AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಈ ವಿಲಕ್ಷಣ ಅಭ್ಯಾಸ ನಿಮಗೂ ಇದೆಯೇ’; ರಶ್ಮಿಕಾ ಮಂದಣ್ಣ ಪ್ರಶ್ನೆಗೆ ಉತ್ತರಿಸಿ..

ರಶ್ಮಿಕಾ ಅವರು ಚೀಟ್ ಡೇ ಮಾಡುತ್ತಾರೆ. ಅ ದಿನ ರಶ್ಮಿಕಾ ಒಂದು ವಿಲಕ್ಷಣ ಕೆಲಸ ಮಾಡುತ್ತಾರಂತೆ. ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ.

Rashmika Mandanna: ‘ಈ ವಿಲಕ್ಷಣ ಅಭ್ಯಾಸ ನಿಮಗೂ ಇದೆಯೇ’; ರಶ್ಮಿಕಾ ಮಂದಣ್ಣ ಪ್ರಶ್ನೆಗೆ ಉತ್ತರಿಸಿ..
ರಶ್ಮಿಕಾ
Follow us
ರಾಜೇಶ್ ದುಗ್ಗುಮನೆ
|

Updated on:Jun 29, 2023 | 9:34 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳನ್ನು ಸೆಳೆಯಲು ಅವರು ನಿತ್ಯ ಹೊಸಹೊಸ ಪೋಸ್ಟ್ ಹಾಕುತ್ತಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 3.8 ಕೋಟಿ ಹಿಂಬಾಲಕರಿದ್ದಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಪೋಸ್ಟ್ ಒಂದು ಸಖತ್ ವೈರಲ್ ಆಗುತ್ತಿದೆ. ಅವರು ಕೇಳಿದ ಪ್ರಶ್ನೆಗೆ ಅನೇಕರು ಉತ್ತರಿಸುವ ಪ್ರಯತ್ನ ಮಾಡಿದ್ದಾರೆ. ಅವರು ಮಾಡಿರುವ ಪೋಸ್ಟ್​ ಚೀಟ್ ಡೇ ಬಗ್ಗೆ ಇದೆ. ಅಷ್ಟಕ್ಕೂ ಏನು ಇದು? ರಶ್ಮಿಕಾ ಬರೆದುಕೊಂಡಿದ್ದು ಏನು? ಆ ಬಗ್ಗೆ ಇಲ್ಲಿದೆ ವಿವರ.

ರಶ್ಮಿಕಾ ಮಂದಣ್ಣ ಅವರು ಫಿಟ್ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಈ ಕಾರಣಕ್ಕೆ ಅವರು ನಿತ್ಯ ಯೋಗ ಹಾಗೂ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಾರೆ. ಈ ಬಗ್ಗೆ ಆಗಾಗ ಅಪ್​ಡೇಟ್ ನೀಡುತ್ತಾರೆ. ಇದರ ಜೊತೆಗೆ ಅವರು ಚೀಟ್ ಡೇ ಕೂಡ ಮಾಡುತ್ತಾರೆ. ಅಂದರೆ, ತಾವು ಫಾಲೋ ಮಾಡುವ ಡಯಟ್​ಗೆ ಬ್ರೇಕ್ ಕೊಟ್ಟು ತಮ್ಮಿಷ್ಟದ ಆಹಾರ ತಿನ್ನುವುದು. ಚೀಟ್​ ಡೇ ದಿನ ರಶ್ಮಿಕಾ ಒಂದು ವಿಲಕ್ಷಣ ಕೆಲಸ ಮಾಡುತ್ತಾರಂತೆ. ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ.

ಪ್ಲೇಟ್​ನಲ್ಲಿ ರಶ್ಮಿಕಾ ಸ್ವೀಟ್ ಹಿಡಿದು ಕುಳಿತಿದ್ದಾರೆ. ಊಟ ಆದ ಬಳಿಕ ಸಿಹಿ ತಿನ್ನಲಾಗುತ್ತದೆ. ಆದರೆ, ಊಟಕ್ಕೂ ಮೊದಲು ಸ್ವೀಟ್ ತಿನ್ನುವ ಅಭ್ಯಾಸ ಅವರಿಗೆ ಇದೆ. ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ. ‘ಚೀಟ್​ ಡೇ ದಿನ ನಾನು ಊಟಕ್ಕೂ ಮೊದಲು ಸಿಹಿ ತಿಂಡಿಯನ್ನು ಆರ್ಡರ್ ಮಾಡುತ್ತೇನೆ. ನನ್ನ ಗೆಳೆಯರು ಇದನ್ನು ವಿಲಕ್ಷಣ ಎಂದು ಭಾವಿಸಿದ್ದಾರೆ. ಇದನ್ನು ನಾನೊಬ್ಬಳೇ ಮಾಡುತ್ತೇನಾ? ಅಥವಾ ನನ್ನಂತೆ ಇನ್ನೂ ಅನೇಕರಿದ್ದಾರೆಯೇ ಎಂಬುದು ನನಗೆ ಗೊತ್ತಾಗಬೇಕಿದೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಡೇಟಿಂಗ್ ಮಾಡ್ತಿರೋದು ನಿಜ; ವಿಡಿಯೋ ಸಾಕ್ಷಿ ತಂದ ಫ್ಯಾನ್ಸ್

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಹೈದರಾಬಾದ್ ರೆಸ್ಟೋರೆಂಟ್ ಒಂದರಲ್ಲಿ ಕಾಣಿಸಿಕೊಂಡು ಸುದ್ದಿ ಆಗಿದ್ದರು. ಅವರ ಜೊತೆ ವಿಜಯ್ ದೇವರಕೊಂಡ ಹಾಗೂ ಫ್ಯಾಮಿಲಿ ಕೂಡ ಇತ್ತು. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಗೆ ಇದು ಬಲ ನೀಡಿತ್ತು. ರಶ್ಮಿಕಾ ಅವರು ಬ್ಯಾಕ್​ ಟು ಬ್ಯಾಕ್ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ‘ಅನಿಮಲ್’ ಸಿನಿಮಾ ಆಗಸ್ಟ್​​​ನಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:28 am, Thu, 29 June 23

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ