AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಬಗ್ಗೆ ಅಪ್ಸೆಟ್​ ಆದ ಕುಟುಂಬದವರು; ಸಂದರ್ಶನದಲ್ಲಿ ಅಳಲು ತೋಡಿಕೊಂಡ ನಟಿ

Rashmika Mandanna: ವಿಕಾಸ್​ ಬಹ್ಲ್​ ಆ್ಯಕ್ಷನ್​-ಕಟ್​ ಹೇಳುತ್ತಿರುವ  ‘ಗುಡ್​ಬೈ’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಹಿರಿಯ ನಟಿ ನೀನಾ ಗುಪ್ತಾ, ನಟ ಪವೈಲ್​ ಗುಲಾಟಿ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಬಗ್ಗೆ ಅಪ್ಸೆಟ್​ ಆದ ಕುಟುಂಬದವರು; ಸಂದರ್ಶನದಲ್ಲಿ ಅಳಲು ತೋಡಿಕೊಂಡ ನಟಿ
ರಶ್ಮಿಕಾ ಮಂದಣ್ಣ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 05, 2021 | 5:42 PM

Share

ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಟಿಯರ ಸಾಲಿನಲ್ಲಿ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಮುಂಚೂಣಿಯಲ್ಲಿದ್ದಾರೆ. ಕೈಯಲ್ಲಿ ಹಲವು ಬಿಗ್​ ಬಜೆಟ್​ ಚಿತ್ರಗಳನ್ನು ಹೊಂದಿರುವ ಅವರಿಗೆ ಆಫರ್​ಗಳ ಕೊರತೆ ಆಗಿಲ್ಲ. ಇನ್ನೂ ಘೋಷಣೆ ಆಗದ ಹಲವು ಸಿನಿಮಾಗಳಿಗೆ ರಶ್ಮಿಕಾ ನಾಯಕಿ ಎನ್ನುವ ಗುಸುಗುಸು ಕೂಡ ಜೋರಾಗಿದೆ. ಇದರಲ್ಲಿ ಕೆಲವು ನಿಜವಿರಬಹುದು, ಇನ್ನೂ ಕೆಲವು ಸುಳ್ಳಾಗಿರಬಹುದು. ಆದರೆ, ರಶ್ಮಿಕಾಗೆ ಬೇಡಿಕೆ ಹೆಚ್ಚುತ್ತಿದೆ ಎಂಬುದಂತೂ ಸತ್ಯ. ಈ ಮಧ್ಯೆ ರಶ್ಮಿಕಾ ಮಂದಣ್ಣ ಸಂದರ್ಶನದಲ್ಲಿ ಅಚ್ಚರಿಯ ವಿಚಾರ ಒಂದನ್ನು ಹೇಳಿಕೊಂಡಿದ್ದಾರೆ.

ವಿಕಾಸ್​ ಬಹ್ಲ್​ ಆ್ಯಕ್ಷನ್​-ಕಟ್​ ಹೇಳುತ್ತಿರುವ  ‘ಗುಡ್​ಬೈ’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಹಿರಿಯ ನಟಿ ನೀನಾ ಗುಪ್ತಾ, ನಟ ಪವೈಲ್​ ಗುಲಾಟಿ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಬಾಲಿವುಡ್​ನಲ್ಲಿ  ಸಿದ್ಧಾರ್ಥ್​ ಮಲ್ಹೋತ್ರಾಗೆ ಜೋಡಿಯಾಗಿ ‘ಮಿಷನ್​ ಮಜ್ನು’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಟಾಲಿವುಡ್​ನಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ನಟಿಸಿರುವ ‘ಪುಷ್ಪ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಈ ಮೂರು ಚಿತ್ರಗಳ ಶೂಟಿಂಗ್​ಗಾಗಿ ರಶ್ಮಿಕಾ ಹೈದರಾಬಾದ್​ನಿಂದ ಮುಂಬೈ, ಮುಂಬೈನಿಂದ ಹೈದರಾಬಾದ್​ಗೆ ಪ್ರಯಾಣಿಸೋದು ಅನಿವಾರ್ಯ ಆಗಿದೆ. ಇದು ಅವರ ಕುಟುಂಬದವರ ಅಸಮಾಧಾನಕ್ಕೆ ಪ್ರಮುಖ ಕಾರಣ.

ಕೊವಿಡ್​ ಎರಡನೇ ಅಲೆ ನಿಧಾನವಾಗಿ ಕಡಿಮೆ ಆಗುತ್ತಿದೆ. ಈ ಬೆನ್ನಲ್ಲೇ ಮೂರನೇ ಅಲೆ ಬರುವ ಮುನ್ಸೂಚನೆ ಸಿಕ್ಕಿದೆ. ಎಲ್ಲ ಕಡೆಗಳಲ್ಲೂ ಕೊವಿಡ್​ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿಯೂ ಪ್ರಯಾಣ ಮಾಡೋದು ರಶ್ಮಿಕಾಗೆ ಅನಿವಾರ್ಯ. ಇದನ್ನು ಮನೆಯವರು ವಿರೋಧಿಸಿದ್ದಾರೆ.

ಈ ಬಗ್ಗೆ ಸಂದರ್ಶನದಲ್ಲಿ ರಶ್ಮಿಕಾ ಮಾತನಾಡಿದ್ದಾರೆ. ‘ಬೇರೆಬೇರೆ ಸಿನಿಮಾಗಳ ಶೂಟಿಂಗ್​ ಪಾಲ್ಗೊಳ್ಳುತ್ತಿರುವುದಕ್ಕೆ ನನ್ನ ಕುಟುಂಬ ಅಸಮಾಧಾನ ಹೊಂದಿದೆ. ಅವರ ಕಾಳಜಿ ನನಗೆ ಅರ್ಥ ಆಗುತ್ತದೆ. ಆದರೆ, ಶೂಟಿಂಗ್​ ಮುಂದೂಡುವುದು ನನ್ನ ಕೈನಲ್ಲಿಲ್ಲ. ಶೂಟಿಂಗ್​ ಮುಂದೂಡಿದರೆ ಸಾಕಷ್ಟು ಜನರಿಗೆ ತೊಂದರೆ ಆಗುತ್ತದೆ’ ಎಂದಿದ್ದಾರೆ ರಶ್ಮಿಕಾ.

ಇದನ್ನೂ ಓದಿ: Rashmika Mandanna: ಅಮಿತಾಭ್ ಬಚ್ಚನ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದಕ್ಕೆ ರಶ್ಮಿಕಾ ಮಂದಣ್ಣ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ