AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಪಾಲಿಗೆ ಮತ್ತೊಂದು ಅದೃಷ್ಟ! ಆದರೆ ಚಿತ್ರರಂಗದಿಂದ ಅಲ್ಲ

ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಬೇರೆ ಬೇರೆ ಬ್ರ್ಯಾಂಡ್​ಗಳ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಈಗ ರಶ್ಮಿಕಾ ಕೂಡ ಖ್ಯಾತ ಕಂಪೆನಿಯ ರಾಯಭಾರಿ ಆಗಿದ್ದಾರೆ.

Rashmika Mandanna: ರಶ್ಮಿಕಾ ಮಂದಣ್ಣ ಪಾಲಿಗೆ ಮತ್ತೊಂದು ಅದೃಷ್ಟ! ಆದರೆ ಚಿತ್ರರಂಗದಿಂದ ಅಲ್ಲ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Apr 16, 2021 | 8:46 PM

Share

ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತ ಹಾಗೂ ಬಾಲಿವುಡ್​​ ಎರಡಲ್ಲೂ ಬ್ಯುಸಿಯಾಗಿದ್ದಾರೆ. ಅವರ ಕಾಲ್​ಶೀಟ್​ ಪಡೆಯೋಕೆ ಅನೇಕ ನಿರ್ಮಾಪಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಹೀಗಿರುವಾಗಲೇ ಅವರಿಗೆ ಮತ್ತೊಂದು ದೊಡ್ಡ ಅದೃಷ್ಟ ಒಲಿದು ಬಂದಿದೆ. ಹಾಗಂತ ಇದು ಸಿನಿಮಾ ಕ್ಷೇತ್ರದಿಂದ ಅಲ್ಲ. ಫಾಸ್ಟ್​ ಫುಡ್​ ತಯಾರಿಕಾ ಕಂಪೆನಿ ​ ರಶ್ಮಿಕಾ ಮಂದಣ್ಣ ಅವರನ್ನು ದಕ್ಷಿಣ ಹಾಗೂ ಪಶ್ಚಿಮ ಭಾರತದ ರಾಯಭಾರಿಯಾಗಿ ನೇಮಕ ಮಾಡಿದೆ. ರಶ್ಮಿಕಾ ಮಂದಣ್ಣ ಸ್ಯಾಂಡಲ್​ವುಡ್, ಟಾಲಿವುಡ್​ ಹಾಗೂ ಕಾಲಿವುಡ್​ನಲ್ಲಿ ಖ್ಯಾತಿ ಪಡೆದುಕೊಂಡಿದ್ದಾರೆ. ಹೀಗಾಗಿ, ಅವರನ್ನು ದಕ್ಷಿಣ ಭಾರತದ ಅಂಬಾಸಿಡರ್​ ಆಗಿ ನೇಮಕ ಮಾಡಿದರೆ ಮೆಕ್​ಡೊನಾಲ್ಡ್​​​​ ಬ್ರ್ಯಾಂಡ್​ಗೆ ಮತ್ತಷ್ಟು ಮೈಲೇಜ್​ ಸಿಕ್ಕಂತಾಗುತ್ತದೆ ಎಂಬುದು ಕಂಪೆನಿಯ ಆಲೋಚನೆ. ಈ ದೃಷ್ಟಿಯಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಬೇರೆ ಬೇರೆ ಬ್ರ್ಯಾಂಡ್​ಗಳ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಈಗ ರಶ್ಮಿಕಾ ಕೂಡ ಖ್ಯಾತ ಕಂಪೆನಿಯ ರಾಯಭಾರಿ ಆಗಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಮರ್ಷಿಯಲ್​ ಕ್ಷೇತ್ರದಿಂದ ಅವರಿಗೆ ಮತ್ತಷ್ಟು ಆಫರ್​ಗಳು ಬಂದರೂ ಅಚ್ಚರಿ ಇಲ್ಲ.

ಸದ್ಯ, ರಶ್ಮಿಕಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಬಾಲಿವುಡ್​ ಸಿನಿಮಾ ಮಿಷನ್​ ಮಜ್ನು ಕೆಲಸದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜೋಡಿ ಆಗಿದ್ದಾರೆ. ಗುಡ್​ಬಯ್​ ರಶ್ಮಿಕಾ ಅವರ ಎರಡನೇ ಹಿಂದಿ ಸಿನಿಮಾ. ವಿಕಾಸ್​  ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಟ ಅಲ್ಲು ಅರ್ಜುನ್​ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಪುಷ್ಪ ಚಿತ್ರಕ್ಕೂ ರಶ್ಮಿಕಾ ನಾಯಕಿ.

ಇದನ್ನೂ ಓದಿ:  Rashmika Mandanna: ನನ್ನ ಅಪ್ಪ-ಅಮ್ಮನಿಗೂ ಇದನ್ನು ನಂಬಲಾಗಲಿಲ್ಲ; ಹಳೆ ನೆನಪು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ