AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಸಿನಿ ಬದುಕಿಗೆ ಐದು ವರ್ಷ; ತಾವು ಕಲಿತ ಪಾಠದ ಬಗ್ಗೆ ಹೇಳಿಕೊಂಡ ನಟಿ

ಸಿನಿ ಬದುಕಿನಲ್ಲಿ ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ ರಶ್ಮಿಕಾ. ಈ ಫೋಟೋಗೆ ಉದ್ದನೆಯ ಕ್ಯಾಪ್ಶನ್​ ಬರೆದಿದ್ದಾರೆ.

Rashmika Mandanna: ರಶ್ಮಿಕಾ ಮಂದಣ್ಣ ಸಿನಿ ಬದುಕಿಗೆ ಐದು ವರ್ಷ; ತಾವು ಕಲಿತ ಪಾಠದ ಬಗ್ಗೆ ಹೇಳಿಕೊಂಡ ನಟಿ
ರಶ್ಮಿಕಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 30, 2021 | 7:05 PM

Share

2016ರ ಡಿಸೆಂಬರ್​ 30ರಂದು ಕನ್ನಡದ ‘ಕಿರಿಕ್​ ಪಾರ್ಟಿ’ ಸಿನಿಮಾ ತೆರೆಗೆ ಬಂದಿತ್ತು. ರಕ್ಷಿತ್​ ಶೆಟ್ಟಿ (Rakshit Shetty) ನಟನೆಯ ಈ ಸಿನಿಮಾದ ಮೂಲಕ ರಶ್ಮಿಕಾ ಮಂದಣ್ಣ (Rashmika Mandanna) ಬಣ್ಣದ ಬದುಕು ಆರಂಭಿಸಿದರು. ಈ ಸಿನಿಮಾ ತೆರೆಗೆ ಬಂದು ಇಂದಿಗೆ ಐದು ವರ್ಷ ಕಳೆದಿದೆ. ‘ಕಿರಿಕ್​ ಪಾರ್ಟಿ’ ಸಿನಿಮಾ ರಶ್ಮಿಕಾ ವೃತ್ತಿ ಜೀವನದ ದಿಕ್ಕನ್ನೇ ಬದಲಿಸಿದೆ. ಈ ಐದು ವರ್ಷದಲ್ಲಿ ರಶ್ಮಿಕಾ ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಅವರು ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಕಲಿತಿದ್ದಾರೆ. ಈ ಬಗ್ಗೆ ರಶ್ಮಿಕಾ ಬರೆದುಕೊಂಡಿದ್ದಾರೆ. ಸಿನಿ ಬದುಕಿನಲ್ಲಿ ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ ರಶ್ಮಿಕಾ. ಈ ಫೋಟೋಗೆ ಉದ್ದನೆಯ ಕ್ಯಾಪ್ಶನ್​ ಬರೆದಿದ್ದಾರೆ. ತಾವು ಕಲಿತ ವಿಚಾರಗಳ ಬಗ್ಗೆ ಇಲ್ಲಿ ಹೇಳಿಕೊಂಡಿದ್ದಾರೆ. ಹಾಗಾದರೆ, ರಶ್ಮಿಕಾ ಮಂದಣ್ಣ ಕಲಿತ ಅಂಶಗಳೇನು? ಆ ಬಗ್ಗೆ ಇಲ್ಲಿದೆ ಮಾಹಿತಿ.

  1. ಸಮಯ ಬೇಗ ಕಳೆದು ಹೋಗುತ್ತದೆ. ಪ್ರತಿ ದಿನವೂ ಸವಿ ನೆನಪುಗಳನ್ನು ಸೃಷ್ಟಿಸಿಕೊಳ್ಳಿ.
  2. ಮನಸ್ಸಿನಿಂದ ಸಂತೋಷವಾಗಿರುವುದನ್ನು ಹೇಗೆ ಎಂಬುದನ್ನು ಕಲಿತೆ.
  3. ಜೀವನದಲ್ಲಿ ಯಾವುದೂ ಸುಲಭವಲ್ಲ ಎಂದು ನಾನು ಅರಿತೆ. ನಿಮಗೆ ಬೇಕಾದ ವಿಚಾರಕ್ಕೆ ಯಾವಾಗಲೂ ಹೋರಾಡುತ್ತಲೇ ಇರಬೇಕು.
  4. ಆದರೆ, ತಾಳ್ಮೆಯಿಂದಿರಿ. ಎಲ್ಲವೂ ಆಗಬೇಕಾದ ಸಂದರ್ಭದಲ್ಲಿ ಆಗುತ್ತದೆ. ಎಲ್ಲದಕ್ಕೂ ತಾಳ್ಮೆ ಬೇಕು.
  5. ಜನರು ಯಾವಾಗಲೂ ನಿಮಗೆ ಏನನ್ನಾದರೂ ಕಲಿಸುತ್ತಾರೆ. ಕಲಿಯಲು ಯಾವಾಗಲೂ ಮುಕ್ತರಾಗಿರಿ. ಅಂದಾಗ ಮಾತ್ರ ನೀವು ಅನೇಕ ವಿಷಯಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ.
  6. ಭಾವನಾತ್ಮಕ, ಮಾನಸಿಕ ಹೊರೆಯನ್ನು ಹೊತ್ತುಕೊಂಡು ಸಾಗಬೇಡಿ. ಹೋಗಲು ಬಿಡಿ. ಬಿಟ್ಟು ಬದುಕುವುದನ್ನು ಕಲಿಯಿರಿ.
  7. ನಿಮಗೆ ಇಷ್ಟವಾದವರಿಗೆ ಸಮಯ ನೀಡಿ.
  8. ಉತ್ತಮವಾದ ಆಹಾರ ಸೇವಿಸಿ. ಹಾಯಾಗಿ ನಿದ್ರಿಸಿ, ವರ್ಕೌಟ್​ ಮಾಡಿ. ದೊಡ್ಡದಾದ ನಗು ಇರಲಿ. ಮುಕ್ತವಾಗಿ ಪ್ರೀತಿಸಿ
  9. ನೀವು ಮೊದಲು ನಿಮ್ಮ ಬಗ್ಗೆ ಯೋಚಿಸಿ. ನಿಮಗೆ ನೀವು ಆದ್ಯತೆ ನೀಡಿ.

ರಶ್ಮಿಕಾ ಸದ್ಯ ‘ಪುಷ್ಪ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದಲ್ಲದೆ, ಬಾಲಿವುಡ್​ನ ಎರಡು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಖುಷಿಗೆ ಸಿಕ್ತು ಇನ್ನೊಂದು ಕಾರಣ; ‘ಕಿರಿಕ್​ ಬ್ಯೂಟಿ’ಯನ್ನು ಹಿಂಬಾಲಿಸ್ತಾರೆ 2.5 ಕೋಟಿ ಜನ

‘ಪುಷ್ಪ’ ಗೆಲುವಿನ ಬಳಿಕ ರಶ್ಮಿಕಾಗೆ ಬಂಪರ್​ ಚಾನ್ಸ್​; ಮತ್ತೋರ್ವ ಸ್ಟಾರ್​ ನಟನಿಗೆ ಕೊಡಗಿನ ಕುವರಿ ಜೋಡಿ?

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ