AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರರ್ ಶೈಲಿಯಲ್ಲಿ ಮೂಡಿ ಬರಲಿದೆ ರಶ್ಮಿಕಾ ಮಂದಣ್ಣ ಹೊಸ ಸಿನಿಮಾ

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ರಿಲೀಸ್ ದಿನಾಂಕ ಡಿಸೆಂಬರ್​​ ತಿಂಗಳಿಗೆ ಹೋಗಿದೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ಹೊಸ ಬಾಲಿವುಡ್ ಸಿನಿಮಾ ಘೋಷಣೆ ಮಾಡಿದ್ದಾರೆ.

ಹಾರರ್ ಶೈಲಿಯಲ್ಲಿ ಮೂಡಿ ಬರಲಿದೆ ರಶ್ಮಿಕಾ ಮಂದಣ್ಣ ಹೊಸ ಸಿನಿಮಾ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jun 26, 2024 | 12:01 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸ್ಯಾಂಡಲ್​ವುಡ್ ನಟಿಯಾಗಿ ಉಳಿದುಕೊಂಡಿಲ್ಲ. ಅವರಿಗೆ ಪರಭಾಷೆಯಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿದೆ. ಅಲ್ಲಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರಿಗೆ ಹೊಸ ಸಿನಿಮಾ ಆಫರ್ ಸಿಕ್ಕಿದೆ. ಹಿಂದಿಯಲ್ಲಿ ರಶ್ಮಿಕಾ ಹಾರರ್ ಕಾಮಿಡಿ ಶೈಲಿಯ ಸಿನಿಮಾ ಮಾಡೋಕೆ ಮುಂದಾಗಿದ್ದಾರೆ. ಈ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಸುದ್ದಿ ಒಂದು ಹರಿದಾಡಿದೆ.

‘ಮುಂಜ್ಯ’ ಚಿತ್ರ ಇತ್ತೀಚೆಗೆ ರಿಲೀಸ್ ಆಗಿ ಗೆಲುವು ಕಂಡಿದೆ. ಈ ಚಿತ್ರವನ್ನು ಆದಿತ್ಯ ಸರ್ಪೋತ್​ದಾರ್ ನಿರ್ದೇಶನ ಮಾಡಿದ್ದಾರೆ. ದಿನೇಶ್ ವಿಜನ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಸಿನಿಮಾ ಹಾರರ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿತ್ತು. ಈಗ ಇಬ್ಬರೂ ಸೇರಿ ಮತ್ತೊಂದು ಚಿತ್ರಕ್ಕೆ ಒಂದಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಆಯುಷ್ಮಾನ್ ಖುರಾನಾ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಾಗಿ ನಟಿಸಲಿದ್ದಾರೆ.  ಹಾರರ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರಲಿದೆ.

ದಿನೇಶ್ ವಿಜನ್ ಹಾಗೂ ಆದಿತ್ಯ ಅವರು ಹೊಸ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಮೊದಲು ಆಯುಷ್ಮಾನ್ ಹಾಗೂ ದಿನೇಶ್ ಅವರು ‘ಬಾಲಾ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಹೀಗಾಗಿ, ಇವರು ಮತ್ತೊಮ್ಮೆ ಕುಳಿತು ಮಾತುಕತೆ ನಡೆಸಿದ್ದಾರೆ. ಈ ವರ್ಷಾಂತ್ಯಕ್ಕೆ ಸಿನಿಮಾ ಸೆಟ್ಟೇರೋ ಸಾಧ್ಯತೆ ಇದೆ.

ಆಯುಷ್ಮಾನ್ ಖುರಾನಾ ಹಾಗೂ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ಒಂದಾಗುತ್ತಿದ್ದಾರೆ. ಇವರಿಗೆ ಭಿನ್ನ ಪಾತ್ರಗಳನ್ನು ನೀಡಲಾಗಿದೆ ಎಂದು ವರದಿ ಆಗಿದೆ. ಈ ಸಿನಿಮಾದ ಸ್ಕ್ರಿಪ್ಟ್ ಸಖತ್ ಗಟ್ಟಿಯಾಗಿದೆಯಂತೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ಇದನ್ನೂ ಓದಿ:ಸ್ನೇಹಿತೆಯ ಮದುವೆಯಲ್ಲಿ ಕೊಡವ ಶೈಲಿಯ ಸೀರೆ ಧರಿಸಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾ ಕೆಲಸ ಪೂರ್ಣಗೊಳ್ಳದ ಕಾರಣ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಇನ್ನೂ ಕೆಲವು ಸಿನಿಮಾಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!