AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್​ನಲ್ಲಿ ಇದ್ದಾರೆ ರಶ್ಮಿಕಾ ಮಂದಣ್ಣ; ‘ಪುಷ್ಪ 2’ ಸಿನಿಮಾ ಶೂಟಿಂಗ್ ಬಗ್ಗೆ ಮೂಡಿದೆ ಅನುಮಾನ

ರಶ್ಮಿಕಾ ಮಂದಣ್ಣಗೆ ಅನಿಮೆ ಸಿನಿಮಾಗಳ ಬಗ್ಗೆ ಸಾಕಷ್ಟು ಆಸಕ್ತಿ ಇದೆ. ಈಗ ಜಪಾನ್​ನಲ್ಲಿ ನಡೆಯುತ್ತಿರುವ ‘ಅನಿಮೆ ಅವಾರ್ಡ್’ ಕಾರ್ಯಕ್ರಮ ಒಂದಕ್ಕಾಗಿ ಅವರು ಅಲ್ಲಿಗೆ ತೆರಳಿದ್ದಾರೆ. ಈ ಕಾರ್ಯಕ್ರಮಕ್ಕೆ ವಿಶ್ವದ ನಾನಾ ಕಡೆಗಳಿಂದ ನಟರು ಹಾಗೂ ಗಾಯಕರು ಆಗಮಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೂ ಈ ಅವಾರ್ಡ್ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು ಅನ್ನೋದು ವಿಶೇಷ.

ಜಪಾನ್​ನಲ್ಲಿ ಇದ್ದಾರೆ ರಶ್ಮಿಕಾ ಮಂದಣ್ಣ; ‘ಪುಷ್ಪ 2’ ಸಿನಿಮಾ ಶೂಟಿಂಗ್ ಬಗ್ಗೆ ಮೂಡಿದೆ ಅನುಮಾನ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Mar 02, 2024 | 9:31 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸದ್ಯ ಹಲವು ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಸದ್ಯ ಜಪಾನ್​ನಲ್ಲಿ ಇದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಹೊಸದೊಂದು ಅನುಮಾನ ಹುಟ್ಟಿಕೊಂಡಿದೆ. ‘ಪುಷ್ಪ 2’ ಚಿತ್ರದ ಕಥೆ ಜಪಾನ್​ನಲ್ಲಿ ನಡೆಯಲಿದೆ ಎಂದು ಈ ಮೊದಲು ವರದಿ ಆಗಿತ್ತು. ಹೀಗಾಗಿ ರಶ್ಮಿಕಾ ಮೊದಲೇ ಜಪಾನ್​ಗೆ ತೆರಳಿ ಹಾಜರಿ ಹಾಕಿರಬಹುದು ಎನ್ನುವ ಅನುಮಾನ ಅಭಿಮಾನಿಗಳಿಗೆ ಮೂಡಿತ್ತು. ಆದರೆ, ಇದರ ಅಸಲಿಯತ್ತು ಬೇರೆಯದೇ ಇದೆ ಎಂದು ಹೇಳಲಾಗುತ್ತಿದೆ.

‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ನಿರ್ದೇಶಕ ಸುಕುಮಾರ್ ಅವರು ಎರಡನೇ ಪಾರ್ಟ್ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಮೂರನೇ ಭಾಗ ಕೂಡ ಬರಲಿದೆ ಎಂದು ನಟ ಅಲ್ಲು ಅರ್ಜುನ್ ಪರೋಕ್ಷವಾಗಿ ಸೂಚನೆ ಕೊಟ್ಟಿದ್ದಾರೆ. ಕೆಲವು ಮೂಲಗಳ ಪ್ರಕಾರ ಸಿನಿಮಾದಲ್ಲಿ ಬರೋ ಜಪಾನ್ ಕಥೆ ಮೂರನೇ ಭಾಗದಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ರಶ್ಮಿಕಾ ‘ಪುಷ್ಪ 2’ ಚಿತ್ರದ ಶೂಟಿಂಗ್​ಗಾಗಿ ಜಪಾನ್​ಗೆ ತೆರಳಿದ್ದಾರೆ ಎಂಬ ವಿಚಾರದಲ್ಲಿ ಯಾವುದೇ ಹುರುಳಿಲ್ಲ.

ರಶ್ಮಿಕಾ ಮಂದಣ್ಣಗೆ ಅನಿಮೆ ಸಿನಿಮಾಗಳ ಬಗ್ಗೆ ಸಾಕಷ್ಟು ಆಸಕ್ತಿ ಇದೆ. ಈಗ ಜಪಾನ್​ನಲ್ಲಿ ನಡೆಯುತ್ತಿರುವ ‘ಅನಿಮೆ ಅವಾರ್ಡ್’ ಕಾರ್ಯಕ್ರಮ ಒಂದಕ್ಕಾಗಿ ಅವರು ಅಲ್ಲಿಗೆ ತೆರಳಿದ್ದಾರೆ. ಈ ಕಾರ್ಯಕ್ರಮಕ್ಕೆ ವಿಶ್ವದ ನಾನಾ ಕಡೆಗಳಿಂದ ನಟರು ಹಾಗೂ ಗಾಯಕರು ಆಗಮಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೂ ಈ ಅವಾರ್ಡ್ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು ಅನ್ನೋದು ವಿಶೇಷ.

ಕೆಲವು ವರದಿಗಳ ಪ್ರಕಾರ ರಶ್ಮಿಕಾ ಮಂದಣ್ಣ ಅವರು ಹೊಸ ಪಿಆರ್ ಏಜೆನ್ಸಿಯನ್ನು ನೇಮಕ ಮಾಡಿಕೊಂಡಿದ್ದಾರೆ. ಈ ತಂಡ ಮುಂಬೈ ಮೂಲದ್ದು. ಪಿಆರ್ ಏಜಿನ್ಸಿ ಅವರೇ ರಶ್ಮಿಕಾ ಮಂದಣ್ಣ ಅವರಿಗೆ ಈ ಅವಕಾಶ ಬರುವಂತೆ ನೋಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಜೊತೆ ತೆರೆ ಹಂಚಿಕೊಳ್ಳಲು 25 ಕೆಜಿ ಹೆಚ್ಚಿಸಿಕೊಳ್ಳಲಿದ್ದಾರೆ ಈ ಸ್ಟಾರ್ ಹೀರೋ

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಜೊತೆಗೆ ಇನ್ನೂ ಕೆಲವು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ‘ರೇನ್​ಬೋ’, ಧನುಷ್ ನಟನೆಯ ಹೊಸ ಸಿನಿಮಾ ಸೇರಿ ಇನ್ನೂ ಕೆಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ರಶ್ಮಿಕಾ ಮಂದಣ್ಣ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅವರ ಇನ್​ಸ್ಟಾಗ್ರಾಮ್ ಹಿಂಬಾಲಕರ ಸಂಖ್ಯೆ ಕೂಡ ದೊಡ್ಡದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು