AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರೆಂಡ್ಸ್ ಮದುವೆಗೆ ಹಾಜರಿ ಹಾಕಿದ ರಶ್ಮಿಕಾ ಮಂದಣ್ಣ; ಕೊಡಗಿನ ಕುವರಿ ಬರೆದ್ರು ವಿಶೇಷ ಸಾಲು

ರಶ್ಮಿಕಾ ಬೆಂಗಳೂರಿಗೆ ಬಂದು ಫ್ರೆಂಡ್ಸ್​​ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ.

ಫ್ರೆಂಡ್ಸ್ ಮದುವೆಗೆ ಹಾಜರಿ ಹಾಕಿದ ರಶ್ಮಿಕಾ ಮಂದಣ್ಣ; ಕೊಡಗಿನ ಕುವರಿ ಬರೆದ್ರು ವಿಶೇಷ ಸಾಲು
ಫ್ರೆಂಡ್ಸ್ ಮದುವೆಗೆ ಹಾಜರಿ ಹಾಕಿದ ರಶ್ಮಿಕಾ ಮಂದಣ್ಣ
TV9 Web
| Edited By: |

Updated on: May 26, 2022 | 2:55 PM

Share

ನಟಿ ರಶ್ಮಿಕಾ ಮಂದಣ್ಣ ಅವರು (Rashmika Mandanna) ಬಾಲಿವುಡ್​ನಲ್ಲಿ, ಟಾಲಿವುಡ್​ನಲ್ಲಿ, ಕಾಲಿವುಡ್​​ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಸಂಭಾವನೆ ಏರಿಸಿಕೊಂಡಿದ್ದಕ್ಕೋ ಏನೋ ಸ್ಯಾಂಡಲ್​ವುಡ್​ನ ಯಾವೊಬ್ಬ ನಿರ್ಮಾಪಕರು ಅವರ ಜತೆ ಕೈ ಜೋಡಿಸುತ್ತಿಲ್ಲ. ಈ ಮಧ್ಯೆ ರಶ್ಮಿಕಾ ಅನೇಕ ಜಾಹೀರಾತುಗಳಲ್ಲಿ ನಟಿಸುತ್ತಿದ್ದಾರೆ. ಇಷ್ಟೆಲ್ಲ ಕೆಲಸಗಳ ಮಧ್ಯೆ ಬಿಡುವು ಮಾಡಿಕೊಳ್ಳುವುದು ಎಂದರೆ ಕೊಂಚ ಕಷ್ಟವೇ. ಆದಾಗ್ಯೂ, ರಶ್ಮಿಕಾ ತಮ್ಮ ಗೆಳೆಯರಿಗಾಗಿ, ಕುಟುಂಬಕ್ಕಾಗಿ ಸಮಯ ಹೊಂದಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ರಶ್ಮಿಕಾ ಗೆಳೆತಿಯ ಮದುವೆಗೆ ತೆರಳಿ ಶುಭ ಹಾರೈಸಿ ಬಂದಿದ್ದರು. ಈಗ ಅವರು ಮತ್ತೊಂದು ಮದುವೆ ಅಟೆಂಡ್ ಮಾಡಿದ್ದಾರೆ.

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಹುಟ್ಟೂರಾದ ಕೊಡಗಿಗೆ ತೆರಳಿದ್ದರು. ಈ ವೇಳೆ ಅವರು ಗೆಳತಿಯ ಮದುವೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ರಶ್ಮಿಕಾ ಅವರು ಕೊಡಗಿನ ಶೈಲಿಯಲ್ಲಿ ಸೀರೆ ಉಟ್ಟಿದ್ದು ಗಮನ ಸೆಳೆದಿತ್ತು. ಈಗ ರಶ್ಮಿಕಾ ಬೆಂಗಳೂರಿಗೆ ಬಂದು ಫ್ರೆಂಡ್ಸ್​​ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೊಡವ ಶೈಲಿಯಲ್ಲಿ ಸೀರೆ ಧರಿಸಿ ಮಿಂಚಿದ ರಶ್ಮಿಕಾ ಮಂದಣ್ಣ; ಅಭಿಮಾನಿಗಳಿಂದ ಸಿಕ್ತು ಮಿಲಿಯನ್​ ಲೈಕ್ಸ್​

ಇದನ್ನೂ ಓದಿ
Image
ರಶ್ಮಿಕಾ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್​ಗೆ ರೆಡಿ; ಕನ್ನಡದಲ್ಲಿ ಮಾತ್ರ ಆಗಲ್ಲ ಬಿಡುಗಡೆ
Image
ತೃಪ್ತಿ ಆಗುವಂತೆ ಬೆವರು ಹರಿಸಿ ವರ್ಕೌಟ್​ ಮಾಡಿದ ಬಳಿಕ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ
Image
ಅಬ್ಬಬ್ಬಾ.. ರಶ್ಮಿಕಾ ಚಿತ್ರಕ್ಕೆ ಈ ಪರಿ ಬೇಡಿಕೆ; ಬಹುಕೋಟಿ ಡೀಲ್​ಗಾಗಿ ಇಬ್ಬರ ನಡುವೆ ಬಿಗ್​ ಪೈಪೋಟಿ
Image
ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?

‘ನೀವು ಭೇಟಿಯಾದ ದಿನದಿಂದ, ನೀವು ಸ್ನೇಹಿತರಾಗುವ ದಿನದವರೆಗೆ. ನೀವು ಡೇಟಿಂಗ್ ಮಾಡಲು ಪ್ರಾರಂಭಿಸಿದ ದಿನದಿಂದ, ನೀವು ಮದುವೆಯಾಗುವುದಾಗಿ ಹೇಳಿದ ದಿನದವರೆಗೆ ನಾನು ನಿಮ್ಮ ಜತೆಗೆ ಇದ್ದೆ. ಸುಂದರ ಪ್ರಯಾಣಕ್ಕೆ ಸಾಕ್ಷಿಯಾಗಿದೆದ್ದೇನೆ. ನಾನು ನಿಮ್ಮಿಬ್ಬರನ್ನು ಪ್ರೀತಿಸುತ್ತೇನೆ. ನೀವು ನನ್ನ ಜೀವನದಲ್ಲಿರುವುದು ನಿಜಕ್ಕೂ ಖುಷಿಯ ವಿಚಾರ’ ಎಂದು ಬರೆದುಕೊಂಡಿದ್ದಾರೆ ರಶ್ಮಿಕಾ ಮಂದಣ್ಣ.

ಈ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ರಶ್ಮಿಕಾ ಅವರ ಸೀರೆಯನ್ನು ಹೊಗಳಿದ್ದಾರೆ. ಇನ್ನೂ ಕೆಲವರು ನವ ದಂಪತಿಗೆ ಶುಭಾಶಯ ತಿಳಿಸಿದ್ದಾರೆ. ಈ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿದೆ.

ಇದನ್ನೂ ಓದಿ: ರಶ್ಮಿಕಾ, ವಿಜಯ್ ದೇವರಕೊಂಡ, ಸಲ್ಮಾನ್..; ಕರಣ್ ಜೋಹರ್​​ ಬರ್ತ್​ಡೇ ಪಾರ್ಟಿಯಲ್ಲಿ ಭಾಗವಹಿಸಿದ ತಾರೆಯರು ಯಾರೆಲ್ಲಾ?

ಈ ಮದುವೆ ನಡೆದಿದ್ದು ಮೇ 25ರಂದು. ಮಧ್ಯಾಹ್ನ ಮದುವೆಗೆ ಹಾಜರಿ ಹಾಕಿ ಸಂಜೆ ಕರಣ್​ ಜೋಹರ್ ಬರ್ತ್​ಡೇ ಪಾರ್ಟಿಗೆ ರಶ್ಮಿಕಾ ತೆರಳಿದ್ದರು. ಈ ಫೋಟೋಗಳೂ ವೈರಲ್ ಆಗಿವೆ. ಈ ಪಾರ್ಟಿಯಲ್ಲಿ ರಶ್ಮಿಕಾ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದು ಕರಣ್ ಅವರ 50ನೇ ವರ್ಷದ ಬರ್ತ್​ಡೇ. ಹೀಗಾಗಿ, ತುಂಬಾನೇ ವಿಶೇಷವಾಗಿ ಆಚರಿಸಲಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ