AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಬಗ್ಗೆ ಅಪ್ಸೆಟ್​ ಆದ ಕುಟುಂಬದವರು; ಸಂದರ್ಶನದಲ್ಲಿ ಅಳಲು ತೋಡಿಕೊಂಡ ನಟಿ

Rashmika Mandanna: ವಿಕಾಸ್​ ಬಹ್ಲ್​ ಆ್ಯಕ್ಷನ್​-ಕಟ್​ ಹೇಳುತ್ತಿರುವ  ‘ಗುಡ್​ಬೈ’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಹಿರಿಯ ನಟಿ ನೀನಾ ಗುಪ್ತಾ, ನಟ ಪವೈಲ್​ ಗುಲಾಟಿ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಬಗ್ಗೆ ಅಪ್ಸೆಟ್​ ಆದ ಕುಟುಂಬದವರು; ಸಂದರ್ಶನದಲ್ಲಿ ಅಳಲು ತೋಡಿಕೊಂಡ ನಟಿ
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Aug 05, 2021 | 5:42 PM

Share

ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಟಿಯರ ಸಾಲಿನಲ್ಲಿ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಮುಂಚೂಣಿಯಲ್ಲಿದ್ದಾರೆ. ಕೈಯಲ್ಲಿ ಹಲವು ಬಿಗ್​ ಬಜೆಟ್​ ಚಿತ್ರಗಳನ್ನು ಹೊಂದಿರುವ ಅವರಿಗೆ ಆಫರ್​ಗಳ ಕೊರತೆ ಆಗಿಲ್ಲ. ಇನ್ನೂ ಘೋಷಣೆ ಆಗದ ಹಲವು ಸಿನಿಮಾಗಳಿಗೆ ರಶ್ಮಿಕಾ ನಾಯಕಿ ಎನ್ನುವ ಗುಸುಗುಸು ಕೂಡ ಜೋರಾಗಿದೆ. ಇದರಲ್ಲಿ ಕೆಲವು ನಿಜವಿರಬಹುದು, ಇನ್ನೂ ಕೆಲವು ಸುಳ್ಳಾಗಿರಬಹುದು. ಆದರೆ, ರಶ್ಮಿಕಾಗೆ ಬೇಡಿಕೆ ಹೆಚ್ಚುತ್ತಿದೆ ಎಂಬುದಂತೂ ಸತ್ಯ. ಈ ಮಧ್ಯೆ ರಶ್ಮಿಕಾ ಮಂದಣ್ಣ ಸಂದರ್ಶನದಲ್ಲಿ ಅಚ್ಚರಿಯ ವಿಚಾರ ಒಂದನ್ನು ಹೇಳಿಕೊಂಡಿದ್ದಾರೆ.

ವಿಕಾಸ್​ ಬಹ್ಲ್​ ಆ್ಯಕ್ಷನ್​-ಕಟ್​ ಹೇಳುತ್ತಿರುವ  ‘ಗುಡ್​ಬೈ’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಹಿರಿಯ ನಟಿ ನೀನಾ ಗುಪ್ತಾ, ನಟ ಪವೈಲ್​ ಗುಲಾಟಿ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಬಾಲಿವುಡ್​ನಲ್ಲಿ  ಸಿದ್ಧಾರ್ಥ್​ ಮಲ್ಹೋತ್ರಾಗೆ ಜೋಡಿಯಾಗಿ ‘ಮಿಷನ್​ ಮಜ್ನು’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಟಾಲಿವುಡ್​ನಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ನಟಿಸಿರುವ ‘ಪುಷ್ಪ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಈ ಮೂರು ಚಿತ್ರಗಳ ಶೂಟಿಂಗ್​ಗಾಗಿ ರಶ್ಮಿಕಾ ಹೈದರಾಬಾದ್​ನಿಂದ ಮುಂಬೈ, ಮುಂಬೈನಿಂದ ಹೈದರಾಬಾದ್​ಗೆ ಪ್ರಯಾಣಿಸೋದು ಅನಿವಾರ್ಯ ಆಗಿದೆ. ಇದು ಅವರ ಕುಟುಂಬದವರ ಅಸಮಾಧಾನಕ್ಕೆ ಪ್ರಮುಖ ಕಾರಣ.

ಕೊವಿಡ್​ ಎರಡನೇ ಅಲೆ ನಿಧಾನವಾಗಿ ಕಡಿಮೆ ಆಗುತ್ತಿದೆ. ಈ ಬೆನ್ನಲ್ಲೇ ಮೂರನೇ ಅಲೆ ಬರುವ ಮುನ್ಸೂಚನೆ ಸಿಕ್ಕಿದೆ. ಎಲ್ಲ ಕಡೆಗಳಲ್ಲೂ ಕೊವಿಡ್​ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿಯೂ ಪ್ರಯಾಣ ಮಾಡೋದು ರಶ್ಮಿಕಾಗೆ ಅನಿವಾರ್ಯ. ಇದನ್ನು ಮನೆಯವರು ವಿರೋಧಿಸಿದ್ದಾರೆ.

ಈ ಬಗ್ಗೆ ಸಂದರ್ಶನದಲ್ಲಿ ರಶ್ಮಿಕಾ ಮಾತನಾಡಿದ್ದಾರೆ. ‘ಬೇರೆಬೇರೆ ಸಿನಿಮಾಗಳ ಶೂಟಿಂಗ್​ ಪಾಲ್ಗೊಳ್ಳುತ್ತಿರುವುದಕ್ಕೆ ನನ್ನ ಕುಟುಂಬ ಅಸಮಾಧಾನ ಹೊಂದಿದೆ. ಅವರ ಕಾಳಜಿ ನನಗೆ ಅರ್ಥ ಆಗುತ್ತದೆ. ಆದರೆ, ಶೂಟಿಂಗ್​ ಮುಂದೂಡುವುದು ನನ್ನ ಕೈನಲ್ಲಿಲ್ಲ. ಶೂಟಿಂಗ್​ ಮುಂದೂಡಿದರೆ ಸಾಕಷ್ಟು ಜನರಿಗೆ ತೊಂದರೆ ಆಗುತ್ತದೆ’ ಎಂದಿದ್ದಾರೆ ರಶ್ಮಿಕಾ.

ಇದನ್ನೂ ಓದಿ: Rashmika Mandanna: ಅಮಿತಾಭ್ ಬಚ್ಚನ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದಕ್ಕೆ ರಶ್ಮಿಕಾ ಮಂದಣ್ಣ ಹೇಳಿದ್ದೇನು?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ