AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ರಶ್ಮಿಕಾ ಮಂದಣ್ಣ

Rashmika Mandanna: ಇತ್ತೀಚೆಗೆ ಹೈದಾರಾಬಾದ್​ನಲ್ಲಿ ಮನೆ ಖರೀದಿಸಿದ್ದ ರಶ್ಮಿಕಾ ಮಂದಣ್ಣ ಈಗ ಮುಂಬೈನಲ್ಲಿ ಐಷಾರಾಮಿ ಮನೆಯೊಂದನ್ನು ಖರೀದಿ ಮಾಡಿದ್ದಾರಂತೆ.

Rashmika Mandanna: ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on:Feb 25, 2021 | 3:52 PM

Share

ನಟಿ ರಶ್ಮಿಕಾ ಮಂದಣ್ಣ ಈಗ ದಕ್ಷಿಣ ಭಾರತದ ಬೇಡಿಕೆಯ ನಟಿ. ಅಷ್ಟೇ ಅಲ್ಲ, ಈಗ ಅವರು ಬಾಲಿವುಡ್​ಗೂ ಕಾಲಿಟ್ಟಿದ್ದು, ಅಲ್ಲಿಯೂ ಧೂಳೆಬ್ಬಿಸಲು ರೆಡಿ ಆಗಿದ್ದಾರೆ. ರಶ್ಮಿಕಾ ಶೂಟಿಂಗ್ಗಾ​​ಗಿ ​ ಟಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, ಅವರು ಬಹುತೇಕ ಸಮಯವನ್ನು ಹೈದರಾಬಾದ್​​ನಲ್ಲೇ ಕಳೆಯುತ್ತಿದ್ದಾರೆ. ಇದಕ್ಕಾಗಿಯೇ ಅವರು ಹೈದರಾಬಾದ್​ನಲ್ಲಿ ಮನೆ ಒಂದನ್ನು ಖರೀದಿಸಿದ್ದಾರೆ. ಇತ್ತೀಚೆಗೆ ಅವರು ಐಷಾರಾಮಿ ಎಸ್​ಯುವಿ ಖರೀದಿಸಿದ್ದ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಈಗ ಅವರು ಮತ್ತೆ ಸುದ್ದಿಯಾಗಿದ್ದಾರೆ. ಅದಕ್ಕೆ ಕಾರಣ ಅವರ ಮುಂಬೈನಲ್ಲಿ ಮನೆ ಖರೀದಿಸಿದ್ದು!

ಹೌದು, ರಶ್ಮಿಕಾ ಮಂದಣ್ಣ ಮುಂಬೈನಲ್ಲಿ ಐಷಾರಾಮಿ ಮನೆಯೊಂದನ್ನು ಖರೀದಿ ಮಾಡಿದ್ದಾರಂತೆ. ಮುಂಬೈಗೆ ತೆರಳಿದಾಗ ಅವರು ಸಾಮಾನ್ಯವಾಗಿ ಹೋಟೆಲ್​ನಲ್ಲಿ ಉಳಿದುಕೊಳ್ಳುತ್ತಿದ್ದರು. ಆದರೆ, ಈಗ ಅವರು ಸಿದ್ಧಾರ್ಥ್​ ಮಲ್ಹೋತ್ರಾ ನಟನೆಯ ಮಿಷನ್​ ಮಂಜು ಚಿತ್ರಕ್ಕಾಗಿ ಅವರು ಮುಂಬೈನಲ್ಲಿ ನೆಲಸಬೇಕಾಗಿ ಬರುತ್ತದೆ. ಹೀಗಾಗಿ, ರಶ್ಮಿಕಾ ಮನೆ ಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು.

ಬಾಲಿವುಡ್​ಗೆ ಕಾಲಿಟ್ಟ ನಂತರ ಬಹುತೇಕ ನಟ-ನಟಿಯರು ಮುಂಬೈನಲ್ಲಿ ಫ್ಲ್ಯಾಟ್​ ಖರೀದಿಸುವುದು ವಾಡಿಕೆ. ಈಗ ರಶ್ಮಿಕಾ ಕೂಡ ಇದೇ ಮಾರ್ಗ ಅನುಸರಿಸಿದ್ದಾರೆ. ಸಿನಿಮಾ ಆರಂಭಕ್ಕೂ ಮುನ್ನವೇ ಅವರು ಮನೆ ಖರೀದಿಸಿದ್ದು ವಿಶೇಷ. ಮಿಷನ್​ ಮಜ್ನು ಚಿತ್ರಕ್ಕಾಗಿ ರಶ್ಮಿಕಾ ಹಿಂದಿ ಕಲಿಯುತ್ತಿದ್ದಾರೆ ಎನ್ನಲಾಗಿದೆ. ಮಿಷನ್​ ಮಜ್ನು ನಂತರ ಡೆಡ್ಲಿ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಜತೆ ರಶ್ಮಿಕಾ ತೆರೆ ಹಂಚಿಕೊಳ್ಳುವುದಕ್ಕೆ ತುಂಬಾನೇ ಎಕ್ಸೈಟ್​ ಆಗಿದ್ದಾರಂತೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣಗೆ ‘ಪೊಗರು’, ಅವರು ಮಾಡಿದ ತಪ್ಪನ್ನು ಕನ್ನಡಿಗರು ಕ್ಷಮಿಸ್ತಾರಾ?

ಸೂಪರ್​ ಸ್ಟಾರ್​ ಪಟ್ಟಕ್ಕೇರಲು ರಶ್ಮಿಕಾ ಹರಸಾಹಸ, ರಾಮ್‌ ಚರಣ್ ಜೊತೆ ನಟಿಸಲು ಕಷ್ಟಪಟ್ಟು ಡೇಟ್‌ ಹೊಂದಿಸಿಕೊಳ್ತಿದ್ದಾರಂತೆ..

Published On - 3:42 pm, Thu, 25 February 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ