AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ತನ್ನದೇ ಮ್ಯಾನೇಜರ್​ನಿಂದ ಮೋಸಕ್ಕೊಳಗಾದ ರಶ್ಮಿಕಾ ಮಂದಣ್ಣ? 80 ಲಕ್ಷ ರೂಪಾಯಿ ನಷ್ಟ

ರಶ್ಮಿಕಾ ಮಂದಣ್ಣ ಅವರ ಕೆಲಸಗಳನ್ನು ನೋಡಿಕೊಳ್ಳಲು ಮ್ಯಾನೇಜರ್ ಒಬ್ಬರಿದ್ದರು. ಆರಂಭದ ದಿನಗಳಿಂದಲೂ ಆ ವ್ಯಕ್ತಿ ರಶ್ಮಿಕಾ ಜೊತೆಗೇ ಇದ್ದರು. ಆ ವ್ಯಕ್ತಿ ರಶ್ಮಿಕಾಗೆ 80 ಲಕ್ಷ ರೂಪಾಯಿ ಹಣವನ್ನು ವಂಚಿಸಿದ್ದಾರಂತೆ.

Rashmika Mandanna: ತನ್ನದೇ ಮ್ಯಾನೇಜರ್​ನಿಂದ ಮೋಸಕ್ಕೊಳಗಾದ ರಶ್ಮಿಕಾ ಮಂದಣ್ಣ? 80 ಲಕ್ಷ ರೂಪಾಯಿ ನಷ್ಟ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jun 19, 2023 | 10:51 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕಡಿಮೆ ಸಮಯದಲ್ಲಿ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ರಶ್ಮಿಕಾ ಮಂದಣ್ಣ ಅವರು ಇಷ್ಟು ದೊಡ್ಡ ಮಟ್ಟದ ಖ್ಯಾತಿ ಗಳಿಸಿರುವುದರಿಂದ ಸಾಕಷ್ಟು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಈಗ ರಶ್ಮಿಕಾ ಮಂದಣ್ಣ ಬಗ್ಗೆ ಹೊಸದೊಂದು ಸುದ್ದಿ ಹರಿದಾಡಿದೆ. ತನ್ನದೇ ಮ್ಯಾನೇಜರ್​ನಿಂದ ರಶ್ಮಿಕಾ ಮೋಸಕ್ಕೆ ಒಳಗಾಗಿದ್ದಾರೆ ಎಂದು ಪಿಂಕ್​ವಿಲ್ಲಾ ವೆಬ್ ಸೈಟ್ ವರದಿ ಮಾಡಿದೆ. ಆದರೆ, ನಟಿಯ ಕಡೆಯಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ವಿಚಾರದಲ್ಲಿ ರಶ್ಮಿಕಾ ಸ್ಪಷ್ಟನೆ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಕೆಲಸಗಳನ್ನು ನೋಡಿಕೊಳ್ಳಲು ಮ್ಯಾನೇಜರ್ ಒಬ್ಬರಿದ್ದರು. ಆರಂಭದ ದಿನಗಳಿಂದಲೂ ಆ ವ್ಯಕ್ತಿ ರಶ್ಮಿಕಾ ಜೊತೆಗೇ ಇದ್ದರು. ಆ ವ್ಯಕ್ತಿ ರಶ್ಮಿಕಾಗೆ 80 ಲಕ್ಷ ರೂಪಾಯಿ ಹಣವನ್ನು ವಂಚಿಸಿದ್ದಾರಂತೆ. ಇದನ್ನು ದೊಡ್ಡ ರಂಪಾಟ ಮಾಡುವ ಗೋಜಿಗೆ ರಶ್ಮಿಕಾ ಮಂದಣ್ಣ ಹೋಗಿಲ್ಲ. ಬದಲಿಗೆ ಅವರು ಮ್ಯಾನೇಜರ್​ನ ತೆಗೆದು ಹಾಕಿದ್ದಾರೆ ಎನ್ನಲಾಗಿದೆ. ಸದ್ಯ ಇವೆಲ್ಲ ಅಂತೆ ಕಂತೆ. ಆ ಮ್ಯಾನೇಜರ್ ಯಾರು? ಅವರ ಹೆಸರು ಏನು ಎಂಬಿತ್ಯಾದಿ ವಿಚಾರಗಳು ಇನ್ನಷ್ಟೇ ಹೊರಬೀಳಬೇಕಿದೆ.

ರಶ್ಮಿಕಾ ಮಂದಣ್ಣ ಕೈಯಲ್ಲಿ ಸದ್ಯ ಸಾಕಷ್ಟು ಸಿನಿಮಾಗಳು ಇವೆ. ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸದ್ಯ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಈ ವರ್ಷವೇ ಸಿನಿಮಾ ರಿಲೀಸ್ ಆಗುತ್ತದೆಯೇ ಅಥವಾ ವಿಳಂಬ ಆಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ನಂಬಿದವರಿಂದಲೇ ಮೋಸ, ಲಕ್ಷಾಂತರ ಹಣ ಕಳೆದುಕೊಂಡ ನಟಿ

ಇಷ್ಟೇ ಅಲ್ಲದೆ, ‘ರೇನ್​ಬೋ’ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ. ವಿಕ್ಕಿ ಕೌಶಲ್ ಹಾಗೂ ಶಾಹಿದ್ ಕಪೂರ್ ಜೊತೆ ತಲಾ ಒಂದು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ ಎಂದು ಕೂಡ ವರದಿ ಆಗಿದೆ. ನಿತಿನ್ ಜೊತೆ ಅವರು ಸಿನಿಮಾ ಮಾಡುತ್ತಿದ್ದು, ಈ ಚಿತ್ರಕ್ಕೆ ಶೀರ್ಷಿಕೆ ಫೈನಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ