AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪದ ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ; ಇವರಿಗೆ ಸರಿಸಾಟಿ ಯಾರು?

2018ರಲ್ಲಿ ತೆರೆಗೆ ಬಂದ ‘ಗೀತ ಗೋವಿಂದಂ' ಸಿನಿಮಾದಲ್ಲಿ ವಿಜಯ್ ದೇವರಕೊಂಡ ಜತೆ ತೆರೆ ಹಂಚಿಕೊಂಡರು. ಈ ಸಿನಿಮಾ ಹಿಟ್ ಆಗಿದ್ದರಿಂದ ರಶ್ಮಿಕಾ ಖ್ಯಾತಿ ಸಾಕಷ್ಟು ಹೆಚ್ಚಾಯಿತು.

ಅಪರೂಪದ ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ; ಇವರಿಗೆ ಸರಿಸಾಟಿ ಯಾರು?
ರಶ್ಮಿಕಾ
TV9 Web
| Edited By: |

Updated on:May 02, 2022 | 5:04 PM

Share

ನಟಿ ರಶ್ಮಿಕಾ ಮಂದಣ್ಣ ಅವರು (Rashmika Mandanna) ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದ ಅವರು, ತೆಲುಗು, ತಮಿಳಿನಲ್ಲಿ ಹೆಸರು ಮಾಡಿದ್ದಾರೆ. ಬಾಲಿವುಡ್ (Bollywood) ಸಿನಿಮಾಗಳನ್ನು ಒಪ್ಪಿಕೊಂಡಿದ್ದು, ಈ ಚಿತ್ರಗಳು ಇನ್ನಷ್ಟೇ ತೆರೆಗೆ ಬರಬೇಕಿದೆ. ಕನ್ನಡದ ನಟಿಯಾಗಿ ರಶ್ಮಿಕಾ ಮಂದಣ್ಣ ಅವರು ಅಪರೂಪದ ಸಾಧನೆ ಒಂದನ್ನು ಮಾಡಿದ್ದಾರೆ. ಈ ಸಾಧನೆಯನ್ನು ಸ್ಯಾಂಡಲ್​ವುಡ್​ನ (Sandalwood) ಯಾವ ನಟಿಯೂ ಮಾಡಿಲ್ಲ ಅನ್ನೋದು ವಿಶೇಷ. ಹಾಗಾದರೆ, ಅವರು ಮಾಡಿದ ಸಾಧನೆ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಕ್ಷಿತ್ ಶೆಟ್ಟಿ ನಟನೆಯ ‘ಕಿರಿಕ್​ ಪಾರ್ಟಿ’ ಮೂಲಕ ರಶ್ಮಿಕಾ ಮಂದಣ್ಣ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರು ಪುನೀತ್ ರಾಜ್​ಕುಮಾರ್ (ಅಂಜನಿ ಪುತ್ರ), ಗಣೇಶ್​ (ಚಮಕ್) ಜತೆ ತೆರೆ ಹಂಚಿಕೊಂಡರು. ಆ ಬಳಿಕ ‘ಚಲೋ’ ಚಿತ್ರದ ಮೂಲಕ ತೆಲುಗಿನಲ್ಲಿ ಅವರು ಖಾತೆ ತೆಗೆದರು. 2018ರಲ್ಲಿ ತೆರೆಗೆ ಬಂದ ‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಜತೆ ತೆರೆ ಹಂಚಿಕೊಂಡರು. ಈ ಸಿನಿಮಾ ಹಿಟ್ ಆಗಿದ್ದರಿಂದ ರಶ್ಮಿಕಾ ಖ್ಯಾತಿ ಸಾಕಷ್ಟು ಹೆಚ್ಚಾಯಿತು.

ಅಕ್ಕಿನೇನಿ ನಾಗಾರ್ಜುನ ಹಾಗೂ ನಾನಿ ನಟನೆಯ ‘ದೇವದಾಸ್​’ ಸಿನಿಮಾದಲ್ಲಿ ರಶ್ಮಿಕಾ ನಟಿಸಿದರು. ‘ಭಿಷ್ಮ’ ಸಿನಿಮಾದಲ್ಲಿ ನಿತಿನ್ ಜತೆ ನಟಿಸಿದರು. ಕನ್ನಡದ ಧ್ರುವ ಸರ್ಜಾ (ಪೊಗರು), ತಮಿಳಲ್ಲಿ ಕಾರ್ತಿ (ಸುಲ್ತಾನ್) ತೆಲುಗಿನಲ್ಲಿ ಮಹೇಶ್ ಬಾಬು (ಸರಿಲೇರು ನೀಕೆವ್ವರು), ಅಲ್ಲು ಅರ್ಜುನ್ (ಪುಷ್ಪ) ಜತೆ ರಶ್ಮಿಕಾ ನಟಿಸಿದರು. ಇದಾದ ಬಳಿಕ ಬಾಲಿವುಡ್​ನಲ್ಲಿ ರಶ್ಮಿಕಾಗೆ ಬೇಡಿಕೆ ಹೆಚ್ಚಿತು.

ಸಿದ್ದಾರ್ಥ್​ ಮಲ್ಹೋತ್ರಾ (ಮಿಷನ್​ ಮಜ್ನು) ಹಾಗೂ ಅಮಿತಾಭ್​ ಬಚ್ಚನ್​ (ಗುಡ್​ಬೈ) ಚಿತ್ರಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇವರ ಜತೆಗಿನ ಸಿನಿಮಾ ಕೆಲಸಗಳು ಬಹುತೇಕ ಪೂರ್ಣಗೊಂಡಿದ್ದು, ರಿಲೀಸ್​ಗೆ ರೆಡಿ ಆಗಿದೆ. ಇದಲ್ಲದೆ, ಮಲಯಾಳಂ ನಟ ದುಲ್ಖರ್ ಸಲ್ಮಾನ್​, ತಮಿಳಿನ ದಳಪತಿ ವಿಜಯ್ ಚಿತ್ರಕ್ಕೂ ರಶ್ಮಿಕಾ ನಾಯಕಿ. ವೃತ್ತಿ ಬದುಕಿನಲ್ಲಿ ಕನ್ನಡದ ನಟಿಯೊಬ್ಬರು ಇಷ್ಟೊಂದು ಸ್ಟಾರ್ ನಟರ ಜತೆ ತೆರೆ ಹಂಚಿಕೊಂಡಿದ್ದು ಇದೇ ಮೊದಲು ಎನ್ನಬಹುದು. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿದೆ. ‘ಅವರಿಗೆ ಸರಿಸಾಟಿ ಯಾರೂ ಇಲ್ಲ’ ಎನ್ನುವ ಮಾತು ಅಭಿಮಾನಿಗಳ ಕಡೆಯಿಂದ ಕೇಳಿ ಬರುತ್ತಿದೆ.

ಇದನ್ನೂ ಓದಿ: ಶೀಘ್ರವೇ ಆರಂಭಗೊಳ್ಳಲಿದೆ ‘ಕಾಫಿ ವಿತ್ ಕರಣ್’ ಶೋ; ಅತಿಥಿಯಾಗಿ ಬರಲಿದ್ದಾರೆ ರಶ್ಮಿಕಾ ಮಂದಣ್ಣ

Rashmika Mandanna: ರಶ್ಮಿಕಾ ಮಂದಣ್ಣ ರಿಜೆಕ್ಟ್ ಮಾಡಿದ್ದ ಈ ಸಿನಿಮಾಗಳು ಸೋತಿದ್ದು ಹಾಗೀಗಲ್ಲ

Published On - 3:20 pm, Mon, 2 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್