AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣು, ರಾಜ್, ಅಂಬಿ; ಒಂದೇ ವೇದಿಕೆ ಮೇಲೆ ಅಪೂರ್ವ ಸಂಗಮದ ಕ್ಷಣವಿದು

Vishnuvardhan Birthday: ವಿಷ್ಣುವರ್ಧನ್ ಅವರ 75ನೇ ಜನ್ಮದಿನ ಸಮೀಪಿಸುತ್ತಿದೆ. ರಾಜ್‌ಕುಮಾರ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿದ ಸಮಾರಂಭದ ಅಪರೂಪದ ವಿಡಿಯೋ ಇದೆ. ಈ ವಿಡಿಯೋದಲ್ಲಿ ವಿಷ್ಣುವರ್ಧನ್, ರಾಜ್‌ಕುಮಾರ್ ಮತ್ತು ಅಂಬರೀಶ್ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ವಿಷ್ಣುವರ್ಧನ್ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಸಿದ್ಧರಾಗಿದ್ದಾರೆ.

ವಿಷ್ಣು, ರಾಜ್, ಅಂಬಿ; ಒಂದೇ ವೇದಿಕೆ ಮೇಲೆ ಅಪೂರ್ವ ಸಂಗಮದ ಕ್ಷಣವಿದು
ಅಂಬಿ, ಪಾರ್ವತಮ್ಮ, ರಾಜ್,ವಿಷ್ಣು
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 16, 2025 | 7:38 AM

Share

ವಿಷ್ಣುವರ್ಧನ್ (Vishnuvardhan) ಜನ್ಮದಿನ ಸಮೀಪಿಸಿದೆ. ಸೆಪ್ಟೆಂಬರ್ 18 ವಿಷ್ಣು ಜನ್ಮದಿನ. ಅವರು ಇದ್ದಿದ್ದರೆ ಇಂದಿಗೆ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ, ಇಂದು ಅವರು ನಮ್ಮ ಜೊತೆ ಇಲ್ಲ. ಅವರ ನೆನಪುಗಳು ಸದಾ ನಮ್ಮ ಜೊತೆ ಇರುವಂಥದ್ದು. ಅವರ ಬರ್ತ್​ಡೇ ಸಮೀಪಿಸುತ್ತಿದ್ದಂತೆ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಒಂದೇ ವೇದಿಕೆ ಮೇಲೆ ವಿಷ್ಣುವರ್ಧನ್, ರಾಜ್​ಕುಮಾರ್, ಅಂಬರೀಷ್ ಕಾಣಿಸಿಕೊಂಡಿದ್ದರು. ಈ ಅಪೂರ್ವ ಸಂಗದಮ ವಿಡಿಯೋ ಇಲ್ಲಿದೆ.

ರಾಜ್​ಕುಮಾರ್ ಹಾಗೂ ವಿಷ್ಣುವರ್ಧನ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ವದಂತಿ ಚಿತ್ರರಂಗದಲ್ಲಿ ಚಾಲ್ತಿಯಲ್ಲಿ ಇತ್ತು. ಆ ಮಾತು ಈಗಲೂ ನಂಬಿಕೆಗೆ ಅರ್ಹವಾದುದ್ದು ಅಲ್ಲ. ಏಕೆಂದರೆ ವೇದಿಕೆ ಮೇಲೆ ಸಿಕ್ಕಾಗ ವಿಷ್ಣು ಹಾಗೂ ರಾಜ್ ಆಪ್ತತೆಯಿಂದಲೇ ಮಾತನಾಡುತ್ತಿದ್ದರು. ಅದಕ್ಕೆ ಈ ವಿಡಿಯೋ ಉತ್ತಮ ಉದಾಹರಣೆ.

ರಾಜ್​ಕುಮಾರ್ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಕೇಂದ್ರ ಸರ್ಕಾರ ಗೌರವಿಸಿತ್ತು. ಈ ಗೌರವದ ಬಳಿಕ ರಾಜ್​ಕುಮಾರ್ ಅವರಿಗೆ ಸನ್ಮಾನ ಮಾಡುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಮೇಲೆ ಅಂಬರೀಷ್, ವಿಷ್ಣುವರ್ಧನ್ ಹಾಗೂ ರಾಜ್​ಕುಮಾರ್ ಇದ್ದರು.

ಇದನ್ನೂ ಓದಿ
Image
ಸಿನಿಮಾ ಪ್ರಚಾರಕ್ಕಾಗಿ ಇಷ್ಟು ಕೀಳು ಮಟ್ಟಕ್ಕೆ ಇಳಿಬಾರದು; ಧನುಶ್​ಗೆ ಛೀಮಾರಿ
Image
‘ಸು ಫ್ರಮ್ ಸೋ’ ಬಳಿಕ ಮತ್ತೊಂದು ಹಿಟ್ ಚಿತ್ರ; ‘ಏಳುಮಲೆ’ ಕಲೆಕ್ಷನ್ ಎಷ್ಟು?
Image
ರೇಣುಕಾಸ್ವಾಮಿ ಪತ್ನಿ ಸಹನಾಗೆ ಸಿಗಲಿದೆ ಸರ್ಕಾರಿ ಕೆಲಸ; ಶಾಸಕನ ಭರವಸೆ
Image
ಕಿರುತೆರೆ ನಟಿಯ ಪತಿ​ಗೆ ಕಾರು ಅಪಘಾತ; ಪ್ರಾಣಾಪಾಯದಿಂದ ಜಸ್ಟ್ ಮಿಸ್

ರಾಜ್​ಕುಮಾರ್ ಬಗ್ಗೆ ವಿಷ್ಣು ಮಾತನಾಡಿದ್ದರು. ‘ನಮ್ಮ ನೆಚ್ಚಿನ ರಾಜಣ್ಣ ಅವರು ಇಂದಿನ ಕಾರ್ಯಕ್ರಮದ ಕೇಂದ್ರ ಬಿಂದು. ಭಾವನೆ ಮಿತಿ ಮೀರಿದಾಗ, ಮನಸ್ಸು ತುಂಬಿ ಬಂದಾಗ ಮಾತು ಬರೋದಿಲ್ಲ. ರಾಜಣ್ಣಗೆ ಸನ್ಮಾನ ಮಾಡಿದ ಸರ್ಕಾರಕ್ಕೆ ಅಭಿನಂದನೆ ಹೇಳುತ್ತೇನೆ. ನನಗೆ ಮಾತನಾಡಲು ಬಾಯೇ ಬರುತ್ತಿಲ್ಲ’ ಎಂದು ವಿಷ್ಣುವರ್ಧನ್ ಮಾತು ಮುಗಿಸಿದ್ದರು.

ಇದನ್ನೂ ಓದಿ: ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್

ವಿಷ್ಣುವರ್ಧನ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಹಲವು ಸಿನಿಮಾಗಳನ್ನು ಕೂಡ ಅವರಿಗೆ ನೀಡಲಾಗಿದೆ. ಈ ವರ್ಷ ಅವರಿಗೆ ಕರ್ನಾಟಕ ರತ್ನ ಅವಾರ್ಡ್ ಕೂಡ ನೀಡಲಾಗಿದೆ ಎಂಬುದು ವಿಶೇಷ. ಈ ಕಾರಣದಿಂದಲೂ ಅವರ ಜನ್ಮದಿನ ಸಾಕಷ್ಟು ವಿಶೇಷ ಎನಿಸಿಕೊಂಡಿದೆ. ಅವರ ಸ್ಮಾರಕ ವಿವಾದ ಒಂದು ಬಗೆಹರಿದರೆ ಅವರ ಅಭಿಮಾನಿಗಳಿಗೂ ನೆಮ್ಮದಿ ಸಿಕ್ಕಂತಾಗುತ್ತದೆ. ಈ ವರ್ಷ ಅವರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಇದಕ್ಕೆ ಅವರ ಅಭಿಮಾನಿ ಬಳಗ ರೆಡಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:37 am, Tue, 16 September 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!