AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಪಾಲಿಗೆ ಮತ್ತೊಂದು ಅದೃಷ್ಟ! ಆದರೆ ಚಿತ್ರರಂಗದಿಂದ ಅಲ್ಲ

ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಬೇರೆ ಬೇರೆ ಬ್ರ್ಯಾಂಡ್​ಗಳ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಈಗ ರಶ್ಮಿಕಾ ಕೂಡ ಖ್ಯಾತ ಕಂಪೆನಿಯ ರಾಯಭಾರಿ ಆಗಿದ್ದಾರೆ.

Rashmika Mandanna: ರಶ್ಮಿಕಾ ಮಂದಣ್ಣ ಪಾಲಿಗೆ ಮತ್ತೊಂದು ಅದೃಷ್ಟ! ಆದರೆ ಚಿತ್ರರಂಗದಿಂದ ಅಲ್ಲ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Apr 16, 2021 | 8:46 PM

Share

ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತ ಹಾಗೂ ಬಾಲಿವುಡ್​​ ಎರಡಲ್ಲೂ ಬ್ಯುಸಿಯಾಗಿದ್ದಾರೆ. ಅವರ ಕಾಲ್​ಶೀಟ್​ ಪಡೆಯೋಕೆ ಅನೇಕ ನಿರ್ಮಾಪಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಹೀಗಿರುವಾಗಲೇ ಅವರಿಗೆ ಮತ್ತೊಂದು ದೊಡ್ಡ ಅದೃಷ್ಟ ಒಲಿದು ಬಂದಿದೆ. ಹಾಗಂತ ಇದು ಸಿನಿಮಾ ಕ್ಷೇತ್ರದಿಂದ ಅಲ್ಲ. ಫಾಸ್ಟ್​ ಫುಡ್​ ತಯಾರಿಕಾ ಕಂಪೆನಿ ​ ರಶ್ಮಿಕಾ ಮಂದಣ್ಣ ಅವರನ್ನು ದಕ್ಷಿಣ ಹಾಗೂ ಪಶ್ಚಿಮ ಭಾರತದ ರಾಯಭಾರಿಯಾಗಿ ನೇಮಕ ಮಾಡಿದೆ. ರಶ್ಮಿಕಾ ಮಂದಣ್ಣ ಸ್ಯಾಂಡಲ್​ವುಡ್, ಟಾಲಿವುಡ್​ ಹಾಗೂ ಕಾಲಿವುಡ್​ನಲ್ಲಿ ಖ್ಯಾತಿ ಪಡೆದುಕೊಂಡಿದ್ದಾರೆ. ಹೀಗಾಗಿ, ಅವರನ್ನು ದಕ್ಷಿಣ ಭಾರತದ ಅಂಬಾಸಿಡರ್​ ಆಗಿ ನೇಮಕ ಮಾಡಿದರೆ ಮೆಕ್​ಡೊನಾಲ್ಡ್​​​​ ಬ್ರ್ಯಾಂಡ್​ಗೆ ಮತ್ತಷ್ಟು ಮೈಲೇಜ್​ ಸಿಕ್ಕಂತಾಗುತ್ತದೆ ಎಂಬುದು ಕಂಪೆನಿಯ ಆಲೋಚನೆ. ಈ ದೃಷ್ಟಿಯಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಬೇರೆ ಬೇರೆ ಬ್ರ್ಯಾಂಡ್​ಗಳ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಈಗ ರಶ್ಮಿಕಾ ಕೂಡ ಖ್ಯಾತ ಕಂಪೆನಿಯ ರಾಯಭಾರಿ ಆಗಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಮರ್ಷಿಯಲ್​ ಕ್ಷೇತ್ರದಿಂದ ಅವರಿಗೆ ಮತ್ತಷ್ಟು ಆಫರ್​ಗಳು ಬಂದರೂ ಅಚ್ಚರಿ ಇಲ್ಲ.

ಸದ್ಯ, ರಶ್ಮಿಕಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಬಾಲಿವುಡ್​ ಸಿನಿಮಾ ಮಿಷನ್​ ಮಜ್ನು ಕೆಲಸದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜೋಡಿ ಆಗಿದ್ದಾರೆ. ಗುಡ್​ಬಯ್​ ರಶ್ಮಿಕಾ ಅವರ ಎರಡನೇ ಹಿಂದಿ ಸಿನಿಮಾ. ವಿಕಾಸ್​  ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಟ ಅಲ್ಲು ಅರ್ಜುನ್​ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಪುಷ್ಪ ಚಿತ್ರಕ್ಕೂ ರಶ್ಮಿಕಾ ನಾಯಕಿ.

ಇದನ್ನೂ ಓದಿ:  Rashmika Mandanna: ನನ್ನ ಅಪ್ಪ-ಅಮ್ಮನಿಗೂ ಇದನ್ನು ನಂಬಲಾಗಲಿಲ್ಲ; ಹಳೆ ನೆನಪು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ