AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಬಾಲಿವುಡ್​ಗೆ ಕಾಲಿಡೋಕೆ ಕಾರಣವಾಗಿದ್ದು ಯಾರು? ಅಸಲಿ ವಿಚಾರ ಬಯಲು

ರಶ್ಮಿಕಾ ಮಂದಣ್ಣ ಸಿನಿಮಾದಿಂದ ಸಿನಿಮಾಗೆ ನಟನೆಯಲ್ಲಿ ಪಳಗುತ್ತಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಅಭಿನಯಕ್ಕೂ ಅವರ ಈಗಿನ ಅಭಿನಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

ರಶ್ಮಿಕಾ ಬಾಲಿವುಡ್​ಗೆ ಕಾಲಿಡೋಕೆ ಕಾರಣವಾಗಿದ್ದು ಯಾರು? ಅಸಲಿ ವಿಚಾರ ಬಯಲು
ರಶ್ಮಿಕಾ-ವಿಜಯ್​ ದೇವರಕೊಂಡ
ರಾಜೇಶ್ ದುಗ್ಗುಮನೆ
| Edited By: |

Updated on: May 11, 2021 | 8:51 AM

Share

ರಶ್ಮಿಕಾ ಮಂದಣ್ಣ ಬಾಲಿವುಡ್ಗೆ ಕಾಲಿಡುತ್ತಿದ್ದಂತೆಯೇ ಒಟ್ಟೊಟ್ಟಿಗೆ ಎರಡೆರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಎರಡೂ ಸಿನಿಮಾಗಳಲ್ಲಿ ಸ್ಟಾರ್ ನಟರಿದ್ದಾರೆ ಅನ್ನೋದು ವಿಶೇಷ. ರಶ್ಮಿಕಾ ಬಾಲಿವುಡ್ಗೆ ಕಾಲಿಡೋಕೆ ಕಾರಣವಾಗಿದ್ದು, ವಿಜಯ್ ದೇವರಕೊಂಡ ನಟನೆಯ ಡಿಯರ್ ಕಾಮ್ರೇಡ್ ಚಿತ್ರ ಅನ್ನೋ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ರಶ್ಮಿಕಾ ಮಂದಣ್ಣ ಸಿನಿಮಾದಿಂದ ಸಿನಿಮಾಗೆ ನಟನೆಯಲ್ಲಿ ಪಳಗುತ್ತಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಅಭಿನಯಕ್ಕೂ ಅವರ ಈಗಿನ ಅಭಿನಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಪ್ರತೀ ಚಿತ್ರಕ್ಕೂ ಅವರು ಆಯ್ದುಕೊಳ್ಳುವ ಪಾತ್ರ ಕೂಡ ಭಿನ್ನವಾಗಿರುತ್ತದೆ. ಇದು ರಶ್ಮಿಕಾಗೆ ವರದಾನವಾಗಿದೆ. ರಶ್ಮಿಕಾ ಬಾಲಿವುಡ್ ಹಾದಿಯನ್ನು ಸುಗಮ ಮಾಡಿದ್ದು ವಿಜಯ್ ದೇವರಕೊಂಡ ನಟನೆಯ ಡಿಯರ್ ಕಾಮ್ರೇಡ್ ಚಿತ್ರ.

ಈ ಬಗ್ಗೆ ಮಿಷನ್ ಮಜ್ನು ಸಿನಿಮಾದ ನಿರ್ದೇಶಕ ಶಾಂತನು ಬಾಗ್ಚಿ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ರಶ್ಮಿಕಾ ಅವರ ನಟನೆಯನ್ನು ತುಂಬಾನೇ ಸೂಕ್ಷ್ಮವಾಗಿ ಗಮನಿಸುತ್ತಾ ಬಂದಿದ್ದೆ. ಡಿಯರ್ ಕಾಮ್ರೇಡ್ ಸಿನಿಮಾದಲ್ಲಿ ಅವರ ಅಭಿನಯ ತುಂಬಾನೇ ಏಳ್ಗೆ ಕಂಡಿತ್ತು. ಹೀಗಾಗಿ, ನಾನು ಅವರನ್ನು ಮಿಷನ್ ಮಜ್ನು ಸಿನಿಮಾಗೆ ಹೀರೋಯಿನ್ ಆಗಿ ಆಯ್ಕೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದೆ ಎಂದಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಮುಗ್ಧತೆ ಹಾಗೂ ಅವರ ಬ್ಯೂಟಿ ಮಿಷನ್ ಮಜ್ನು ಸಿನಿಮಾದಲ್ಲಿನ ಅವರ ಪಾತ್ರಕ್ಕೆ ಅಗತ್ಯವಿದೆ. ನಾನು ಮೊದಲ ಬಾರಿಗೆ ಕಥೆಯನ್ನು ಜೂಮ್ ಕಾಲ್ನಲ್ಲಿ ವಿವರಿಸಿದ್ದೆ. ಅವರಿಗೆ ಪಾತ್ರ ಇಷ್ಟವಾಗಿತ್ತು. ಆಗಲೇ ಸಿನಿಮಾ ಒಪ್ಪಿಕೊಂಡರು ಎಂದಿದ್ದಾರೆ ಶಾಂತನು.

ರಶ್ಮಿಕಾ ಗುಡ್ ಬೈ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ವೃತ್ತಿ ಜೀವನದ ದೃಷ್ಟಿಯಿಂದ ಇದು ಬಹಳ ಮಹತ್ವ ಪಡೆದುಕೊಂಡಿದೆ.

ಇದಲ್ಲದೆ, ತೆಲುಗಿನಲ್ಲಿ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಡಿ-ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕಾಡಿನ ಹಿನ್ನೆಲೆಯಲ್ಲಿ ನಡೆಯಲಿದೆ. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ಮೂಡಿ ಬರಲಿದೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ