AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ರಶ್ಮಿಕಾ ಮಂದಣ್ಣ

Rashmika Mandanna: ಇತ್ತೀಚೆಗೆ ಹೈದಾರಾಬಾದ್​ನಲ್ಲಿ ಮನೆ ಖರೀದಿಸಿದ್ದ ರಶ್ಮಿಕಾ ಮಂದಣ್ಣ ಈಗ ಮುಂಬೈನಲ್ಲಿ ಐಷಾರಾಮಿ ಮನೆಯೊಂದನ್ನು ಖರೀದಿ ಮಾಡಿದ್ದಾರಂತೆ.

Rashmika Mandanna: ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on:Feb 25, 2021 | 3:52 PM

Share

ನಟಿ ರಶ್ಮಿಕಾ ಮಂದಣ್ಣ ಈಗ ದಕ್ಷಿಣ ಭಾರತದ ಬೇಡಿಕೆಯ ನಟಿ. ಅಷ್ಟೇ ಅಲ್ಲ, ಈಗ ಅವರು ಬಾಲಿವುಡ್​ಗೂ ಕಾಲಿಟ್ಟಿದ್ದು, ಅಲ್ಲಿಯೂ ಧೂಳೆಬ್ಬಿಸಲು ರೆಡಿ ಆಗಿದ್ದಾರೆ. ರಶ್ಮಿಕಾ ಶೂಟಿಂಗ್ಗಾ​​ಗಿ ​ ಟಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, ಅವರು ಬಹುತೇಕ ಸಮಯವನ್ನು ಹೈದರಾಬಾದ್​​ನಲ್ಲೇ ಕಳೆಯುತ್ತಿದ್ದಾರೆ. ಇದಕ್ಕಾಗಿಯೇ ಅವರು ಹೈದರಾಬಾದ್​ನಲ್ಲಿ ಮನೆ ಒಂದನ್ನು ಖರೀದಿಸಿದ್ದಾರೆ. ಇತ್ತೀಚೆಗೆ ಅವರು ಐಷಾರಾಮಿ ಎಸ್​ಯುವಿ ಖರೀದಿಸಿದ್ದ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಈಗ ಅವರು ಮತ್ತೆ ಸುದ್ದಿಯಾಗಿದ್ದಾರೆ. ಅದಕ್ಕೆ ಕಾರಣ ಅವರ ಮುಂಬೈನಲ್ಲಿ ಮನೆ ಖರೀದಿಸಿದ್ದು!

ಹೌದು, ರಶ್ಮಿಕಾ ಮಂದಣ್ಣ ಮುಂಬೈನಲ್ಲಿ ಐಷಾರಾಮಿ ಮನೆಯೊಂದನ್ನು ಖರೀದಿ ಮಾಡಿದ್ದಾರಂತೆ. ಮುಂಬೈಗೆ ತೆರಳಿದಾಗ ಅವರು ಸಾಮಾನ್ಯವಾಗಿ ಹೋಟೆಲ್​ನಲ್ಲಿ ಉಳಿದುಕೊಳ್ಳುತ್ತಿದ್ದರು. ಆದರೆ, ಈಗ ಅವರು ಸಿದ್ಧಾರ್ಥ್​ ಮಲ್ಹೋತ್ರಾ ನಟನೆಯ ಮಿಷನ್​ ಮಂಜು ಚಿತ್ರಕ್ಕಾಗಿ ಅವರು ಮುಂಬೈನಲ್ಲಿ ನೆಲಸಬೇಕಾಗಿ ಬರುತ್ತದೆ. ಹೀಗಾಗಿ, ರಶ್ಮಿಕಾ ಮನೆ ಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು.

ಬಾಲಿವುಡ್​ಗೆ ಕಾಲಿಟ್ಟ ನಂತರ ಬಹುತೇಕ ನಟ-ನಟಿಯರು ಮುಂಬೈನಲ್ಲಿ ಫ್ಲ್ಯಾಟ್​ ಖರೀದಿಸುವುದು ವಾಡಿಕೆ. ಈಗ ರಶ್ಮಿಕಾ ಕೂಡ ಇದೇ ಮಾರ್ಗ ಅನುಸರಿಸಿದ್ದಾರೆ. ಸಿನಿಮಾ ಆರಂಭಕ್ಕೂ ಮುನ್ನವೇ ಅವರು ಮನೆ ಖರೀದಿಸಿದ್ದು ವಿಶೇಷ. ಮಿಷನ್​ ಮಜ್ನು ಚಿತ್ರಕ್ಕಾಗಿ ರಶ್ಮಿಕಾ ಹಿಂದಿ ಕಲಿಯುತ್ತಿದ್ದಾರೆ ಎನ್ನಲಾಗಿದೆ. ಮಿಷನ್​ ಮಜ್ನು ನಂತರ ಡೆಡ್ಲಿ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಜತೆ ರಶ್ಮಿಕಾ ತೆರೆ ಹಂಚಿಕೊಳ್ಳುವುದಕ್ಕೆ ತುಂಬಾನೇ ಎಕ್ಸೈಟ್​ ಆಗಿದ್ದಾರಂತೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣಗೆ ‘ಪೊಗರು’, ಅವರು ಮಾಡಿದ ತಪ್ಪನ್ನು ಕನ್ನಡಿಗರು ಕ್ಷಮಿಸ್ತಾರಾ?

ಸೂಪರ್​ ಸ್ಟಾರ್​ ಪಟ್ಟಕ್ಕೇರಲು ರಶ್ಮಿಕಾ ಹರಸಾಹಸ, ರಾಮ್‌ ಚರಣ್ ಜೊತೆ ನಟಿಸಲು ಕಷ್ಟಪಟ್ಟು ಡೇಟ್‌ ಹೊಂದಿಸಿಕೊಳ್ತಿದ್ದಾರಂತೆ..

Published On - 3:42 pm, Thu, 25 February 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ