AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿದ ರಶ್ಮಿಕಾ; ನಟಿಯ ದ್ವೇಷಿಸಲು ಹೊಸ ಕಾರಣ

ರಶ್ಮಿಕಾ ಮಂದಣ್ಣ ಅವರು ‘ನಾನು ಹೈದರಾಬಾದ್​ನವಳು’ ಎಂದು ಹೇಳಿಕೊಂಡ ನಂತರ ಕರ್ನಾಟಕದಲ್ಲಿ ತೀವ್ರ ಟೀಕೆ ಎದುರಿಸುತ್ತಿದ್ದಾರೆ. ಇದು ಅವರ ಹಿಂದಿನ ‘ಕನ್ನಡ ಬರಲ್ಲ’ ಎಂಬ ಹೇಳಿಕೆಯನ್ನು ನೆನಪಿಸುತ್ತದೆ. ಅವರ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ‘ಛಾವಾ’ ಚಿತ್ರದ ಪ್ರಚಾರದ ಸಮಯದಲ್ಲಿ ಈ ಹೇಳಿಕೆಯನ್ನು ನೀಡಲಾಗಿದೆ.

‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿದ ರಶ್ಮಿಕಾ; ನಟಿಯ ದ್ವೇಷಿಸಲು ಹೊಸ ಕಾರಣ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Feb 14, 2025 | 8:28 AM

Share

ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಅವರನ್ನು ದ್ವೇಷಿಸುವವರ ಸಂಖ್ಯೆ ದೊಡ್ಡದಿದೆ. ಇದಕ್ಕೆ ಕಾರಣ ಹಲವು. ಈಗ ಅವರನ್ನು ಟ್ರೋಲ್ ಮಾಡಲು ಹೊಸ ಕಾರಣ ಸಿಕ್ಕಿದೆ. ರಶ್ಮಿಕಾ ಅವರು ‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಇದನ್ನು ಅನೇಕರು ಟ್ರೋಲ್ ಮಾಡುತ್ತಾ ಇದ್ದಾರೆ. ಅವರ ಹೇಳಿಕೆ ಚರ್ಚೆಗೆ ಕಾರಣ ಆಗಿದೆ.

ರಶ್ಮಿಕಾ ಮಂದಣ್ಣ ಅವರು ‘ಛಾವಾ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಜೊತೆ ನಟಿಸಿದ್ದಾರೆ. ಇಂದು (ಫೆಬ್ರವರಿ 14) ಈ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಈವೆಂಟ್ ಒಂದು ಮುಂಬೈನಲ್ಲಿ ನಡೆದಿತ್ತು. ಅದರಲ್ಲಿ ರಶ್ಮಿಕಾ ಅವರು ಈ ಮಾತನ್ನು ಹೇಳಿದರು. ರಶ್ಮಿಕಾಗೆ ಕರ್ನಾಟಕ ಸಂಪೂರ್ಣವಾಗಿ ಮರೆತು ಹೋಗಿದೆ ಎಂದು ಅನೇಕರು ಹೇಳಿದ್ದಾರೆ. ಈ ವಿಚಾರದಲ್ಲಿ ಅವರನ್ನು ವಹಿಸಿಕೊಂಡು ಮಾತನಾಡಿದವರು ಕಡಿಮೆ.

‘ನಾನು ಹೈದರಾಬಾದ್​ನವಳು. ನಾನು ಅಲ್ಲಿಂದ ಒಬ್ಬಂಟಿಯಾಗಿ ಬಂದಿದ್ದೇನೆ. ಬಹುಶಃ ನಾನು ಈಗ ನಿಮ್ಮ ಕುಟುಂಬದ ಭಾಗ ಆಗಿದ್ದೇನೆ ಎಂದುಕೊಳ್ಳುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಕನ್ನಡಿಗರು ರಶ್ಮಿಕಾ ಬಗ್ಗೆ ಟೀಕೆ ಹೊರಹಾಕಿದ್ದಾರೆ.

‘ರಶ್ಮಿಕಾ ಯಾವಾಗ ಹೈದರಾಬಾದ್​ನವರಾದರು? ಇದನ್ನು ಜನನ ಪ್ರಮಾಣಪತ್ರದಲ್ಲಿ ಸೇರಿಸಿದ್ದಾರಾ’ ಎಂದು ಕೆಲವರು ಕೇಳಿದ್ದಾರೆ. ಇನ್ನೂ ಕೆಲವರು, ‘ವಿಜಯ್ ದೇವರಕೊಂಡ ಅವರನ್ನು ವಿವಾಹ ಆಗುವ ಮೊದಲೇ ರಶ್ಮಿಕಾ ಹೈದರಾಬಾದ್​ನವರಾಗಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ. ‘ಪ್ರೀತಿಗಾಗಿ ಊರನ್ನೇ ಮರೆತ ರಶ್ಮಿಕಾ’ ಎಂದು ಕೆಲವರು ಹೇಳಿಕೊಂಡಿದ್ದಾರೆ. ‘ನಿಮ್ಮನ್ನು ದ್ವೇಷಿಸಲು ನಿತ್ಯ ಹೊಸ ಹೊಸ ಕಾರಣ ನೀಡುತ್ತೀರಿ’ ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರೇಮಿಗಳ ದಿನಾಚರಣೆಗೆ ರಶ್ಮಿಕಾ ಮಂದಣ್ಣ ಎಂಟ್ರಿ; ಸ್ಪರ್ಧೆಗೆ ಇಳಿದವರು ಯಾರ್ಯಾರು?

ರಶ್ಮಿಕಾ ಮಂದಣ್ಣ ಅವರು ಈ ರೀತಿಯ ಹೇಳಿಕೆಯನ್ನು ಈ ಮೊದಲಿನಿಂದಲೂ ನೀಡುತ್ತಾ ಬರುತ್ತಿದ್ದಾರೆ. ಈ ಮೊದಲು ಅವರು ‘ನನಗೆ ಕನ್ನಡವೂ ಬರಲ್ಲ’ ಎಂದು ಸಂದರ್ಶನ ಒಂದರಲ್ಲಿ ಹೇಳಿ ಟೀಕೆಗೆ ಗುರಿಯಾಗಿದ್ದರು. ಈಗ ಅವರ ಮೇಲೆ ದ್ವೇಷ ಹೆಚ್ಚುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.