ರಶ್ಮಿಕಾ ಬಾಲಿವುಡ್​ಗೆ ಕಾಲಿಡೋಕೆ ಕಾರಣವಾಗಿದ್ದು ಯಾರು? ಅಸಲಿ ವಿಚಾರ ಬಯಲು

ರಶ್ಮಿಕಾ ಮಂದಣ್ಣ ಸಿನಿಮಾದಿಂದ ಸಿನಿಮಾಗೆ ನಟನೆಯಲ್ಲಿ ಪಳಗುತ್ತಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಅಭಿನಯಕ್ಕೂ ಅವರ ಈಗಿನ ಅಭಿನಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

ರಶ್ಮಿಕಾ ಬಾಲಿವುಡ್​ಗೆ ಕಾಲಿಡೋಕೆ ಕಾರಣವಾಗಿದ್ದು ಯಾರು? ಅಸಲಿ ವಿಚಾರ ಬಯಲು
ರಶ್ಮಿಕಾ-ವಿಜಯ್​ ದೇವರಕೊಂಡ
Follow us
| Updated By: ಮದನ್​ ಕುಮಾರ್​

Updated on: May 11, 2021 | 8:51 AM

ರಶ್ಮಿಕಾ ಮಂದಣ್ಣ ಬಾಲಿವುಡ್ಗೆ ಕಾಲಿಡುತ್ತಿದ್ದಂತೆಯೇ ಒಟ್ಟೊಟ್ಟಿಗೆ ಎರಡೆರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಎರಡೂ ಸಿನಿಮಾಗಳಲ್ಲಿ ಸ್ಟಾರ್ ನಟರಿದ್ದಾರೆ ಅನ್ನೋದು ವಿಶೇಷ. ರಶ್ಮಿಕಾ ಬಾಲಿವುಡ್ಗೆ ಕಾಲಿಡೋಕೆ ಕಾರಣವಾಗಿದ್ದು, ವಿಜಯ್ ದೇವರಕೊಂಡ ನಟನೆಯ ಡಿಯರ್ ಕಾಮ್ರೇಡ್ ಚಿತ್ರ ಅನ್ನೋ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ರಶ್ಮಿಕಾ ಮಂದಣ್ಣ ಸಿನಿಮಾದಿಂದ ಸಿನಿಮಾಗೆ ನಟನೆಯಲ್ಲಿ ಪಳಗುತ್ತಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಅಭಿನಯಕ್ಕೂ ಅವರ ಈಗಿನ ಅಭಿನಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಪ್ರತೀ ಚಿತ್ರಕ್ಕೂ ಅವರು ಆಯ್ದುಕೊಳ್ಳುವ ಪಾತ್ರ ಕೂಡ ಭಿನ್ನವಾಗಿರುತ್ತದೆ. ಇದು ರಶ್ಮಿಕಾಗೆ ವರದಾನವಾಗಿದೆ. ರಶ್ಮಿಕಾ ಬಾಲಿವುಡ್ ಹಾದಿಯನ್ನು ಸುಗಮ ಮಾಡಿದ್ದು ವಿಜಯ್ ದೇವರಕೊಂಡ ನಟನೆಯ ಡಿಯರ್ ಕಾಮ್ರೇಡ್ ಚಿತ್ರ.

ಈ ಬಗ್ಗೆ ಮಿಷನ್ ಮಜ್ನು ಸಿನಿಮಾದ ನಿರ್ದೇಶಕ ಶಾಂತನು ಬಾಗ್ಚಿ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ರಶ್ಮಿಕಾ ಅವರ ನಟನೆಯನ್ನು ತುಂಬಾನೇ ಸೂಕ್ಷ್ಮವಾಗಿ ಗಮನಿಸುತ್ತಾ ಬಂದಿದ್ದೆ. ಡಿಯರ್ ಕಾಮ್ರೇಡ್ ಸಿನಿಮಾದಲ್ಲಿ ಅವರ ಅಭಿನಯ ತುಂಬಾನೇ ಏಳ್ಗೆ ಕಂಡಿತ್ತು. ಹೀಗಾಗಿ, ನಾನು ಅವರನ್ನು ಮಿಷನ್ ಮಜ್ನು ಸಿನಿಮಾಗೆ ಹೀರೋಯಿನ್ ಆಗಿ ಆಯ್ಕೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದೆ ಎಂದಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಮುಗ್ಧತೆ ಹಾಗೂ ಅವರ ಬ್ಯೂಟಿ ಮಿಷನ್ ಮಜ್ನು ಸಿನಿಮಾದಲ್ಲಿನ ಅವರ ಪಾತ್ರಕ್ಕೆ ಅಗತ್ಯವಿದೆ. ನಾನು ಮೊದಲ ಬಾರಿಗೆ ಕಥೆಯನ್ನು ಜೂಮ್ ಕಾಲ್ನಲ್ಲಿ ವಿವರಿಸಿದ್ದೆ. ಅವರಿಗೆ ಪಾತ್ರ ಇಷ್ಟವಾಗಿತ್ತು. ಆಗಲೇ ಸಿನಿಮಾ ಒಪ್ಪಿಕೊಂಡರು ಎಂದಿದ್ದಾರೆ ಶಾಂತನು.

ರಶ್ಮಿಕಾ ಗುಡ್ ಬೈ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ವೃತ್ತಿ ಜೀವನದ ದೃಷ್ಟಿಯಿಂದ ಇದು ಬಹಳ ಮಹತ್ವ ಪಡೆದುಕೊಂಡಿದೆ.

ಇದಲ್ಲದೆ, ತೆಲುಗಿನಲ್ಲಿ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಡಿ-ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕಾಡಿನ ಹಿನ್ನೆಲೆಯಲ್ಲಿ ನಡೆಯಲಿದೆ. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ಮೂಡಿ ಬರಲಿದೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ