AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿದ ರಶ್ಮಿಕಾ; ನಟಿಯ ದ್ವೇಷಿಸಲು ಹೊಸ ಕಾರಣ

ರಶ್ಮಿಕಾ ಮಂದಣ್ಣ ಅವರು ‘ನಾನು ಹೈದರಾಬಾದ್​ನವಳು’ ಎಂದು ಹೇಳಿಕೊಂಡ ನಂತರ ಕರ್ನಾಟಕದಲ್ಲಿ ತೀವ್ರ ಟೀಕೆ ಎದುರಿಸುತ್ತಿದ್ದಾರೆ. ಇದು ಅವರ ಹಿಂದಿನ ‘ಕನ್ನಡ ಬರಲ್ಲ’ ಎಂಬ ಹೇಳಿಕೆಯನ್ನು ನೆನಪಿಸುತ್ತದೆ. ಅವರ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ‘ಛಾವಾ’ ಚಿತ್ರದ ಪ್ರಚಾರದ ಸಮಯದಲ್ಲಿ ಈ ಹೇಳಿಕೆಯನ್ನು ನೀಡಲಾಗಿದೆ.

‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿದ ರಶ್ಮಿಕಾ; ನಟಿಯ ದ್ವೇಷಿಸಲು ಹೊಸ ಕಾರಣ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Feb 14, 2025 | 8:28 AM

Share

ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಅವರನ್ನು ದ್ವೇಷಿಸುವವರ ಸಂಖ್ಯೆ ದೊಡ್ಡದಿದೆ. ಇದಕ್ಕೆ ಕಾರಣ ಹಲವು. ಈಗ ಅವರನ್ನು ಟ್ರೋಲ್ ಮಾಡಲು ಹೊಸ ಕಾರಣ ಸಿಕ್ಕಿದೆ. ರಶ್ಮಿಕಾ ಅವರು ‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಇದನ್ನು ಅನೇಕರು ಟ್ರೋಲ್ ಮಾಡುತ್ತಾ ಇದ್ದಾರೆ. ಅವರ ಹೇಳಿಕೆ ಚರ್ಚೆಗೆ ಕಾರಣ ಆಗಿದೆ.

ರಶ್ಮಿಕಾ ಮಂದಣ್ಣ ಅವರು ‘ಛಾವಾ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಜೊತೆ ನಟಿಸಿದ್ದಾರೆ. ಇಂದು (ಫೆಬ್ರವರಿ 14) ಈ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಈವೆಂಟ್ ಒಂದು ಮುಂಬೈನಲ್ಲಿ ನಡೆದಿತ್ತು. ಅದರಲ್ಲಿ ರಶ್ಮಿಕಾ ಅವರು ಈ ಮಾತನ್ನು ಹೇಳಿದರು. ರಶ್ಮಿಕಾಗೆ ಕರ್ನಾಟಕ ಸಂಪೂರ್ಣವಾಗಿ ಮರೆತು ಹೋಗಿದೆ ಎಂದು ಅನೇಕರು ಹೇಳಿದ್ದಾರೆ. ಈ ವಿಚಾರದಲ್ಲಿ ಅವರನ್ನು ವಹಿಸಿಕೊಂಡು ಮಾತನಾಡಿದವರು ಕಡಿಮೆ.

‘ನಾನು ಹೈದರಾಬಾದ್​ನವಳು. ನಾನು ಅಲ್ಲಿಂದ ಒಬ್ಬಂಟಿಯಾಗಿ ಬಂದಿದ್ದೇನೆ. ಬಹುಶಃ ನಾನು ಈಗ ನಿಮ್ಮ ಕುಟುಂಬದ ಭಾಗ ಆಗಿದ್ದೇನೆ ಎಂದುಕೊಳ್ಳುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಕನ್ನಡಿಗರು ರಶ್ಮಿಕಾ ಬಗ್ಗೆ ಟೀಕೆ ಹೊರಹಾಕಿದ್ದಾರೆ.

‘ರಶ್ಮಿಕಾ ಯಾವಾಗ ಹೈದರಾಬಾದ್​ನವರಾದರು? ಇದನ್ನು ಜನನ ಪ್ರಮಾಣಪತ್ರದಲ್ಲಿ ಸೇರಿಸಿದ್ದಾರಾ’ ಎಂದು ಕೆಲವರು ಕೇಳಿದ್ದಾರೆ. ಇನ್ನೂ ಕೆಲವರು, ‘ವಿಜಯ್ ದೇವರಕೊಂಡ ಅವರನ್ನು ವಿವಾಹ ಆಗುವ ಮೊದಲೇ ರಶ್ಮಿಕಾ ಹೈದರಾಬಾದ್​ನವರಾಗಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ. ‘ಪ್ರೀತಿಗಾಗಿ ಊರನ್ನೇ ಮರೆತ ರಶ್ಮಿಕಾ’ ಎಂದು ಕೆಲವರು ಹೇಳಿಕೊಂಡಿದ್ದಾರೆ. ‘ನಿಮ್ಮನ್ನು ದ್ವೇಷಿಸಲು ನಿತ್ಯ ಹೊಸ ಹೊಸ ಕಾರಣ ನೀಡುತ್ತೀರಿ’ ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರೇಮಿಗಳ ದಿನಾಚರಣೆಗೆ ರಶ್ಮಿಕಾ ಮಂದಣ್ಣ ಎಂಟ್ರಿ; ಸ್ಪರ್ಧೆಗೆ ಇಳಿದವರು ಯಾರ್ಯಾರು?

ರಶ್ಮಿಕಾ ಮಂದಣ್ಣ ಅವರು ಈ ರೀತಿಯ ಹೇಳಿಕೆಯನ್ನು ಈ ಮೊದಲಿನಿಂದಲೂ ನೀಡುತ್ತಾ ಬರುತ್ತಿದ್ದಾರೆ. ಈ ಮೊದಲು ಅವರು ‘ನನಗೆ ಕನ್ನಡವೂ ಬರಲ್ಲ’ ಎಂದು ಸಂದರ್ಶನ ಒಂದರಲ್ಲಿ ಹೇಳಿ ಟೀಕೆಗೆ ಗುರಿಯಾಗಿದ್ದರು. ಈಗ ಅವರ ಮೇಲೆ ದ್ವೇಷ ಹೆಚ್ಚುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ