AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಪಾಲಿಗೆ ಮತ್ತೊಂದು ಅದೃಷ್ಟ! ಆದರೆ ಚಿತ್ರರಂಗದಿಂದ ಅಲ್ಲ

ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಬೇರೆ ಬೇರೆ ಬ್ರ್ಯಾಂಡ್​ಗಳ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಈಗ ರಶ್ಮಿಕಾ ಕೂಡ ಖ್ಯಾತ ಕಂಪೆನಿಯ ರಾಯಭಾರಿ ಆಗಿದ್ದಾರೆ.

Rashmika Mandanna: ರಶ್ಮಿಕಾ ಮಂದಣ್ಣ ಪಾಲಿಗೆ ಮತ್ತೊಂದು ಅದೃಷ್ಟ! ಆದರೆ ಚಿತ್ರರಂಗದಿಂದ ಅಲ್ಲ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Apr 16, 2021 | 8:46 PM

Share

ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತ ಹಾಗೂ ಬಾಲಿವುಡ್​​ ಎರಡಲ್ಲೂ ಬ್ಯುಸಿಯಾಗಿದ್ದಾರೆ. ಅವರ ಕಾಲ್​ಶೀಟ್​ ಪಡೆಯೋಕೆ ಅನೇಕ ನಿರ್ಮಾಪಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಹೀಗಿರುವಾಗಲೇ ಅವರಿಗೆ ಮತ್ತೊಂದು ದೊಡ್ಡ ಅದೃಷ್ಟ ಒಲಿದು ಬಂದಿದೆ. ಹಾಗಂತ ಇದು ಸಿನಿಮಾ ಕ್ಷೇತ್ರದಿಂದ ಅಲ್ಲ. ಫಾಸ್ಟ್​ ಫುಡ್​ ತಯಾರಿಕಾ ಕಂಪೆನಿ ​ ರಶ್ಮಿಕಾ ಮಂದಣ್ಣ ಅವರನ್ನು ದಕ್ಷಿಣ ಹಾಗೂ ಪಶ್ಚಿಮ ಭಾರತದ ರಾಯಭಾರಿಯಾಗಿ ನೇಮಕ ಮಾಡಿದೆ. ರಶ್ಮಿಕಾ ಮಂದಣ್ಣ ಸ್ಯಾಂಡಲ್​ವುಡ್, ಟಾಲಿವುಡ್​ ಹಾಗೂ ಕಾಲಿವುಡ್​ನಲ್ಲಿ ಖ್ಯಾತಿ ಪಡೆದುಕೊಂಡಿದ್ದಾರೆ. ಹೀಗಾಗಿ, ಅವರನ್ನು ದಕ್ಷಿಣ ಭಾರತದ ಅಂಬಾಸಿಡರ್​ ಆಗಿ ನೇಮಕ ಮಾಡಿದರೆ ಮೆಕ್​ಡೊನಾಲ್ಡ್​​​​ ಬ್ರ್ಯಾಂಡ್​ಗೆ ಮತ್ತಷ್ಟು ಮೈಲೇಜ್​ ಸಿಕ್ಕಂತಾಗುತ್ತದೆ ಎಂಬುದು ಕಂಪೆನಿಯ ಆಲೋಚನೆ. ಈ ದೃಷ್ಟಿಯಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಬೇರೆ ಬೇರೆ ಬ್ರ್ಯಾಂಡ್​ಗಳ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಈಗ ರಶ್ಮಿಕಾ ಕೂಡ ಖ್ಯಾತ ಕಂಪೆನಿಯ ರಾಯಭಾರಿ ಆಗಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಮರ್ಷಿಯಲ್​ ಕ್ಷೇತ್ರದಿಂದ ಅವರಿಗೆ ಮತ್ತಷ್ಟು ಆಫರ್​ಗಳು ಬಂದರೂ ಅಚ್ಚರಿ ಇಲ್ಲ.

ಸದ್ಯ, ರಶ್ಮಿಕಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಬಾಲಿವುಡ್​ ಸಿನಿಮಾ ಮಿಷನ್​ ಮಜ್ನು ಕೆಲಸದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜೋಡಿ ಆಗಿದ್ದಾರೆ. ಗುಡ್​ಬಯ್​ ರಶ್ಮಿಕಾ ಅವರ ಎರಡನೇ ಹಿಂದಿ ಸಿನಿಮಾ. ವಿಕಾಸ್​  ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಟ ಅಲ್ಲು ಅರ್ಜುನ್​ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಪುಷ್ಪ ಚಿತ್ರಕ್ಕೂ ರಶ್ಮಿಕಾ ನಾಯಕಿ.

ಇದನ್ನೂ ಓದಿ:  Rashmika Mandanna: ನನ್ನ ಅಪ್ಪ-ಅಮ್ಮನಿಗೂ ಇದನ್ನು ನಂಬಲಾಗಲಿಲ್ಲ; ಹಳೆ ನೆನಪು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

Follow Us
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ