AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಪಾಲಿಗೆ ಮತ್ತೊಂದು ಅದೃಷ್ಟ! ಆದರೆ ಚಿತ್ರರಂಗದಿಂದ ಅಲ್ಲ

ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಬೇರೆ ಬೇರೆ ಬ್ರ್ಯಾಂಡ್​ಗಳ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಈಗ ರಶ್ಮಿಕಾ ಕೂಡ ಖ್ಯಾತ ಕಂಪೆನಿಯ ರಾಯಭಾರಿ ಆಗಿದ್ದಾರೆ.

Rashmika Mandanna: ರಶ್ಮಿಕಾ ಮಂದಣ್ಣ ಪಾಲಿಗೆ ಮತ್ತೊಂದು ಅದೃಷ್ಟ! ಆದರೆ ಚಿತ್ರರಂಗದಿಂದ ಅಲ್ಲ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Apr 16, 2021 | 8:46 PM

Share

ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತ ಹಾಗೂ ಬಾಲಿವುಡ್​​ ಎರಡಲ್ಲೂ ಬ್ಯುಸಿಯಾಗಿದ್ದಾರೆ. ಅವರ ಕಾಲ್​ಶೀಟ್​ ಪಡೆಯೋಕೆ ಅನೇಕ ನಿರ್ಮಾಪಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಹೀಗಿರುವಾಗಲೇ ಅವರಿಗೆ ಮತ್ತೊಂದು ದೊಡ್ಡ ಅದೃಷ್ಟ ಒಲಿದು ಬಂದಿದೆ. ಹಾಗಂತ ಇದು ಸಿನಿಮಾ ಕ್ಷೇತ್ರದಿಂದ ಅಲ್ಲ. ಫಾಸ್ಟ್​ ಫುಡ್​ ತಯಾರಿಕಾ ಕಂಪೆನಿ ​ ರಶ್ಮಿಕಾ ಮಂದಣ್ಣ ಅವರನ್ನು ದಕ್ಷಿಣ ಹಾಗೂ ಪಶ್ಚಿಮ ಭಾರತದ ರಾಯಭಾರಿಯಾಗಿ ನೇಮಕ ಮಾಡಿದೆ. ರಶ್ಮಿಕಾ ಮಂದಣ್ಣ ಸ್ಯಾಂಡಲ್​ವುಡ್, ಟಾಲಿವುಡ್​ ಹಾಗೂ ಕಾಲಿವುಡ್​ನಲ್ಲಿ ಖ್ಯಾತಿ ಪಡೆದುಕೊಂಡಿದ್ದಾರೆ. ಹೀಗಾಗಿ, ಅವರನ್ನು ದಕ್ಷಿಣ ಭಾರತದ ಅಂಬಾಸಿಡರ್​ ಆಗಿ ನೇಮಕ ಮಾಡಿದರೆ ಮೆಕ್​ಡೊನಾಲ್ಡ್​​​​ ಬ್ರ್ಯಾಂಡ್​ಗೆ ಮತ್ತಷ್ಟು ಮೈಲೇಜ್​ ಸಿಕ್ಕಂತಾಗುತ್ತದೆ ಎಂಬುದು ಕಂಪೆನಿಯ ಆಲೋಚನೆ. ಈ ದೃಷ್ಟಿಯಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಬೇರೆ ಬೇರೆ ಬ್ರ್ಯಾಂಡ್​ಗಳ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಈಗ ರಶ್ಮಿಕಾ ಕೂಡ ಖ್ಯಾತ ಕಂಪೆನಿಯ ರಾಯಭಾರಿ ಆಗಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಮರ್ಷಿಯಲ್​ ಕ್ಷೇತ್ರದಿಂದ ಅವರಿಗೆ ಮತ್ತಷ್ಟು ಆಫರ್​ಗಳು ಬಂದರೂ ಅಚ್ಚರಿ ಇಲ್ಲ.

ಸದ್ಯ, ರಶ್ಮಿಕಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಬಾಲಿವುಡ್​ ಸಿನಿಮಾ ಮಿಷನ್​ ಮಜ್ನು ಕೆಲಸದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜೋಡಿ ಆಗಿದ್ದಾರೆ. ಗುಡ್​ಬಯ್​ ರಶ್ಮಿಕಾ ಅವರ ಎರಡನೇ ಹಿಂದಿ ಸಿನಿಮಾ. ವಿಕಾಸ್​  ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಟ ಅಲ್ಲು ಅರ್ಜುನ್​ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಪುಷ್ಪ ಚಿತ್ರಕ್ಕೂ ರಶ್ಮಿಕಾ ನಾಯಕಿ.

ಇದನ್ನೂ ಓದಿ:  Rashmika Mandanna: ನನ್ನ ಅಪ್ಪ-ಅಮ್ಮನಿಗೂ ಇದನ್ನು ನಂಬಲಾಗಲಿಲ್ಲ; ಹಳೆ ನೆನಪು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ