AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಶ್ಮಿಕಾ ಮಂದಣ್ಣ ಕಾಲೇಜ್​ ದಿನಗಳ ಫೋಟೋ ವೈರಲ್​; ಹೇಗಿದ್ರು ನೋಡಿ ನ್ಯಾಷನಲ್​ ಕ್ರಶ್

ಸಾಕಷ್ಟು ಹೀರೋಯಿನ್​ಗಳು ಕಾಲೇಜು ದಿನಗಳಲ್ಲಿ ನೋಡಲು ಸಿಂಪಲ್​ ಆಗಿದ್ದರೂ ಸಿನಿಮಾ ಇಂಡಸ್ಟ್ರಿಗೆ ಬಂದ ನಂತರ ಬದಲಾಗುತ್ತಾರೆ. ಅವರಲ್ಲಿ ಹೆಚ್ಚುವ ಸೌಂದರ್ಯಪ್ರಜ್ಞೆಯಿಂದ ಮತ್ತಷ್ಟು ಅಂದವಾಗಿ ಕಾಣುತ್ತಾರೆ.

ನಟಿ ರಶ್ಮಿಕಾ ಮಂದಣ್ಣ ಕಾಲೇಜ್​ ದಿನಗಳ ಫೋಟೋ ವೈರಲ್​; ಹೇಗಿದ್ರು ನೋಡಿ ನ್ಯಾಷನಲ್​ ಕ್ರಶ್
ನಟಿ ರಶ್ಮಿಕಾ ಮಂದಣ್ಣ ಕಾಲೇಜ್​ ದಿನಗಳ ಫೋಟೋ ವೈರಲ್​
ರಾಜೇಶ್ ದುಗ್ಗುಮನೆ
| Edited By: |

Updated on: May 30, 2021 | 7:24 AM

Share

ನಟಿ ರಶ್ಮಿಕಾ ಮಂದಣ್ಣ ಸ್ಯಾಂಡಲ್​ವುಡ್​, ಟಾಲಿವುಡ್​, ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರೆ. ಅವರನ್ನು ಹೀರೋಯಿನ್​ ಆಗಿ ಆಯ್ಕೆ ಮಾಡಿಕೊಳ್ಳೋಕೆ ದೊಡ್ಡದೊಡ್ಡ ನಿರ್ಮಾಪಕರು ಸದಾ ರೆಡಿ ಆಗಿರುತ್ತಾರೆ. ಈಗ ಅವರ ಕಾಲೇಜು ದಿನಗಳ ಪೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗುತ್ತಿದೆ.

ಸಾಕಷ್ಟು ಹೀರೋಯಿನ್​ಗಳು ಕಾಲೇಜು ದಿನಗಳಲ್ಲಿ ನೋಡಲು ಸಿಂಪಲ್​ ಆಗಿದ್ದರೂ ಸಿನಿಮಾ ಇಂಡಸ್ಟ್ರಿಗೆ ಬಂದ ನಂತರ ಬದಲಾಗುತ್ತಾರೆ. ಅವರಲ್ಲಿ ಹೆಚ್ಚುವ ಸೌಂದರ್ಯಪ್ರಜ್ಞೆಯಿಂದ ಮತ್ತಷ್ಟು ಅಂದವಾಗಿ ಕಾಣುತ್ತಾರೆ. ಕಾಲೇಜು ದಿನಗಳಲ್ಲಿ ನಟಿಮಣಿಯರು ಹೇಗಿದ್ದರು ಎಂಬ ಫೋಟೋಗಳನ್ನು ಅಭಿಮಾನಿಗಳು ಈ ಮೊದಲು ಹಂಚಿಕೊಂಡಿದ್ದಿದೆ. ಈಗ ರಶ್ಮಿಕಾ ಅಭಿಮಾನಿಗಳ ಸರದಿ.

ರಶ್ಮಿಕಾ ಅವರು ಕಾಲೇಜು ದಿನಗಳಲ್ಲಿ ಗೆಳತಿಯರ ಜತೆಗೆ ತೆಗಿಸಿಕೊಂಡಿರುವುದು ಎನ್ನಲಾದ ಫೋಟೋ ಒಂದು ಈಗ ವೈರಲ್​ ಆಗಿದೆ. ಇದನ್ನು ನೋಡಿದ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಾಕಷ್ಟು ಟ್ರೋಲ್​ ಪೇಜ್​ಗಳಲ್ಲೂ ಈ ಫೋಟೋ ವೈರಲ್​ ಆಗುತ್ತಿದೆ.

ರಶ್ಮಿಕಾ ಮಂದಣ್ಣ ಇತ್ತೀಚೆಗೆ ಬಾಲ್ಯದ ಫೋಟೋ ಒಂದನ್ನು ಹಂಚಿಕೊಂಡು ಅಚ್ಚರಿ ಮೂಡಿಸಿದ್ದರು.  ಆ ಫೋಟೋಗೆ ಕ್ಯಾಪ್ಶನ್ ನೀಡಿದ್ದ ಅವರು, ಕೊರೊನಾ ಹೋಗುವುದನ್ನು ಕಾಯುವುದು ಹೀಗೆಯೇ ಇರುತ್ತದೆ ಎಂದು ಕುಹಕವಾಡಿದ್ದರು. ಅಲ್ಲದೆ, ಇದಕ್ಕೆ #ThrowbackThursday ಎಂದು ಹ್ಯಾಶ್ಟ್ಯಾಗ್ ಕೂಡ ನೀಡಿದ್ದರು.

ರಶ್ಮಿಕಾ ಮಂದಣ್ಣ ಅವರು ‘ಮಿಷನ್ ಮಜ್ನು’, ‘ಗುಡ್ ಬೈ’ ಚಿತ್ರದಲ್ಲೂ ನಟಿಸುತ್ತಿದ್ದಾರೆ. ‘ಗುಡ್ ಬೈ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ವೃತ್ತಿ ಜೀವನದ ದೃಷ್ಟಿಯಿಂದ ಇದು ಬಹಳ ಮಹತ್ವ ಪಡೆದುಕೊಂಡಿದೆ. ಇದಲ್ಲದೆ, ತೆಲುಗಿನಲ್ಲಿ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ಸಿನಿಮಾದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಡಿ-ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕಾಡಿನ ಹಿನ್ನೆಲೆಯಲ್ಲಿ ನಡೆಯಲಿದೆ. ಎರಡು ಪಾರ್ಟ್​ಗಳಲ್ಲಿ ಮೂಡಿ ಬರಲಿದೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: ಈ ಫೋಟೋದಲ್ಲಿರುವ ಸ್ಯಾಂಡಲ್​ವುಡ್​ ಬ್ಯೂಟಿ ಯಾರು ಎಂದು ಗೆಸ್​ ಮಾಡ್ತೀರಾ?

‘ಕಿರಿಕ್​ ಪಾರ್ಟಿ ಹಿಂದಿ ರಿಮೇಕ್​ನಲ್ಲಿ ನಾನು ನಟಿಸಲ್ಲ’; ರಶ್ಮಿಕಾ ಖಡಕ್​ ನಿರ್ಧಾರಕ್ಕಿದೆ ಬಲವಾದ ಕಾರಣ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?