AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಬರ್ತ್​​ಡೇ ಸಂಭ್ರಮ! ಕಾಮನ್​ ಡಿಪಿಯಲ್ಲಿ ಮಿಂಚಿದ ನ್ಯಾಶನಲ್​ ಕ್ರಶ್​

Happy Birthday Rashmika Mandanna: ಸಿನಿಮಾ ಲೋಕದಲ್ಲಿ ರಶ್ಮಿಕಾ ಮಂದಣ್ಣ ದಿನದಿಂದ ದಿನಕ್ಕೆ ಒಂದೊಂದೇ ಸಾಧನೆಯ ಮೆಟ್ಟಿಲುಗಳನ್ನು ಏರುತ್ತಿದ್ದಾರೆ. ಅವರಿಗೆ ಅಭಿಮಾನಿಗಳಿಂದ ಜನ್ಮದಿನದ ಶುಭಾಶಯಗಳ ಮಹಾಪೂರ ಹರಿದುಬಂದಿದೆ.

Rashmika Mandanna: ರಶ್ಮಿಕಾ ಮಂದಣ್ಣ ಬರ್ತ್​​ಡೇ ಸಂಭ್ರಮ! ಕಾಮನ್​ ಡಿಪಿಯಲ್ಲಿ ಮಿಂಚಿದ ನ್ಯಾಶನಲ್​ ಕ್ರಶ್​
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
| Edited By: |

Updated on:Apr 05, 2021 | 9:20 AM

Share

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇಂದು (ಏ.5) 25ನೇ ವರ್ಷದ ಜನ್ಮದಿನದ ಸಂಭ್ರಮ. ಕೋಟ್ಯಂತರ ಅಭಿಮಾನಿಗಳು, ಸ್ನೇಹಿತರು, ಆಪ್ತರು ಮತ್ತು ಸೆಲೆಬ್ರಿಟಿಗಳಿಂದ ರಶ್ಮಿಕಾಗೆ ಜನ್ಮದಿನದ ಶುಭಾಶಯ ಹರಿದು ಬರುತ್ತಿದೆ. ಸೋಶಿಯಲ್​ ಮೀಡಿಯಾ ತುಂಬೆಲ್ಲ ಅವರ ಅಭಿಮಾನಿಗಳು ಕಾಮನ್​ ಡಿಪಿ ಶೇರ್​ ಮಾಡಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದ ತಾರೆಯರು ಈ ಕೊಡಗಿನ ಕುವರಿಗೆ ವಿಶ್​ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಈಗ ಕನ್ನಡಕ್ಕಿಂತಲೂ ಹೆಚ್ಚಾಗಿ ಪರಭಾಷೆಯಲ್ಲೇ ಬ್ಯುಸಿ ಆಗಿದ್ದಾರೆ. ಎಲ್ಲ ಭಾಷೆಯಲ್ಲಿಯೂ ಅವರಿಗೆ ಅಭಿಮಾನಿಗಳಿದ್ದಾರೆ. ಜನ್ಮದಿನದ ಸಲುವಾಗಿ ಅದರ ಕಾಮನ್​ ಡಿಪಿ ಬಿಡುಗಡೆ ಮಾಡಲಾಗಿದೆ. ವಿಜಯ್​ ದೇವರಕೊಂಡ ಸಹೋದರ ಆನಂದ್​ ದೇವರಕೊಂಡ ಸೇರಿದಂತೆ ಅನೇಕರು ಕಾಮನ್​ ಡಿಪಿ ಹಂಚಿಕೊಂಡಿದ್ದಾರೆ.

ಸಿನಿಮಾ ಲೋಕದಲ್ಲಿ ರಶ್ಮಿಕಾ ಮಂದಣ್ಣ ದಿನದಿಂದ ದಿನಕ್ಕೆ ಒಂದೊಂದೇ ಸಾಧನೆಯ ಮಟ್ಟಿಲುಗಳನ್ನು ಏರುತ್ತಿದ್ದಾರೆ. ಕಿರಿಕ್​ ಪಾರ್ಟಿ ಸಿನಿಮಾದಿಂದ ಆರಂಭವಾದ ಅವರ ಪಯಣ ಈಗ ಬಾಲಿವುಡ್​ವರೆಗೂ ಸಾಗಿದೆ. ಈಗಾಗಲೇ ಗಾಯಕ ಬಾದ್​ಷಾ ಜೊತೆ ‘ಟಾಪ್​ ಟಕ್ಕರ್​’ ಹಾಡಿನಲ್ಲಿ ಕಾಣಿಸಿಕೊಂಡು ಧೂಳೆಬ್ಬಿಸಿದ್ದಾರೆ. ಅವರ ಮೊದಲ ಬಾಲಿವುಡ್​ ಸಿನಿಮಾ ‘ಮಿಷನ್​ ಮಜ್ನು’ ಚಿತ್ರೀಕರಣ ನಡೆಯುತ್ತಿದೆ. ಆ ಸಿನಿಮಾದಲ್ಲಿ ಅವರಿಗೆ ಸ್ಟಾರ್​ ನಟ ಸಿದ್ದಾರ್ಥ್​ ಮಲ್ಹೋತ್ರ ಜೋಡಿ ಆಗಿದ್ದಾರೆ.

ಮೊದಲ ಬಾಲಿವುಡ್​ ಸಿನಿಮಾ ಶೂಟಿಂಗ್​ ಮುಗಿಸುವ ಮುನ್ನವೇ ರಶ್ಮಿಕಾಗೆ ಎರಡನೇ ಹಿಂದಿ ಚಿತ್ರದಲ್ಲಿ ಬಂಪರ್​ ಅವಕಾಶ ಸಿಕ್ಕಿದೆ. ‘ಗುಡ್​ ಬೈ’ ಶೀರ್ಷಿಕೆಯ ಈ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​ ಜೊತೆ ರಶ್ಮಿಕಾ ತೆರೆ ಹಂಚಿಕೊಳ್ಳಲಿದ್ದಾರೆ. ಅಲ್ಲದೆ, ‘ತಪಡ್​’ ಖ್ಯಾತಿಯ ನಟ ಪಾವೈಲ್​ ಗುಲಾಟಿಗೆ ಜೋಡಿಯಾಗಿ ರಶ್ಮಿಕಾ ನಟಿಸಲಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾ ಮುಹೂರ್ತ ಸಮಾರಂಭ ನೆರವೇರಿದೆ.

ದಕ್ಷಿಣ ಭಾರತದಲ್ಲಂತೂ ರಶ್ಮಿಕಾ ಹವಾ ಜೋರಾಗಿದೆ. ಇಲ್ಲಿನ ಎಲ್ಲ ಸ್ಟಾರ್​ ನಟರ ಸಿನಿಮಾಗಳಿಗೂ ರಶ್ಮಿಕಾ ಅವರೇ ನಾಯಕಿ ಆಗಬೇಕು ಎಂಬಷ್ಟರ ಮಟ್ಟಿಗೆ ಬೇಡಿಕೆ ಸೃಷ್ಟಿ ಆಗಿದೆ. ಕಾರ್ತಿ ಜೊತೆ ಅವರು ನಟಿಸಿರುವ ‘ಸುಲ್ತಾನ್​’ ಸಿನಿಮಾ ಏ.2ರಂದು ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಅಲ್ಲು ಅರ್ಜುನ್​ ಜೊತೆ ನಟಿಸಿರುವ ‘ಪುಷ್ಪ’ ಸಿನಿಮಾ ಭಾರೀ ನಿರೀಕ್ಷೆ ಹುಟ್ಟುಹಾಕಿದೆ.

ರಶ್ಮಿಕಾ ಕನ್ನಡದಲ್ಲಿ ನಟಿಸಿರುವ ಕೊನೇ ಸಿನಿಮಾ ಪೊಗರು. ಧ್ರುವ ಸರ್ಜಾ ಜೊತೆ ತೆರೆಹಂಚಿಕೊಂದಿದ್ದ ಆ ಚಿತ್ರ ಫೆ.19ರಂದು ಬಿಡುಗಡೆಯಾಗಿ ಧೂಳೆಬ್ಬಿಸಿತು. ಆದರೆ ಆ ಚಿತ್ರದ ಬಳಿಕ ರಶ್ಮಿಕಾ ಕನ್ನಡದಲ್ಲಿ ಬೇರೆ ಯಾವುದೇ ಸಿನಿಮಾವನ್ನೂ ಒಪ್ಪಿಕೊಂಡಿಲ್ಲ. ಮತ್ತೆ ಅವರು ಸ್ಯಾಂಡಲ್​ವುಡ್​ ಕಡೆಗೆ ಮುಖ ಹಾಕುವುದು ಯಾವಾಗ ಎಂಬ ಪ್ರಶ್ನೆಗೆ ಕರುನಾಡಿನಲ್ಲಿರುವ ಅವರ ಅಭಿಮಾನಿಗಳು ಉತ್ತರ ನಿರೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ: Rashmika Mandanna: ಮುಂಬೈನಲ್ಲಿ ರಶ್ಮಿಕಾ ಜೊತೆ ಇಷ್ಟೆಲ್ಲ ಕ್ಲೋಸ್​ ಆಗಿರುವ ನಟ ಯಾರು? ಫೋಟೋ ವೈರಲ್​!

ರಶ್ಮಿಕಾಗೆ ಸಿಕ್ತು ಸೀಕ್ರೆಟ್ ಗಿಫ್ಟ್ ಉಂಗುರ.. ಅದಕ್ಕೆ ಐ ಲವ್ ಇಟ್ ಎಂದ ಕರುನಾಡ ಕ್ರಶ್

Published On - 8:11 am, Mon, 5 April 21

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ