AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವ ಸ್ಯಾಂಡಲ್​ವುಡ್​ ಬ್ಯೂಟಿ ಯಾರು ಎಂದು ಗೆಸ್​ ಮಾಡ್ತೀರಾ?

ಕೊರೊನಾ ವೈರಸ್​ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಹೀಗಾಗಿ, ದೇಶದ ಅನೇಕ ರಾಜ್ಯಗಳಲ್ಲಿ ಕಠಿಣ ಲಾಕ್​ಡೌನ್​ ಜಾರಿ ತರಲಾಗಿದೆ. ಇದಕ್ಕಾಗಿ ಶೂಟಿಂಗ್​ ಕೂಡ ನಿಲ್ಲಿಸಲಾಗಿದೆ. ಇದರಿಂದ ಸಿನಿಮಾ ಮಂದಿ ಮನೆಯಲ್ಲೇ ಇರುವಂತಾಗಿದೆ.

ಈ ಫೋಟೋದಲ್ಲಿರುವ ಸ್ಯಾಂಡಲ್​ವುಡ್​ ಬ್ಯೂಟಿ ಯಾರು ಎಂದು ಗೆಸ್​ ಮಾಡ್ತೀರಾ?
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: May 20, 2021 | 10:06 PM

Share

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಹಲವು ರಾಜ್ಯಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿದೆ. ಈ ಕಾರಣಕ್ಕೆ ಸೆಲೆಬ್ರಿಟಿಗಳೆಲ್ಲರೂ ಮನೆಯಲ್ಲೇ ಇದ್ದಾರೆ. ಹೀಗಾಗಿ, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಆ್ಯಕ್ಟಿವ್​ ಆಗಿರುವ ಸ್ಟಾರ್​ಗಳು ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ. ಈಗ ಸ್ಯಾಂಡಲ್​ವುಡ್​ನ ಸ್ಟಾರ್​ ನಟಿ ಬಾಲ್ಯದ ದಿನಗಳ ಫೋಟೋ ಒಂದನ್ನು ಹಂಚಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಈ ಫೋಟೋಗಳನ್ನು ಹಂಚಿಕೊಂಡಿದ್ದು ಬೇರಾರೂ ಅಲ್ಲ ನಟಿ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಂದಣ್ಣ ಕೆಂಪು ಟಿ-ಶರ್ಟ ಧರಿಸಿ ಕಾಯುತ್ತಾ ಕೂತಿದ್ದಾರೆ. ಈ ಫೋಟೋದಲ್ಲಿ ಅವರು ತುಂಬಾನೇ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಕ್ಯಾಪ್ಶನ್​ ನೀಡಿರುವ ಅವರು, ಕೊರೊನಾ ಹೋಗುವುದನ್ನು ಕಾಯುವುದು ಹೀಗೆಯೇ ಇರುತ್ತದೆ ಎಂದು ಕುಹಕವಾಡಿದ್ದಾರೆ. ಅಲ್ಲದೆ, ಇದಕ್ಕೆ #ThrowbackThursday ಎಂದು ಹ್ಯಾಶ್​ಟ್ಯಾಗ್​​ ಕೂಡ ನೀಡಿದ್ದಾರೆ.

ಕಿರಿಕ್​ ಪಾರ್ಟಿ ತೆರೆಕಂಡಾಗ ಕರ್ನಾಟಕದ ಕ್ರಶ್​ ಆಗಿದ್ದ ರಶ್ಮಿಕಾ, ನಂತರ ಇಂಡಿಯಾ ಕ್ರಶ್​ ಆದರು. ಇಂಥ ಬ್ಯೂಟಿ ಚಿಕ್ಕ ವಯಸ್ಸಿನಲ್ಲೂ ಕ್ಯೂಟ್​ ಆಗಿದ್ದರು ಎಂದು ಅಭಿಮಾನಿಗಳು ಹೇಳಿದ್ದಾರೆ. ಚೈಲ್ಡ್​ಹುಡ್​ ಫೋಟೋ ನೋಡಿ ಅಭಿಮಾನಿಗಳು ಸಖತ್​ ಖುಷಿಯಾಗಿದ್ದಾರೆ.  

ಕೊರೊನಾ ವೈರಸ್​ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಹೀಗಾಗಿ, ದೇಶದ ಅನೇಕ ರಾಜ್ಯಗಳಲ್ಲಿ ಕಠಿಣ ಲಾಕ್​ಡೌನ್​ ಜಾರಿಗೆ ತರಲಾಗಿದೆ. ಇದಕ್ಕಾಗಿ ಶೂಟಿಂಗ್​ ಕೂಡ ನಿಲ್ಲಿಸಲಾಗಿದೆ. ಇದರಿಂದ ಸಿನಿಮಾ ಮಂದಿ ಮನೆಯಲ್ಲೇ ಇರುವಂತಾಗಿದೆ. ಹೀಗಾಗಿ, ಸೆಲೆಬ್ರಿಟಿಗಳು ವಿಡಿಯೋ ಹಾಗೂ Throwback ಫೋಟೋಗಳನ್ನು ಹಾಕುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಮಿಷನ್ ಮಜ್ನು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಶ್ಮಿಕಾ ಗುಡ್ ಬೈ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ವೃತ್ತಿ ಜೀವನದ ದೃಷ್ಟಿಯಿಂದ ಇದು ಬಹಳ ಮಹತ್ವ ಪಡೆದುಕೊಂಡಿದೆ. ಇದಲ್ಲದೆ, ತೆಲುಗಿನಲ್ಲಿ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಡಿ-ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕಾಡಿನ ಹಿನ್ನೆಲೆಯಲ್ಲಿ ನಡೆಯಲಿದೆ. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ಮೂಡಿ ಬರಲಿದೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: Pushpa: ರಶ್ಮಿಕಾ-ಅಲ್ಲು ಅರ್ಜುನ್ ನಟನೆಯ​ ‘ಪುಷ್ಪ’ ಚಿತ್ರಕ್ಕೆ ಹೆಸರು ಚೇಂಜ್​; ಯಾಕಿಂಥ ನಿರ್ಧಾರ?

‘ಕಿರಿಕ್​ ಪಾರ್ಟಿ ಹಿಂದಿ ರಿಮೇಕ್​ನಲ್ಲಿ ನಾನು ನಟಿಸಲ್ಲ’; ರಶ್ಮಿಕಾ ಖಡಕ್​ ನಿರ್ಧಾರಕ್ಕಿದೆ ಬಲವಾದ ಕಾರಣ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ