AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವ ಸ್ಯಾಂಡಲ್​ವುಡ್​ ಬ್ಯೂಟಿ ಯಾರು ಎಂದು ಗೆಸ್​ ಮಾಡ್ತೀರಾ?

ಕೊರೊನಾ ವೈರಸ್​ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಹೀಗಾಗಿ, ದೇಶದ ಅನೇಕ ರಾಜ್ಯಗಳಲ್ಲಿ ಕಠಿಣ ಲಾಕ್​ಡೌನ್​ ಜಾರಿ ತರಲಾಗಿದೆ. ಇದಕ್ಕಾಗಿ ಶೂಟಿಂಗ್​ ಕೂಡ ನಿಲ್ಲಿಸಲಾಗಿದೆ. ಇದರಿಂದ ಸಿನಿಮಾ ಮಂದಿ ಮನೆಯಲ್ಲೇ ಇರುವಂತಾಗಿದೆ.

ಈ ಫೋಟೋದಲ್ಲಿರುವ ಸ್ಯಾಂಡಲ್​ವುಡ್​ ಬ್ಯೂಟಿ ಯಾರು ಎಂದು ಗೆಸ್​ ಮಾಡ್ತೀರಾ?
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: May 20, 2021 | 10:06 PM

Share

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಹಲವು ರಾಜ್ಯಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿದೆ. ಈ ಕಾರಣಕ್ಕೆ ಸೆಲೆಬ್ರಿಟಿಗಳೆಲ್ಲರೂ ಮನೆಯಲ್ಲೇ ಇದ್ದಾರೆ. ಹೀಗಾಗಿ, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಆ್ಯಕ್ಟಿವ್​ ಆಗಿರುವ ಸ್ಟಾರ್​ಗಳು ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ. ಈಗ ಸ್ಯಾಂಡಲ್​ವುಡ್​ನ ಸ್ಟಾರ್​ ನಟಿ ಬಾಲ್ಯದ ದಿನಗಳ ಫೋಟೋ ಒಂದನ್ನು ಹಂಚಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಈ ಫೋಟೋಗಳನ್ನು ಹಂಚಿಕೊಂಡಿದ್ದು ಬೇರಾರೂ ಅಲ್ಲ ನಟಿ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಂದಣ್ಣ ಕೆಂಪು ಟಿ-ಶರ್ಟ ಧರಿಸಿ ಕಾಯುತ್ತಾ ಕೂತಿದ್ದಾರೆ. ಈ ಫೋಟೋದಲ್ಲಿ ಅವರು ತುಂಬಾನೇ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಕ್ಯಾಪ್ಶನ್​ ನೀಡಿರುವ ಅವರು, ಕೊರೊನಾ ಹೋಗುವುದನ್ನು ಕಾಯುವುದು ಹೀಗೆಯೇ ಇರುತ್ತದೆ ಎಂದು ಕುಹಕವಾಡಿದ್ದಾರೆ. ಅಲ್ಲದೆ, ಇದಕ್ಕೆ #ThrowbackThursday ಎಂದು ಹ್ಯಾಶ್​ಟ್ಯಾಗ್​​ ಕೂಡ ನೀಡಿದ್ದಾರೆ.

ಕಿರಿಕ್​ ಪಾರ್ಟಿ ತೆರೆಕಂಡಾಗ ಕರ್ನಾಟಕದ ಕ್ರಶ್​ ಆಗಿದ್ದ ರಶ್ಮಿಕಾ, ನಂತರ ಇಂಡಿಯಾ ಕ್ರಶ್​ ಆದರು. ಇಂಥ ಬ್ಯೂಟಿ ಚಿಕ್ಕ ವಯಸ್ಸಿನಲ್ಲೂ ಕ್ಯೂಟ್​ ಆಗಿದ್ದರು ಎಂದು ಅಭಿಮಾನಿಗಳು ಹೇಳಿದ್ದಾರೆ. ಚೈಲ್ಡ್​ಹುಡ್​ ಫೋಟೋ ನೋಡಿ ಅಭಿಮಾನಿಗಳು ಸಖತ್​ ಖುಷಿಯಾಗಿದ್ದಾರೆ.  

ಕೊರೊನಾ ವೈರಸ್​ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಹೀಗಾಗಿ, ದೇಶದ ಅನೇಕ ರಾಜ್ಯಗಳಲ್ಲಿ ಕಠಿಣ ಲಾಕ್​ಡೌನ್​ ಜಾರಿಗೆ ತರಲಾಗಿದೆ. ಇದಕ್ಕಾಗಿ ಶೂಟಿಂಗ್​ ಕೂಡ ನಿಲ್ಲಿಸಲಾಗಿದೆ. ಇದರಿಂದ ಸಿನಿಮಾ ಮಂದಿ ಮನೆಯಲ್ಲೇ ಇರುವಂತಾಗಿದೆ. ಹೀಗಾಗಿ, ಸೆಲೆಬ್ರಿಟಿಗಳು ವಿಡಿಯೋ ಹಾಗೂ Throwback ಫೋಟೋಗಳನ್ನು ಹಾಕುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಮಿಷನ್ ಮಜ್ನು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಶ್ಮಿಕಾ ಗುಡ್ ಬೈ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ವೃತ್ತಿ ಜೀವನದ ದೃಷ್ಟಿಯಿಂದ ಇದು ಬಹಳ ಮಹತ್ವ ಪಡೆದುಕೊಂಡಿದೆ. ಇದಲ್ಲದೆ, ತೆಲುಗಿನಲ್ಲಿ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಡಿ-ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕಾಡಿನ ಹಿನ್ನೆಲೆಯಲ್ಲಿ ನಡೆಯಲಿದೆ. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ಮೂಡಿ ಬರಲಿದೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: Pushpa: ರಶ್ಮಿಕಾ-ಅಲ್ಲು ಅರ್ಜುನ್ ನಟನೆಯ​ ‘ಪುಷ್ಪ’ ಚಿತ್ರಕ್ಕೆ ಹೆಸರು ಚೇಂಜ್​; ಯಾಕಿಂಥ ನಿರ್ಧಾರ?

‘ಕಿರಿಕ್​ ಪಾರ್ಟಿ ಹಿಂದಿ ರಿಮೇಕ್​ನಲ್ಲಿ ನಾನು ನಟಿಸಲ್ಲ’; ರಶ್ಮಿಕಾ ಖಡಕ್​ ನಿರ್ಧಾರಕ್ಕಿದೆ ಬಲವಾದ ಕಾರಣ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!