ಹಾರರ್ ಶೈಲಿಯಲ್ಲಿ ಮೂಡಿ ಬರಲಿದೆ ರಶ್ಮಿಕಾ ಮಂದಣ್ಣ ಹೊಸ ಸಿನಿಮಾ

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ರಿಲೀಸ್ ದಿನಾಂಕ ಡಿಸೆಂಬರ್​​ ತಿಂಗಳಿಗೆ ಹೋಗಿದೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ಹೊಸ ಬಾಲಿವುಡ್ ಸಿನಿಮಾ ಘೋಷಣೆ ಮಾಡಿದ್ದಾರೆ.

ಹಾರರ್ ಶೈಲಿಯಲ್ಲಿ ಮೂಡಿ ಬರಲಿದೆ ರಶ್ಮಿಕಾ ಮಂದಣ್ಣ ಹೊಸ ಸಿನಿಮಾ
ರಶ್ಮಿಕಾ
Follow us
|

Updated on: Jun 26, 2024 | 12:01 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸ್ಯಾಂಡಲ್​ವುಡ್ ನಟಿಯಾಗಿ ಉಳಿದುಕೊಂಡಿಲ್ಲ. ಅವರಿಗೆ ಪರಭಾಷೆಯಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿದೆ. ಅಲ್ಲಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರಿಗೆ ಹೊಸ ಸಿನಿಮಾ ಆಫರ್ ಸಿಕ್ಕಿದೆ. ಹಿಂದಿಯಲ್ಲಿ ರಶ್ಮಿಕಾ ಹಾರರ್ ಕಾಮಿಡಿ ಶೈಲಿಯ ಸಿನಿಮಾ ಮಾಡೋಕೆ ಮುಂದಾಗಿದ್ದಾರೆ. ಈ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಸುದ್ದಿ ಒಂದು ಹರಿದಾಡಿದೆ.

‘ಮುಂಜ್ಯ’ ಚಿತ್ರ ಇತ್ತೀಚೆಗೆ ರಿಲೀಸ್ ಆಗಿ ಗೆಲುವು ಕಂಡಿದೆ. ಈ ಚಿತ್ರವನ್ನು ಆದಿತ್ಯ ಸರ್ಪೋತ್​ದಾರ್ ನಿರ್ದೇಶನ ಮಾಡಿದ್ದಾರೆ. ದಿನೇಶ್ ವಿಜನ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಸಿನಿಮಾ ಹಾರರ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿತ್ತು. ಈಗ ಇಬ್ಬರೂ ಸೇರಿ ಮತ್ತೊಂದು ಚಿತ್ರಕ್ಕೆ ಒಂದಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಆಯುಷ್ಮಾನ್ ಖುರಾನಾ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಾಗಿ ನಟಿಸಲಿದ್ದಾರೆ.  ಹಾರರ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರಲಿದೆ.

ದಿನೇಶ್ ವಿಜನ್ ಹಾಗೂ ಆದಿತ್ಯ ಅವರು ಹೊಸ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಮೊದಲು ಆಯುಷ್ಮಾನ್ ಹಾಗೂ ದಿನೇಶ್ ಅವರು ‘ಬಾಲಾ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಹೀಗಾಗಿ, ಇವರು ಮತ್ತೊಮ್ಮೆ ಕುಳಿತು ಮಾತುಕತೆ ನಡೆಸಿದ್ದಾರೆ. ಈ ವರ್ಷಾಂತ್ಯಕ್ಕೆ ಸಿನಿಮಾ ಸೆಟ್ಟೇರೋ ಸಾಧ್ಯತೆ ಇದೆ.

ಆಯುಷ್ಮಾನ್ ಖುರಾನಾ ಹಾಗೂ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ಒಂದಾಗುತ್ತಿದ್ದಾರೆ. ಇವರಿಗೆ ಭಿನ್ನ ಪಾತ್ರಗಳನ್ನು ನೀಡಲಾಗಿದೆ ಎಂದು ವರದಿ ಆಗಿದೆ. ಈ ಸಿನಿಮಾದ ಸ್ಕ್ರಿಪ್ಟ್ ಸಖತ್ ಗಟ್ಟಿಯಾಗಿದೆಯಂತೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ಇದನ್ನೂ ಓದಿ:ಸ್ನೇಹಿತೆಯ ಮದುವೆಯಲ್ಲಿ ಕೊಡವ ಶೈಲಿಯ ಸೀರೆ ಧರಿಸಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾ ಕೆಲಸ ಪೂರ್ಣಗೊಳ್ಳದ ಕಾರಣ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಇನ್ನೂ ಕೆಲವು ಸಿನಿಮಾಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ