Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಪಾಲಿಗೆ ಮತ್ತೊಂದು ಅದೃಷ್ಟ! ಆದರೆ ಚಿತ್ರರಂಗದಿಂದ ಅಲ್ಲ

ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಬೇರೆ ಬೇರೆ ಬ್ರ್ಯಾಂಡ್​ಗಳ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಈಗ ರಶ್ಮಿಕಾ ಕೂಡ ಖ್ಯಾತ ಕಂಪೆನಿಯ ರಾಯಭಾರಿ ಆಗಿದ್ದಾರೆ.

Rashmika Mandanna: ರಶ್ಮಿಕಾ ಮಂದಣ್ಣ ಪಾಲಿಗೆ ಮತ್ತೊಂದು ಅದೃಷ್ಟ! ಆದರೆ ಚಿತ್ರರಂಗದಿಂದ ಅಲ್ಲ
ರಶ್ಮಿಕಾ ಮಂದಣ್ಣ
Follow us
ರಾಜೇಶ್ ದುಗ್ಗುಮನೆ
|

Updated on: Apr 16, 2021 | 8:46 PM

ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತ ಹಾಗೂ ಬಾಲಿವುಡ್​​ ಎರಡಲ್ಲೂ ಬ್ಯುಸಿಯಾಗಿದ್ದಾರೆ. ಅವರ ಕಾಲ್​ಶೀಟ್​ ಪಡೆಯೋಕೆ ಅನೇಕ ನಿರ್ಮಾಪಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಹೀಗಿರುವಾಗಲೇ ಅವರಿಗೆ ಮತ್ತೊಂದು ದೊಡ್ಡ ಅದೃಷ್ಟ ಒಲಿದು ಬಂದಿದೆ. ಹಾಗಂತ ಇದು ಸಿನಿಮಾ ಕ್ಷೇತ್ರದಿಂದ ಅಲ್ಲ. ಫಾಸ್ಟ್​ ಫುಡ್​ ತಯಾರಿಕಾ ಕಂಪೆನಿ ​ ರಶ್ಮಿಕಾ ಮಂದಣ್ಣ ಅವರನ್ನು ದಕ್ಷಿಣ ಹಾಗೂ ಪಶ್ಚಿಮ ಭಾರತದ ರಾಯಭಾರಿಯಾಗಿ ನೇಮಕ ಮಾಡಿದೆ. ರಶ್ಮಿಕಾ ಮಂದಣ್ಣ ಸ್ಯಾಂಡಲ್​ವುಡ್, ಟಾಲಿವುಡ್​ ಹಾಗೂ ಕಾಲಿವುಡ್​ನಲ್ಲಿ ಖ್ಯಾತಿ ಪಡೆದುಕೊಂಡಿದ್ದಾರೆ. ಹೀಗಾಗಿ, ಅವರನ್ನು ದಕ್ಷಿಣ ಭಾರತದ ಅಂಬಾಸಿಡರ್​ ಆಗಿ ನೇಮಕ ಮಾಡಿದರೆ ಮೆಕ್​ಡೊನಾಲ್ಡ್​​​​ ಬ್ರ್ಯಾಂಡ್​ಗೆ ಮತ್ತಷ್ಟು ಮೈಲೇಜ್​ ಸಿಕ್ಕಂತಾಗುತ್ತದೆ ಎಂಬುದು ಕಂಪೆನಿಯ ಆಲೋಚನೆ. ಈ ದೃಷ್ಟಿಯಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಬೇರೆ ಬೇರೆ ಬ್ರ್ಯಾಂಡ್​ಗಳ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಈಗ ರಶ್ಮಿಕಾ ಕೂಡ ಖ್ಯಾತ ಕಂಪೆನಿಯ ರಾಯಭಾರಿ ಆಗಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಮರ್ಷಿಯಲ್​ ಕ್ಷೇತ್ರದಿಂದ ಅವರಿಗೆ ಮತ್ತಷ್ಟು ಆಫರ್​ಗಳು ಬಂದರೂ ಅಚ್ಚರಿ ಇಲ್ಲ.

ಸದ್ಯ, ರಶ್ಮಿಕಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಬಾಲಿವುಡ್​ ಸಿನಿಮಾ ಮಿಷನ್​ ಮಜ್ನು ಕೆಲಸದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜೋಡಿ ಆಗಿದ್ದಾರೆ. ಗುಡ್​ಬಯ್​ ರಶ್ಮಿಕಾ ಅವರ ಎರಡನೇ ಹಿಂದಿ ಸಿನಿಮಾ. ವಿಕಾಸ್​  ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಟ ಅಲ್ಲು ಅರ್ಜುನ್​ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಪುಷ್ಪ ಚಿತ್ರಕ್ಕೂ ರಶ್ಮಿಕಾ ನಾಯಕಿ.

ಇದನ್ನೂ ಓದಿ:  Rashmika Mandanna: ನನ್ನ ಅಪ್ಪ-ಅಮ್ಮನಿಗೂ ಇದನ್ನು ನಂಬಲಾಗಲಿಲ್ಲ; ಹಳೆ ನೆನಪು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ