Rashmika Mandanna: ತನ್ನದೇ ಮ್ಯಾನೇಜರ್​ನಿಂದ ಮೋಸಕ್ಕೊಳಗಾದ ರಶ್ಮಿಕಾ ಮಂದಣ್ಣ? 80 ಲಕ್ಷ ರೂಪಾಯಿ ನಷ್ಟ

ರಶ್ಮಿಕಾ ಮಂದಣ್ಣ ಅವರ ಕೆಲಸಗಳನ್ನು ನೋಡಿಕೊಳ್ಳಲು ಮ್ಯಾನೇಜರ್ ಒಬ್ಬರಿದ್ದರು. ಆರಂಭದ ದಿನಗಳಿಂದಲೂ ಆ ವ್ಯಕ್ತಿ ರಶ್ಮಿಕಾ ಜೊತೆಗೇ ಇದ್ದರು. ಆ ವ್ಯಕ್ತಿ ರಶ್ಮಿಕಾಗೆ 80 ಲಕ್ಷ ರೂಪಾಯಿ ಹಣವನ್ನು ವಂಚಿಸಿದ್ದಾರಂತೆ.

Rashmika Mandanna: ತನ್ನದೇ ಮ್ಯಾನೇಜರ್​ನಿಂದ ಮೋಸಕ್ಕೊಳಗಾದ ರಶ್ಮಿಕಾ ಮಂದಣ್ಣ? 80 ಲಕ್ಷ ರೂಪಾಯಿ ನಷ್ಟ
ರಶ್ಮಿಕಾ
Follow us
|

Updated on: Jun 19, 2023 | 10:51 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕಡಿಮೆ ಸಮಯದಲ್ಲಿ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ರಶ್ಮಿಕಾ ಮಂದಣ್ಣ ಅವರು ಇಷ್ಟು ದೊಡ್ಡ ಮಟ್ಟದ ಖ್ಯಾತಿ ಗಳಿಸಿರುವುದರಿಂದ ಸಾಕಷ್ಟು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಈಗ ರಶ್ಮಿಕಾ ಮಂದಣ್ಣ ಬಗ್ಗೆ ಹೊಸದೊಂದು ಸುದ್ದಿ ಹರಿದಾಡಿದೆ. ತನ್ನದೇ ಮ್ಯಾನೇಜರ್​ನಿಂದ ರಶ್ಮಿಕಾ ಮೋಸಕ್ಕೆ ಒಳಗಾಗಿದ್ದಾರೆ ಎಂದು ಪಿಂಕ್​ವಿಲ್ಲಾ ವೆಬ್ ಸೈಟ್ ವರದಿ ಮಾಡಿದೆ. ಆದರೆ, ನಟಿಯ ಕಡೆಯಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ವಿಚಾರದಲ್ಲಿ ರಶ್ಮಿಕಾ ಸ್ಪಷ್ಟನೆ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಕೆಲಸಗಳನ್ನು ನೋಡಿಕೊಳ್ಳಲು ಮ್ಯಾನೇಜರ್ ಒಬ್ಬರಿದ್ದರು. ಆರಂಭದ ದಿನಗಳಿಂದಲೂ ಆ ವ್ಯಕ್ತಿ ರಶ್ಮಿಕಾ ಜೊತೆಗೇ ಇದ್ದರು. ಆ ವ್ಯಕ್ತಿ ರಶ್ಮಿಕಾಗೆ 80 ಲಕ್ಷ ರೂಪಾಯಿ ಹಣವನ್ನು ವಂಚಿಸಿದ್ದಾರಂತೆ. ಇದನ್ನು ದೊಡ್ಡ ರಂಪಾಟ ಮಾಡುವ ಗೋಜಿಗೆ ರಶ್ಮಿಕಾ ಮಂದಣ್ಣ ಹೋಗಿಲ್ಲ. ಬದಲಿಗೆ ಅವರು ಮ್ಯಾನೇಜರ್​ನ ತೆಗೆದು ಹಾಕಿದ್ದಾರೆ ಎನ್ನಲಾಗಿದೆ. ಸದ್ಯ ಇವೆಲ್ಲ ಅಂತೆ ಕಂತೆ. ಆ ಮ್ಯಾನೇಜರ್ ಯಾರು? ಅವರ ಹೆಸರು ಏನು ಎಂಬಿತ್ಯಾದಿ ವಿಚಾರಗಳು ಇನ್ನಷ್ಟೇ ಹೊರಬೀಳಬೇಕಿದೆ.

ರಶ್ಮಿಕಾ ಮಂದಣ್ಣ ಕೈಯಲ್ಲಿ ಸದ್ಯ ಸಾಕಷ್ಟು ಸಿನಿಮಾಗಳು ಇವೆ. ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸದ್ಯ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಈ ವರ್ಷವೇ ಸಿನಿಮಾ ರಿಲೀಸ್ ಆಗುತ್ತದೆಯೇ ಅಥವಾ ವಿಳಂಬ ಆಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ನಂಬಿದವರಿಂದಲೇ ಮೋಸ, ಲಕ್ಷಾಂತರ ಹಣ ಕಳೆದುಕೊಂಡ ನಟಿ

ಇಷ್ಟೇ ಅಲ್ಲದೆ, ‘ರೇನ್​ಬೋ’ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ. ವಿಕ್ಕಿ ಕೌಶಲ್ ಹಾಗೂ ಶಾಹಿದ್ ಕಪೂರ್ ಜೊತೆ ತಲಾ ಒಂದು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ ಎಂದು ಕೂಡ ವರದಿ ಆಗಿದೆ. ನಿತಿನ್ ಜೊತೆ ಅವರು ಸಿನಿಮಾ ಮಾಡುತ್ತಿದ್ದು, ಈ ಚಿತ್ರಕ್ಕೆ ಶೀರ್ಷಿಕೆ ಫೈನಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ