಿಖೆ ಆರಂಭಿಸಿದ್ದಾರೆ. ಅಕ್ರಮ ಹಣ ವರ್ಗಾವಣೆಯ ಸುಳಿವು ಸಿಕ್ಕ ಕಾರಣದಿಂದ ಇಡಿ ಅಧಿಕಾರಿಗಳು ಪ್ರಕರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಇಸಿಐಆರ್ ದಾಖಲು

ಇಷ್ಟು ದಿನ ರನ್ಯಾ ರಾವ್ ಕೇಸ್​ನಲ್ಲಿ ಸಿಬಿಐ ಅಧಿಕಾರಿಗಳು ಹಾಗೂ ಡಿಆರ್​ಐ ಅಧಿಕಾರಿಗಳು ಮಾತ್ರ ವಿಚಾರಣೆ ನಡೆಸುತ್ತಾ ಇದ್ದರು. ಈಗ ಕೇಸ್​ನಲ್ಲಿ ಇಡಿಯಿಂದ ಇಸಿಐಆರ್ ದಾಖಲಾಗಿದೆ. ಇಸಿಐಆರ್ ಎಂದರೆ ಎನ್​ಫೋರ್ಸ್​ಮೆಂಟ್ ಕೇಸ್ ಇನ್​ಫಾರ್ಮೇಷನ್ ರಿಪೋರ್ಟ್. ಅಕ್ರಮ ಹಣ ವರ್ಗಾವಣೆ ವಿಚಾರ ತಿಳಿದಿರುವುದರಿಂದ ಈ ಕೇಸ್ ದಾಖಲಾಗಿದೆ.

ಇಡಿ ದಾಳಿ

ಇಸಿಐಆರ್‌ ದಾಖಲಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನ ಹಲವು ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ರನ್ಯಾ ರಾವ್ ಫ್ಲ್ಯಾಟ್‌ ಮೇಲೆ ಈ ದಾಳಿ ನಡೆದಿದ್ದು, ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಯಾವೆಲ್ಲ ಮಾಹಿತಿ ಸಿಕ್ಕಿದೆ ಎಂಬ ವಿಚಾರ ಇನ್ನಷ್ಟೇ ರಿವೀಲ್ ಆಗಬೇಕಿದೆ.

ಇದನ್ನೂ ಓದಿ
Image
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
Image
ಬೇಸರದಲ್ಲಿರೋ ಸೋನು ನಿಗಮ್ ಬೆಂಬಲಕ್ಕೆ ನಿಂತ ಸಂಗೀತಾ ಶೃಂಗೇರಿ
Image
ಯಶ್​ ಬಗ್ಗೆ ಗುಣಗಾನ ಮಾಡಿದ ಹಾಲಿವುಡ್ ತಂತ್ರಜ್ಞ; ಕನ್ನಡ ಚಿತ್ರರಂಗದ ಹೆಮ್ಮೆ
Image
‘ಇದು ಸಿಂಹದ ಮರಿ’; ‘ಅಪ್ಪು’ 100ನೇ ದಿನದ ಸೆಲೆಬ್ರೇಷನ್​ನಲ್ಲಿ ರಜನಿ ಮಾತು

ಅಕ್ರಮ ಹಣ ವರ್ಗಾವಣೆ

ಗೋಲ್ಡ್​ ಸ್ಮಗ್ಲಿಂಗ್ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರೋದು ಮೇಲ್ನೋಟಕ್ಕೆ ದೃಢಪಟ್ಟಿದೆ. ಹಾವಾಲಾ ದಂಧೆ ಮೂಲಕ ಭಾರತದಿಂದ ಹಣ ದುಬೈಗೆ ಹೋಗುತ್ತಿತ್ತು. ಬಳಿಕ ಚಿನ್ನದ ಗಟ್ಟಿ ರೂಪದಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ‘ನಮಗೆ ಯಾವ ಒತ್ತಡ?’; ರನ್ಯಾ ರಾವ್ ಕೇಸ್​ನಲ್ಲಿ ಸಿಐಡಿ ತನಿಖೆ ಹಿಂಪಡೆದ ಬಗ್ಗೆ ಪರಮೇಶ್ವರ್ ಸ್ಪಷ್ಟನೆ

ತರುಣ್ ಮನೆ ಮೇಲೂ ದಾಳಿ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಎರಡನೇ ಆರೋಪಿ ತರುಣ್ ಕೊಂಡೂರು ರಾಜು ನಿವಾಸದ  ಮೇಲೂ ಇಡಿ ‌ದಾಳಿ ನಡೆದಿದೆ. ತರುಣ್ ರಾಜ್ ರನ್ಯಾ ಆಪ್ತ ಸ್ನೇಹಿತನಾಗಿದ್ದರು. ತೆಲುಗು ಸಿನಿಮಾದಲ್ಲಿ ಅವರು ಬ್ಯುಸಿ ಇದ್ದರು. ಮೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕ ನಟನಾಗಿ ತರುಣ್ ರಾಜ್ ನಟಿಸಿದ್ದರು. ತೆಲುಗಿನಲ್ಲಿ ಇವರು ವಿರಾಟ್ ಎಂದೇ ಫೇಮ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:42 pm, Thu, 13 March 25

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ