AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯಕನ ಮದುವೆಗೆ ಹಾಜರಾದ ರಶ್ಮಿಕಾ ಮಂದಣ್ಣ; ನಟಿಯ ಕಾಲಿಗೆ ನಮಿಸಿದ ನವ ದಂಪತಿ

ರಶ್ಮಿಕಾ ಮಂದಣ್ಣ ಅವರು ತಮ್ಮ ತಂಡದ ಸದಸ್ಯರನ್ನು ಕುಟುಂಬದವರಂತೆ ಟ್ರೀಟ್ ಮಾಡುತ್ತಾರೆ. ರಶ್ಮಿಕಾ ಸಹಾಯಕರಾದ ಸಾಯಿ ಎಂಬುವವರು ಇತ್ತೀಚೆಗೆ ಮದುವೆ ಆಗಿದ್ದಾರೆ. ಹೈದರಾಬಾದ್​ನಲ್ಲಿ ಈ ಮದುವೆ ನಡೆದಿದೆ. ರಶ್ಮಿಕಾ ಮಂದಣ್ಣ ಅವರಿಗೂ ಮದುವೆಗೆ ಆಹ್ವಾನ ಇತ್ತು. ಅವರು ಕೂಡ ವಿವಾಹ ಸಮಾರಂಭಕ್ಕೆ ಹೋಗಿದ್ದಾರೆ.

ಸಹಾಯಕನ ಮದುವೆಗೆ ಹಾಜರಾದ ರಶ್ಮಿಕಾ ಮಂದಣ್ಣ; ನಟಿಯ ಕಾಲಿಗೆ ನಮಿಸಿದ ನವ ದಂಪತಿ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Sep 04, 2023 | 7:12 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಬಗ್ಗೆ ಹುಟ್ಟಿಕೊಂಡ ಟ್ರೋಲ್​ಗಳು ಒಂದೆರಡಲ್ಲ. ಒಂದಿಲ್ಲೊಂದು ವಿಚಾರಕ್ಕೆ ಅವರನ್ನು ಟ್ರೋಲ್ ಮಾಡಲಾಗುತ್ತದೆ. ಅದೇ ರೀತಿ ರಶ್ಮಿಕಾ ಮಂದಣ್ಣ ಅವರು ಒಳ್ಳೆಯ ಕೆಲಸಗಳಿಂದಲೂ ಸುದ್ದಿ ಆಗುತ್ತಾರೆ. ಅಭಿಮಾನಿಗಳು ಸೆಲ್ಫಿ ಕೇಳೋಕೆ ಬಂದರೆ ಅವರು ಬೇಸರ ಮಾಡಿಕೊಳ್ಳುವುದಿಲ್ಲ. ಅಭಿಮಾನಿಗಳು ತಳ್ಳಾಡಿದರೂ ಕೋಪ ಮಾಡಿಕೊಳ್ಳುವುದಿಲ್ಲ. ರಶ್ಮಿಕಾ ಮಂದಣ್ಣ ಅವರು ಸಹಾಯಕ ಸಾಯಿ ಅವರ ಮದುವೆಗೆ ಹಾಜರಿ ಹಾಕಿದ್ದಾರೆ. ಈ ಮದುವೆಯಲ್ಲಿ ಅವರೇ ಕೇಂದ್ರ ಬಿಂದು ಆಗಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ ಅವರು ತಮ್ಮ ತಂಡದ ಸದಸ್ಯರನ್ನು ಕುಟುಂಬದವರಂತೆ ಟ್ರೀಟ್ ಮಾಡುತ್ತಾರೆ. ಈ ಕಾರಣದಿಂದಲೇ ಟೀಂನವರಿಗೆ ರಶ್ಮಿಕಾ ಮಂದಣ್ಣ ಅವರನ್ನು ಕಂಡರೆ ಎಲ್ಲಿಲ್ಲದ ಪ್ರೀತಿ. ರಶ್ಮಿಕಾ ಸಹಾಯಕರಾದ ಸಾಯಿ ಎಂಬುವವರು ಇತ್ತೀಚೆಗೆ ಮದುವೆ ಆಗಿದ್ದಾರೆ. ಹೈದರಾಬಾದ್​ನಲ್ಲಿ ಈ ಮದುವೆ ನಡೆದಿದೆ. ರಶ್ಮಿಕಾ ಮಂದಣ್ಣ ಅವರಿಗೂ ಮದುವೆಗೆ ಆಹ್ವಾನ ಇತ್ತು. ಅವರು ಕೂಡ ವಿವಾಹ ಸಮಾರಂಭಕ್ಕೆ ಹೋಗಿದ್ದಾರೆ.

ರಶ್ಮಿಕಾ ಮಂದಣ್ಣ ಸಖತ್ ಬ್ಯುಸಿ ಇದ್ದಾರೆ. ಆದಾಗ್ಯೂ ಸಾಯಿಗೋಸ್ಕರ ಬಿಡುವು ಮಾಡಿಕೊಂಡು ಮದುವೆಗೆ ಹಾಜರಿ ಹಾಕಿದ್ದಾರೆ. ನವದಂಪತಿ ಆಶೀರ್ವಾದ ಪಡೆಯಲು ರಶ್ಮಿಕಾ ಮಂದಣ್ಣ ಅವರ ಕಾಲಿಗೆ ನಮಸ್ಕರಿಸಿದ್ದಾರೆ. ಈ ವೇಳೆ ರಶ್ಮಿಕಾ ಮಂದಣ್ಣಗೆ ಏನು ಮಾಡಬೇಕು ಎಂಬುದೇ ತಿಳಿಯಲಿಲ್ಲ. ಸಾಯಿ ಹಾಗೂ ಅವರ ಪತ್ನಿ ಕಾಲಿಗೆ ನಮಿಸಿದ್ದನ್ನು ನೋಡಿ ರಶ್ಮಿಕಾಗೆ ನಾಚಿಕೆ ಆಗಿದೆ.

ಇದನ್ನೂ ಓದಿ: ‘ಇದುವೇ ಕರ್ಮ?’; ಬಾಲಿವುಡ್​ ಕಡೆ ಒಲವು ತೋರಿಸಿದ ರಶ್ಮಿಕಾ ಮಂದಣ್ಣಗೆ ಉಂಟಾಯ್ತು ಹಿನ್ನಡೆ

ರಶ್ಮಿಕಾ ಮಂದಣ್ಣ ಅವರು ಹಿಂದಿಯ ‘ಅನಿಮಲ್’ ಸಿನಿಮಾ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಡಿಸೆಂಬರ್ 1ರಂದು ಸಿನಿಮಾ ರಿಲೀಸ್ ಆಗಲಿದೆ. ‘ಪುಷ್ಪ 2’ ಚಿತ್ರದ ಕೆಲಸದಲ್ಲೂ ಅವರು ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ಪುಷ್ಪ 2’ ಅಪ್​ಡೇಟ್​ಗಾಗಿ ಫ್ಯಾನ್ಸ್ ಕಾದಿದ್ದಾರೆ. ತೆಲುಗಿನಲ್ಲಿ ನಿತಿನ್ ನಟಿಸುತ್ತಿರುವ ಚಿತ್ರದಿಂದ ರಶ್ಮಿಕಾ ಹೊರ ನಡೆದಿದ್ದಾರೆ. ಹಿಂದಿಯಲ್ಲಿ ಅವರು ಶಾಹಿದ್ ಕಪೂರ್ ಜೊತೆ ಸಿನಿಮಾ ಒಂದನ್ನು ಮಾಡಬೇಕಿತ್ತು. ಆದರೆ, ಬಜೆಟ್ ಹೊಂದಾಣಿಕೆ ಆಗದ ಕಾರಣ ಈ ಚಿತ್ರ ಸೆಟ್ಟೇರುತ್ತಿಲ್ಲ ಎಂದು ವರದಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು