AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಜನ್ಮದಿನಕ್ಕೆ ಶುಭಕೋರದ ರಶ್ಮಿಕಾ ಮಂದಣ್ಣ; ‘ನಿಯತ್ತಿಲ್ಲದವರು’ ಎಂದು ಕಿಡಿಕಾರಿದ ಫ್ಯಾನ್ಸ್​

ರಶ್ಮಿಕಾ ಹಾಗೂ ಪುನೀತ್​ ರಾಜ್​ಕುಮಾರ್​ ಅವರು ‘ಅಂಜನಿಪುತ್ರ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. 2 ಒಟ್ಟಿಗೆ ನಟಿಸಿದ ಹೊರತಾಗಿಯೂ ಪುನೀತ್​ಗೆ ರಶ್ಮಿಕಾ ಬರ್ತ್​ಡೇ ವಿಶ್​ ಮಾಡದೆ ಇರುವುದು ಸಾಕಷ್ಟು ಜನರ ಸಿಟ್ಟಿಗೆ ಕಾರಣವಾಗಿದೆ.

ಪುನೀತ್​ ಜನ್ಮದಿನಕ್ಕೆ ಶುಭಕೋರದ ರಶ್ಮಿಕಾ ಮಂದಣ್ಣ; ‘ನಿಯತ್ತಿಲ್ಲದವರು’ ಎಂದು ಕಿಡಿಕಾರಿದ ಫ್ಯಾನ್ಸ್​
TV9 Web
| Edited By: |

Updated on: Mar 18, 2022 | 1:33 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸದಾ ಚರ್ಚೆಯಲ್ಲಿರುತ್ತಾರೆ. ಅವರು ಕನ್ನಡದ ಬಗ್ಗೆ ಪ್ರೀತಿ ತೋರಿಸುವುದಿಲ್ಲ ಎನ್ನುವ ಆರೋಪ ಸದಾ ಕೇಳಿ ಬರುತ್ತಲೇ ಇರುತ್ತದೆ. ಸದ್ಯ, ಅವರು ಯಾವುದೇ ಕನ್ನಡ ಸಿನಿಮಾ ಒಪ್ಪಿಕೊಂಡಿಲ್ಲ. ಬಾಲಿವುಡ್​, ಟಾಲಿವುಡ್​ ಎಂದು ಹೈದರಾಬಾದ್ ಹಾಗೂ ಮುಂಬೈನಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಅಲ್ಲಿಯೇ ಮನೆ ಖರೀದಿಸಿ ಸೆಟಲ್​ ಆಗುವ ಆಲೋಚನೆಯಲ್ಲಿ ಇದ್ದಾರೆ. ಈ ಮಧ್ಯೆ ರಶ್ಮಿಕಾ ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೋ ತಪ್ಪೊಂದನ್ನು ಮಾಡಿದ್ದಾರೆ. ಇದಕ್ಕೆ ಅವರು ತೀವ್ರ ಟೀಕೆ ಎದುರಿಸುತ್ತಿದ್ದಾರೆ. ಹಾಗಾದರೆ, ರಶ್ಮಿಕಾ ಮಂದಣ್ಣ ಮಾಡಿದ ತಪ್ಪೇನು? ಪುನೀತ್​ ರಾಜ್​ಕುಮಾರ್​ (Puneeth Rajkumar) ಬರ್ತ್​ಡೇಗೆ ಅವರು ವಿಶ್ ಮಾಡಿಲ್ಲ.

ಮಾರ್ಚ್​ 17ರಂದು ಪುನೀತ್​ ರಾಜ್​ಕುಮಾರ್​ ಬರ್ತ್​ಡೇ ಇತ್ತು. ಈ ವಿಶೇಷ ದಿನವನ್ನು ಅಭಿಮಾನಿಗಳು ಹಬ್ಬದಂತೆ ಆಚರಿಸಿದ್ದಾರೆ. ಪುನೀತ್​ ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ಜೇಮ್ಸ್​’ ಚಿತ್ರವನ್ನು ಅವರಿಲ್ಲ ಎನ್ನುವ ನೋವನ್ನು ಎದೆಯಲ್ಲಿ ಇಟ್ಟುಕೊಂಡೇ ವೀಕ್ಷಣೆ ಮಾಡಿದ್ದಾರೆ. ಹಲವು ಸೆಲೆಬ್ರಿಟಿಗಳು ಪುನೀತ್​ ಅವರನ್ನು ನೆನಪಿಸಿಕೊಂಡಿದ್ದಾರೆ. ಆದರೆ, ರಶ್ಮಿಕಾ ಮಾತ್ರ ಈ ವಿಚಾರದಲ್ಲಿ ಮೌನ ತಾಳಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣವಾಗಿದೆ.

ರಶ್ಮಿಕಾ ಹಾಗೂ ಪುನೀತ್​ ರಾಜ್​ಕುಮಾರ್​ ಅವರು ‘ಅಂಜನಿಪುತ್ರ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. 2017ರಲ್ಲಿ ತೆರೆಗೆ ಬಂದ ಈ ಸಿನಿಮಾಗೆ ಎ. ಹರ್ಷ ಅವರ ನಿರ್ದೇಶನ ಇತ್ತು. ಒಟ್ಟಿಗೆ ನಟಿಸಿದ ಹೊರತಾಗಿಯೂ ಪುನೀತ್​ಗೆ ರಶ್ಮಿಕಾ ಬರ್ತ್​ಡೇ ವಿಶ್​ ಮಾಡದೆ ಇರುವುದು ಸಾಕಷ್ಟು ಜನರ ಸಿಟ್ಟಿಗೆ ಕಾರಣವಾಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಕೆಲವರು ರಶ್ಮಿಕಾ ಅವರಿಗೆ ನಿಯತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಕೆಲವರು ‘ಅಪ್ಪು ಬರ್ತ್​ಡೇ ದಿನ ಯಾರನ್ನೂ ದ್ವೇಷ ಮಾಡಬೇಡಿ’ ಎಂದು ಕೋರಿದ್ದಾರೆ.

ರಶ್ಮಿಕಾ ಮಂದಣ್ಣ ಈ ರೀತಿ ವಿವಾದಕ್ಕೆ ಸಿಲುಕಿದ್ದು ಇದೇ ಮೊದಲೇನಲ್ಲ. ಈ ಮೊದಲು ಕೂಡ ಅವರು ಇದೇ ರೀತಿಯ ತಪ್ಪನ್ನು ಮಾಡಿದ್ದರು. ಈ ವಿಚಾರದಲ್ಲಿ ಅವರು ಎಷ್ಟೇ ಟ್ರೋಲ್​ ಆದರೂ ತಲೆಕೆಡಿಸಿಕೊಳ್ಳುವುದಿಲ್ಲ.

ಸಿನಿಮಾ ವಿಚಾರಕ್ಕೆ ಬರೋದಾದರೆ, ಬಾಲಿವುಡ್​ನಲ್ಲಿ ರಶ್ಮಿಕಾ ನಟಿಸಿರುವ ‘ಮಿಷನ್​ ಮಜ್ನು’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾಗೆ ಅವರು ಜತೆಯಾಗಿದ್ದಾರೆ. ಅಮಿತಾಭ್​ ಬಚ್ಚನ್​ ನಟನೆಯ ‘ಗುಡ್​ಬೈ’ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ. ತೆಲುಗಿನ ‘ಪುಷ್ಪ 2’ ಸಿನಿಮಾ ಕೆಲಸಗಳು ಇನ್ನಷ್ಟೇ ಆರಂಭವಾಗಬೇಕಿದೆ.

ಇದನ್ನೂ ಓದಿ: ರಶ್ಮಿಕಾ ರೀತಿಯಲ್ಲಿ ಸೂಪರ್ ಆಗಿ​ ಡಾನ್ಸ್ ಮಾಡಿದ ವಂಶಿಕಾ; ‘ಪುಷ್ಪ ಪಾರ್ಟ್​ 10’ನಲ್ಲಿ ನೀನೇ ಇರ್ತೀಯಾ ಎಂದ ಸೃಜನ್

ಮೊನ್ನೆ ರಶ್ಮಿಕಾ, ನಿನ್ನೆ ಸಮಂತಾ; ದಕ್ಷಿಣ ಭಾರತದ ಬೆಡಗಿಯರ ಜತೆ ವರುಣ್​ ಧವನ್​ ಸುತ್ತಾಟ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?