AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದಾರೆ ನೋಡಿ ರಶ್ಮಿಕಾ ತಂಗಿ; ಇಲ್ಲಿದೆ ಮಂದಣ್ಣ ಫ್ಯಾಮಿಲಿಯ ಲೇಟೆಸ್ಟ್​ ಫೋಟೋ

Rashmika Mandanna Family Photo: ರಶ್ಮಿಕಾ ಗೆಳತಿ ಮದುವೆ ಇತ್ತೀಚೆಗೆ ನಡೆಯಿತು. ಈ ಕಾರಣಕ್ಕೆ ರಶ್ಮಿಕಾ ಅವರು ಕೊಡಗಿಗೆ ಭೇಟಿ ನೀಡಿದ್ದರು. ಮದುವೆ ನಂತರದ ಅವರು ಕುಟುಂಬದ ಜತೆ ಸಮಯ ಕಳೆದಿದ್ದಾರೆ.

ಹೇಗಿದ್ದಾರೆ ನೋಡಿ ರಶ್ಮಿಕಾ ತಂಗಿ; ಇಲ್ಲಿದೆ ಮಂದಣ್ಣ ಫ್ಯಾಮಿಲಿಯ ಲೇಟೆಸ್ಟ್​ ಫೋಟೋ
ಕುಟುಂಬದ ಜತೆ ರಶ್ಮಿಕಾ
TV9 Web
| Edited By: |

Updated on:May 19, 2022 | 1:50 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ದೇಶ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಿಂದ ಆರಂಭವಾದ ಅವರ ಸಿನಿ ಬದುಕು ಈಗ ಬಾಲಿವುಡ್​​ವರೆಗೆ ಹೋಗಿ ನಿಂತಿದೆ. ಅನೇಕ ಸ್ಟಾರ್​ಗಳ ಜತೆ ರಶ್ಮಿಕಾ ತೆರೆಹಂಚಿಕೊಂಡಿದ್ದಾರೆ. ಹೀಗಾಗಿ, ದಿನ ಕಳೆದಂತೆ ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ರಶ್ಮಿಕಾ ಮಂದಣ್ಣ ಇತ್ತೀಚೆಗೆ ಹುಟ್ಟೂರಾದ ಕೊಡಗಿಗೆ (Kodagu) ಭೇಟಿ ನೀಡಿದ್ದರು. ಈ ವೇಳೆ ಅವರು ಫ್ಯಾಮಿಲಿ (Rashmika Mandanna Family) ಜತೆ ಸಮಯ ಕಳೆದಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ರಶ್ಮಿಕಾ ಅವರ ತಂಗಿ ಶಿಮನ್ ಮಂದಣ್ಣ ಹೈಲೈಟ್ ಆಗಿದ್ದಾಳೆ.

ರಶ್ಮಿಕಾ ಮಂದಣ್ಣ ಸಖತ್ ಬ್ಯುಸಿ ಆಗಿದ್ದಾರೆ. ಬಾಲಿವುಡ್​ನಲ್ಲಿ ಅವರು ನಟಿಸಿರುವ ‘ಗುಡ್​ಬೈ’ ಹಾಗೂ ‘ಮಿಷನ್​ ಮಜ್ನು’ ಚಿತ್ರದ ಕೊನೆಯ ಹಂತದ ಕೆಲಸಗಳು ಪ್ರಗತಿಯಲ್ಲಿದೆ. ‘ಪುಷ್ಪ 2’ ಚಿತ್ರದ ಕೆಲಸಗಳು ಜುಲೈನಿಂದ ಆರಂಭವಾಗಲಿದೆ. ‘ದಳಪತಿ’ ವಿಜಯ್ ಮುಂದಿನ ಸಿನಿಮಾಗೆ ರಶ್ಮಿಕಾ ನಾಯಕಿ. ಈ ಚಿತ್ರದ ಕೆಲಸಗಳೂ ಪ್ರಗತಿಯಲ್ಲಿವೆ. ಇದರ ಮಧ್ಯೆ ಬ್ರೇಕ್​ ತೆಗೆದುಕೊಳ್ಳಬೇಕು ಎಂದರೆ ಅದು ಕಷ್ಟವೇ. ಆದಾಗ್ಯೂ, ರಶ್ಮಿಕಾ ಬಿಡುವು ಮಾಡಿಕೊಂಡು ಕೊಡಗಿಗೆ ಬಂದಿದ್ದಾರೆ.

ಇದನ್ನೂ ಓದಿ
Image
ಅಬ್ಬಬ್ಬಾ.. ರಶ್ಮಿಕಾ ಚಿತ್ರಕ್ಕೆ ಈ ಪರಿ ಬೇಡಿಕೆ; ಬಹುಕೋಟಿ ಡೀಲ್​ಗಾಗಿ ಇಬ್ಬರ ನಡುವೆ ಬಿಗ್​ ಪೈಪೋಟಿ
Image
ಒಟಿಟಿಗೆ ಬಂದ ನಂತರ ಥಿಯೇಟರ್​ನಲ್ಲಿ ರೀ-ರಿಲೀಸ್ ಆಗುತ್ತಿದೆ ‘ಆರ್​ಆರ್​ಆರ್​’ ಸಿನಿಮಾ
Image
‘ನಾನು ಹಿಂದಿ ಹೀರೋ’ ಎಂದು ಗರ್ವ ತೋರಿಸಿ ಸೋತ ಜಾನ್​ ಅಬ್ರಾಹಂ ಸಿನಿಮಾಗೆ ಈಗ ಒಟಿಟಿ ಮಾತ್ರ ಗತಿ
Image
ಜ್ಯೂ. ಎನ್​ಟಿಆರ್​ ಬರ್ತ್​ಡೇ ದಿನವೇ ‘ಆರ್​ಆರ್​ಆರ್’ ಚಿತ್ರದ ಒಟಿಟಿ ಪ್ರೀಮಿಯರ್​; ಇಲ್ಲಿದೆ ಹೊಸ ಟ್ರೇಲರ್​

ರಶ್ಮಿಕಾ ಗೆಳತಿ ಮದುವೆ ಇತ್ತೀಚೆಗೆ ನಡೆಯಿತು. ಈ ಕಾರಣಕ್ಕೆ ರಶ್ಮಿಕಾ ಅವರು ಕೊಡಗಿಗೆ ಭೇಟಿ ನೀಡಿದ್ದರು. ಮದುವೆ ನಂತರದ ಅವರು ಕುಟುಂಬದ ಜತೆ ಸಮಯ ಕಳೆದಿದ್ದಾರೆ. ಕೊಡಗಿನಲ್ಲಿ ನಿರಂತರವಾಗಿ ಮಳೆ ಆಗುತ್ತಲೇ ಇದೆ. ಈ ಮಳೆಯನ್ನು ಅವರು ಎಂಜಾಯ್ ಮಾಡಿದ್ದಾರೆ. ಕುಟುಂಬದ ಜತೆಗೆ ಸೆಲ್ಫೀ ತೆಗೆದುಕೊಂಡಿದ್ದಾರೆ.

ರಶ್ಮಿಕಾ ಇನ್​​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ತಂದೆ ಮದನ್ ಮಂದಣ್ಣ, ತಾಯಿ ಸುಮನ್ ಮಂದಣ್ಣ ಹಾಗೂ ಶಿಮನ್ ಮಂದಣ್ಣ ಜತೆ ಅವರು ಪೋಸ್ ನೀಡಿದ್ದಾರೆ. ರಶ್ಮಿಕಾ ಸ್ಮೈಲ್ ಸಖತ್ ಹೈಲೈಟ್ ಆಗಿದೆ. ಈ ಫೋಟೋ ಕಂಡು ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ.

ರಶ್ಮಿಕಾ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವುದರಿಂದ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಅಪರೂಪಕ್ಕೆ ಅವರು ಇಡೀ ಕುಟುಂಬವನ್ನು ಪರಿಚಯಿಸಿರುವುದಕ್ಕೆ ಫ್ಯಾನ್ಸ್ ಸಂತಸಗೊಂಡಿದ್ದಾರೆ. ಈ ಫೋಟೋಗೆ 13 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿವೆ. ರಶ್ಮಿಕಾಗೆ ಇನ್​​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 3.1 ಕೋಟಿ ಹಿಂಬಾಲಕರಿದ್ದಾರೆ. ರಶ್ಮಿಕಾ ಅಭಿಮಾನಿ ಬಳಗ ದಿನ ಕಳೆದಂತೆ ದೊಡ್ಡದಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:49 pm, Thu, 19 May 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ