AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಬಾಲಿವುಡ್​ಗೆ ಕಾಲಿಡೋಕೆ ಕಾರಣವಾಗಿದ್ದು ಯಾರು? ಅಸಲಿ ವಿಚಾರ ಬಯಲು

ರಶ್ಮಿಕಾ ಮಂದಣ್ಣ ಸಿನಿಮಾದಿಂದ ಸಿನಿಮಾಗೆ ನಟನೆಯಲ್ಲಿ ಪಳಗುತ್ತಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಅಭಿನಯಕ್ಕೂ ಅವರ ಈಗಿನ ಅಭಿನಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

ರಶ್ಮಿಕಾ ಬಾಲಿವುಡ್​ಗೆ ಕಾಲಿಡೋಕೆ ಕಾರಣವಾಗಿದ್ದು ಯಾರು? ಅಸಲಿ ವಿಚಾರ ಬಯಲು
ರಶ್ಮಿಕಾ-ವಿಜಯ್​ ದೇವರಕೊಂಡ
ರಾಜೇಶ್ ದುಗ್ಗುಮನೆ
| Edited By: |

Updated on: May 11, 2021 | 8:51 AM

Share

ರಶ್ಮಿಕಾ ಮಂದಣ್ಣ ಬಾಲಿವುಡ್ಗೆ ಕಾಲಿಡುತ್ತಿದ್ದಂತೆಯೇ ಒಟ್ಟೊಟ್ಟಿಗೆ ಎರಡೆರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಎರಡೂ ಸಿನಿಮಾಗಳಲ್ಲಿ ಸ್ಟಾರ್ ನಟರಿದ್ದಾರೆ ಅನ್ನೋದು ವಿಶೇಷ. ರಶ್ಮಿಕಾ ಬಾಲಿವುಡ್ಗೆ ಕಾಲಿಡೋಕೆ ಕಾರಣವಾಗಿದ್ದು, ವಿಜಯ್ ದೇವರಕೊಂಡ ನಟನೆಯ ಡಿಯರ್ ಕಾಮ್ರೇಡ್ ಚಿತ್ರ ಅನ್ನೋ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ರಶ್ಮಿಕಾ ಮಂದಣ್ಣ ಸಿನಿಮಾದಿಂದ ಸಿನಿಮಾಗೆ ನಟನೆಯಲ್ಲಿ ಪಳಗುತ್ತಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಅಭಿನಯಕ್ಕೂ ಅವರ ಈಗಿನ ಅಭಿನಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಪ್ರತೀ ಚಿತ್ರಕ್ಕೂ ಅವರು ಆಯ್ದುಕೊಳ್ಳುವ ಪಾತ್ರ ಕೂಡ ಭಿನ್ನವಾಗಿರುತ್ತದೆ. ಇದು ರಶ್ಮಿಕಾಗೆ ವರದಾನವಾಗಿದೆ. ರಶ್ಮಿಕಾ ಬಾಲಿವುಡ್ ಹಾದಿಯನ್ನು ಸುಗಮ ಮಾಡಿದ್ದು ವಿಜಯ್ ದೇವರಕೊಂಡ ನಟನೆಯ ಡಿಯರ್ ಕಾಮ್ರೇಡ್ ಚಿತ್ರ.

ಈ ಬಗ್ಗೆ ಮಿಷನ್ ಮಜ್ನು ಸಿನಿಮಾದ ನಿರ್ದೇಶಕ ಶಾಂತನು ಬಾಗ್ಚಿ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ರಶ್ಮಿಕಾ ಅವರ ನಟನೆಯನ್ನು ತುಂಬಾನೇ ಸೂಕ್ಷ್ಮವಾಗಿ ಗಮನಿಸುತ್ತಾ ಬಂದಿದ್ದೆ. ಡಿಯರ್ ಕಾಮ್ರೇಡ್ ಸಿನಿಮಾದಲ್ಲಿ ಅವರ ಅಭಿನಯ ತುಂಬಾನೇ ಏಳ್ಗೆ ಕಂಡಿತ್ತು. ಹೀಗಾಗಿ, ನಾನು ಅವರನ್ನು ಮಿಷನ್ ಮಜ್ನು ಸಿನಿಮಾಗೆ ಹೀರೋಯಿನ್ ಆಗಿ ಆಯ್ಕೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದೆ ಎಂದಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಮುಗ್ಧತೆ ಹಾಗೂ ಅವರ ಬ್ಯೂಟಿ ಮಿಷನ್ ಮಜ್ನು ಸಿನಿಮಾದಲ್ಲಿನ ಅವರ ಪಾತ್ರಕ್ಕೆ ಅಗತ್ಯವಿದೆ. ನಾನು ಮೊದಲ ಬಾರಿಗೆ ಕಥೆಯನ್ನು ಜೂಮ್ ಕಾಲ್ನಲ್ಲಿ ವಿವರಿಸಿದ್ದೆ. ಅವರಿಗೆ ಪಾತ್ರ ಇಷ್ಟವಾಗಿತ್ತು. ಆಗಲೇ ಸಿನಿಮಾ ಒಪ್ಪಿಕೊಂಡರು ಎಂದಿದ್ದಾರೆ ಶಾಂತನು.

ರಶ್ಮಿಕಾ ಗುಡ್ ಬೈ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ವೃತ್ತಿ ಜೀವನದ ದೃಷ್ಟಿಯಿಂದ ಇದು ಬಹಳ ಮಹತ್ವ ಪಡೆದುಕೊಂಡಿದೆ.

ಇದಲ್ಲದೆ, ತೆಲುಗಿನಲ್ಲಿ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಡಿ-ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕಾಡಿನ ಹಿನ್ನೆಲೆಯಲ್ಲಿ ನಡೆಯಲಿದೆ. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ಮೂಡಿ ಬರಲಿದೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?