AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮುಂಬೈ ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ದೇವರಕೊಂಡ​ ; ಮುಖ ಮುಚ್ಚಿಕೊಂಡ ನಟ ​

Rashmika Mandanna-Vijay Deverakonda: ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ಇಬ್ಬರೂ ತಮ್ಮ ತಮ್ಮ ಸಿನಿಮಾ ಕೆಲಸಗಳಿಗಾಗಿ ಮುಂಬೈಗೆ ತೆರಳಿದ್ದಾರೆ. ಈ ವೇಳೆ ಇಬ್ಬರೂ ಬಿಡುವು ಮಾಡಿಕೊಂಡು ಮೀಟ್​ ಆಗುತ್ತಿದ್ದಾರೆ.

Rashmika Mandanna: ಮುಂಬೈ ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ದೇವರಕೊಂಡ​ ; ಮುಖ ಮುಚ್ಚಿಕೊಂಡ ನಟ ​
ವಿಜಯ್​ ದೇವರಕೊಂಡ -ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on:Apr 18, 2021 | 7:43 PM

Share

ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಇಬ್ಬರೂ ಮುಂಬೈನಲ್ಲಿದ್ದಾರೆ. ಸಮಯ ಸಿಕ್ಕಾಗೆಲ್ಲ ಇಬ್ಬರೂ ಮೀಟ್​ ಆಗುತ್ತಿದ್ದಾರೆ. ಈಗ ವಿಜಯ್​ ಹಾಗೂ ರಶ್ಮಿಕಾ ಒಟ್ಟಾಗಿ ಜಿಮ್​ಗೆ ತೆರಳಿ ವೌರ್ಕ್​ಔಟ್​ ಮಾಡಿದ್ದಾರೆ. ಜಿಮ್​ನಿಂದ ಹೊರ ಬರುವಾಗ ಅವರು ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು, ಫೋಟೋಗಳು ವೈರಲ್​ ಆಗಿವೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ಒಟ್ಟಿಗೆ ಜಿಮ್​ನಿಂದ ಹೊರ ಬಂದಿದ್ದಾರೆ. ಅಚ್ಚರಿ ಎಂದರೆ, ವಿಜಯ್​ ದೇವರಕೊಂಡ ಮುಖಕ್ಕೆ ಮಾಸ್ಕ್​ ಹಾಕಿದ್ದು ಮಾತ್ರವಲ್ಲ ಸಂಪೂರ್ಣವಾಗಿ ಮುಖವನ್ನು ಕ್ಯಾಪ್​ನಿಂದ ಮುಚ್ಚಿಕೊಂಡಿದ್ದಾರೆ. ರಶ್ಮಿಕಾ ಮನಸ್ಪೂರ್ತಿಯಾಗಿ ನಗುತ್ತಿದ್ದಾರೆ. ಜಿಮ್​ ಹೊರಗೆ ಮಾಧ್ಯಮಗಳು ಕ್ಯಾಮರಾ ಕಂಡಿದ್ದೇ ಇಬ್ಬರೂ ಕಾರನ್ನು ಏರಿ ತೆರಳಿದ್ದಾರೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ಇಬ್ಬರೂ ತಮ್ಮ ತಮ್ಮ ಸಿನಿಮಾ ಕೆಲಸಗಳಿಗಾಗಿ ಮುಂಬೈಗೆ ತೆರಳಿದ್ದಾರೆ. ಈ ವೇಳೆ ಇಬ್ಬರೂ ಬಿಡುವು ಮಾಡಿಕೊಂಡು ಮೀಟ್​ ಆಗುತ್ತಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿ ಒಟ್ಟಾಗಿ ಊಟ ಸವಿದಿದ್ದರು. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

ಸಿನಿಮಾ ವಿಚಾರಕ್ಕೆ ಬರುವುದಾದರೆ ವಿಜಯ್​, ಲೈಗರ್​ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅನನ್ಯಾ ಪಾಂಡೆ ಚಿತ್ರದ ನಾಯಕಿ. ಪುರಿ ಜಗನ್ನಾಥ್​ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸೆಪ್ಟೆಂಬರ್​ 9ರಂದು ಸಿನಿಮಾ ತೆರೆಗೆ ಬರುತ್ತಿದೆ. ರಶ್ಮಿಕಾ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಹಿಂದಿಯಲ್ಲಿ ಸಿದ್ಧಾರ್ಥ್​ ಮಲ್ಹೋತ್ರಾ ಅಭಿನಯದ ಮಿಷನ್​ ಮಜ್ನು ಚಿತ್ರದಲ್ಲಿ ನಟಿಸುತ್ತಿದ್ದಾರೆ. ತೆಲುಗಿನ ಪುಷ್ಪ ಚಿತ್ರದ ಶೂಟಿಂಗ್​ನಲ್ಲೂ ಅವರು ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: Rashmika Mandanna: ಮೆಕ್​ಡೊನಾಲ್ಡ್ ಇಂಡಿಯಾ ಬ್ರ್ಯಾಂಡ್ ಅಂಬಾಸಡರ್ ಆಗಿ ನೇಮಕವಾದ ರಶ್ಮಿಕಾ ಮಂದಣ್ಣ

Rashmika Mandanna: ರಶ್ಮಿಕಾಗೆ ಬಾಲಿವುಡ್​ನಲ್ಲಿ ಬೆಂಬಲವಾಗಿ ನಿಂತ ಸಿದ್ಧಾರ್ಥ್ ಮಲ್ಹೋತ್ರ! ಅನುಭವ ಹಂಚಿಕೊಂಡ ಕಿರಿಕ್​ ಬೆಡಗಿ

Published On - 7:02 pm, Sun, 18 April 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!