Rashmika Mandanna: ಮುಂಬೈ ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ದೇವರಕೊಂಡ​ ; ಮುಖ ಮುಚ್ಚಿಕೊಂಡ ನಟ ​

Rashmika Mandanna-Vijay Deverakonda: ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ಇಬ್ಬರೂ ತಮ್ಮ ತಮ್ಮ ಸಿನಿಮಾ ಕೆಲಸಗಳಿಗಾಗಿ ಮುಂಬೈಗೆ ತೆರಳಿದ್ದಾರೆ. ಈ ವೇಳೆ ಇಬ್ಬರೂ ಬಿಡುವು ಮಾಡಿಕೊಂಡು ಮೀಟ್​ ಆಗುತ್ತಿದ್ದಾರೆ.

Rashmika Mandanna: ಮುಂಬೈ ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ದೇವರಕೊಂಡ​ ; ಮುಖ ಮುಚ್ಚಿಕೊಂಡ ನಟ ​
ವಿಜಯ್​ ದೇವರಕೊಂಡ -ರಶ್ಮಿಕಾ ಮಂದಣ್ಣ
Follow us
|

Updated on:Apr 18, 2021 | 7:43 PM

ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಇಬ್ಬರೂ ಮುಂಬೈನಲ್ಲಿದ್ದಾರೆ. ಸಮಯ ಸಿಕ್ಕಾಗೆಲ್ಲ ಇಬ್ಬರೂ ಮೀಟ್​ ಆಗುತ್ತಿದ್ದಾರೆ. ಈಗ ವಿಜಯ್​ ಹಾಗೂ ರಶ್ಮಿಕಾ ಒಟ್ಟಾಗಿ ಜಿಮ್​ಗೆ ತೆರಳಿ ವೌರ್ಕ್​ಔಟ್​ ಮಾಡಿದ್ದಾರೆ. ಜಿಮ್​ನಿಂದ ಹೊರ ಬರುವಾಗ ಅವರು ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು, ಫೋಟೋಗಳು ವೈರಲ್​ ಆಗಿವೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ಒಟ್ಟಿಗೆ ಜಿಮ್​ನಿಂದ ಹೊರ ಬಂದಿದ್ದಾರೆ. ಅಚ್ಚರಿ ಎಂದರೆ, ವಿಜಯ್​ ದೇವರಕೊಂಡ ಮುಖಕ್ಕೆ ಮಾಸ್ಕ್​ ಹಾಕಿದ್ದು ಮಾತ್ರವಲ್ಲ ಸಂಪೂರ್ಣವಾಗಿ ಮುಖವನ್ನು ಕ್ಯಾಪ್​ನಿಂದ ಮುಚ್ಚಿಕೊಂಡಿದ್ದಾರೆ. ರಶ್ಮಿಕಾ ಮನಸ್ಪೂರ್ತಿಯಾಗಿ ನಗುತ್ತಿದ್ದಾರೆ. ಜಿಮ್​ ಹೊರಗೆ ಮಾಧ್ಯಮಗಳು ಕ್ಯಾಮರಾ ಕಂಡಿದ್ದೇ ಇಬ್ಬರೂ ಕಾರನ್ನು ಏರಿ ತೆರಳಿದ್ದಾರೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ಇಬ್ಬರೂ ತಮ್ಮ ತಮ್ಮ ಸಿನಿಮಾ ಕೆಲಸಗಳಿಗಾಗಿ ಮುಂಬೈಗೆ ತೆರಳಿದ್ದಾರೆ. ಈ ವೇಳೆ ಇಬ್ಬರೂ ಬಿಡುವು ಮಾಡಿಕೊಂಡು ಮೀಟ್​ ಆಗುತ್ತಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿ ಒಟ್ಟಾಗಿ ಊಟ ಸವಿದಿದ್ದರು. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

ಸಿನಿಮಾ ವಿಚಾರಕ್ಕೆ ಬರುವುದಾದರೆ ವಿಜಯ್​, ಲೈಗರ್​ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅನನ್ಯಾ ಪಾಂಡೆ ಚಿತ್ರದ ನಾಯಕಿ. ಪುರಿ ಜಗನ್ನಾಥ್​ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸೆಪ್ಟೆಂಬರ್​ 9ರಂದು ಸಿನಿಮಾ ತೆರೆಗೆ ಬರುತ್ತಿದೆ. ರಶ್ಮಿಕಾ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಹಿಂದಿಯಲ್ಲಿ ಸಿದ್ಧಾರ್ಥ್​ ಮಲ್ಹೋತ್ರಾ ಅಭಿನಯದ ಮಿಷನ್​ ಮಜ್ನು ಚಿತ್ರದಲ್ಲಿ ನಟಿಸುತ್ತಿದ್ದಾರೆ. ತೆಲುಗಿನ ಪುಷ್ಪ ಚಿತ್ರದ ಶೂಟಿಂಗ್​ನಲ್ಲೂ ಅವರು ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: Rashmika Mandanna: ಮೆಕ್​ಡೊನಾಲ್ಡ್ ಇಂಡಿಯಾ ಬ್ರ್ಯಾಂಡ್ ಅಂಬಾಸಡರ್ ಆಗಿ ನೇಮಕವಾದ ರಶ್ಮಿಕಾ ಮಂದಣ್ಣ

Rashmika Mandanna: ರಶ್ಮಿಕಾಗೆ ಬಾಲಿವುಡ್​ನಲ್ಲಿ ಬೆಂಬಲವಾಗಿ ನಿಂತ ಸಿದ್ಧಾರ್ಥ್ ಮಲ್ಹೋತ್ರ! ಅನುಭವ ಹಂಚಿಕೊಂಡ ಕಿರಿಕ್​ ಬೆಡಗಿ

Published On - 7:02 pm, Sun, 18 April 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ