AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಜನ್ಮದಿನಕ್ಕೆ ಶುಭಕೋರದ ರಶ್ಮಿಕಾ ಮಂದಣ್ಣ; ‘ನಿಯತ್ತಿಲ್ಲದವರು’ ಎಂದು ಕಿಡಿಕಾರಿದ ಫ್ಯಾನ್ಸ್​

ರಶ್ಮಿಕಾ ಹಾಗೂ ಪುನೀತ್​ ರಾಜ್​ಕುಮಾರ್​ ಅವರು ‘ಅಂಜನಿಪುತ್ರ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. 2 ಒಟ್ಟಿಗೆ ನಟಿಸಿದ ಹೊರತಾಗಿಯೂ ಪುನೀತ್​ಗೆ ರಶ್ಮಿಕಾ ಬರ್ತ್​ಡೇ ವಿಶ್​ ಮಾಡದೆ ಇರುವುದು ಸಾಕಷ್ಟು ಜನರ ಸಿಟ್ಟಿಗೆ ಕಾರಣವಾಗಿದೆ.

ಪುನೀತ್​ ಜನ್ಮದಿನಕ್ಕೆ ಶುಭಕೋರದ ರಶ್ಮಿಕಾ ಮಂದಣ್ಣ; ‘ನಿಯತ್ತಿಲ್ಲದವರು’ ಎಂದು ಕಿಡಿಕಾರಿದ ಫ್ಯಾನ್ಸ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 18, 2022 | 1:33 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸದಾ ಚರ್ಚೆಯಲ್ಲಿರುತ್ತಾರೆ. ಅವರು ಕನ್ನಡದ ಬಗ್ಗೆ ಪ್ರೀತಿ ತೋರಿಸುವುದಿಲ್ಲ ಎನ್ನುವ ಆರೋಪ ಸದಾ ಕೇಳಿ ಬರುತ್ತಲೇ ಇರುತ್ತದೆ. ಸದ್ಯ, ಅವರು ಯಾವುದೇ ಕನ್ನಡ ಸಿನಿಮಾ ಒಪ್ಪಿಕೊಂಡಿಲ್ಲ. ಬಾಲಿವುಡ್​, ಟಾಲಿವುಡ್​ ಎಂದು ಹೈದರಾಬಾದ್ ಹಾಗೂ ಮುಂಬೈನಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಅಲ್ಲಿಯೇ ಮನೆ ಖರೀದಿಸಿ ಸೆಟಲ್​ ಆಗುವ ಆಲೋಚನೆಯಲ್ಲಿ ಇದ್ದಾರೆ. ಈ ಮಧ್ಯೆ ರಶ್ಮಿಕಾ ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೋ ತಪ್ಪೊಂದನ್ನು ಮಾಡಿದ್ದಾರೆ. ಇದಕ್ಕೆ ಅವರು ತೀವ್ರ ಟೀಕೆ ಎದುರಿಸುತ್ತಿದ್ದಾರೆ. ಹಾಗಾದರೆ, ರಶ್ಮಿಕಾ ಮಂದಣ್ಣ ಮಾಡಿದ ತಪ್ಪೇನು? ಪುನೀತ್​ ರಾಜ್​ಕುಮಾರ್​ (Puneeth Rajkumar) ಬರ್ತ್​ಡೇಗೆ ಅವರು ವಿಶ್ ಮಾಡಿಲ್ಲ.

ಮಾರ್ಚ್​ 17ರಂದು ಪುನೀತ್​ ರಾಜ್​ಕುಮಾರ್​ ಬರ್ತ್​ಡೇ ಇತ್ತು. ಈ ವಿಶೇಷ ದಿನವನ್ನು ಅಭಿಮಾನಿಗಳು ಹಬ್ಬದಂತೆ ಆಚರಿಸಿದ್ದಾರೆ. ಪುನೀತ್​ ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ಜೇಮ್ಸ್​’ ಚಿತ್ರವನ್ನು ಅವರಿಲ್ಲ ಎನ್ನುವ ನೋವನ್ನು ಎದೆಯಲ್ಲಿ ಇಟ್ಟುಕೊಂಡೇ ವೀಕ್ಷಣೆ ಮಾಡಿದ್ದಾರೆ. ಹಲವು ಸೆಲೆಬ್ರಿಟಿಗಳು ಪುನೀತ್​ ಅವರನ್ನು ನೆನಪಿಸಿಕೊಂಡಿದ್ದಾರೆ. ಆದರೆ, ರಶ್ಮಿಕಾ ಮಾತ್ರ ಈ ವಿಚಾರದಲ್ಲಿ ಮೌನ ತಾಳಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣವಾಗಿದೆ.

ರಶ್ಮಿಕಾ ಹಾಗೂ ಪುನೀತ್​ ರಾಜ್​ಕುಮಾರ್​ ಅವರು ‘ಅಂಜನಿಪುತ್ರ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. 2017ರಲ್ಲಿ ತೆರೆಗೆ ಬಂದ ಈ ಸಿನಿಮಾಗೆ ಎ. ಹರ್ಷ ಅವರ ನಿರ್ದೇಶನ ಇತ್ತು. ಒಟ್ಟಿಗೆ ನಟಿಸಿದ ಹೊರತಾಗಿಯೂ ಪುನೀತ್​ಗೆ ರಶ್ಮಿಕಾ ಬರ್ತ್​ಡೇ ವಿಶ್​ ಮಾಡದೆ ಇರುವುದು ಸಾಕಷ್ಟು ಜನರ ಸಿಟ್ಟಿಗೆ ಕಾರಣವಾಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಕೆಲವರು ರಶ್ಮಿಕಾ ಅವರಿಗೆ ನಿಯತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಕೆಲವರು ‘ಅಪ್ಪು ಬರ್ತ್​ಡೇ ದಿನ ಯಾರನ್ನೂ ದ್ವೇಷ ಮಾಡಬೇಡಿ’ ಎಂದು ಕೋರಿದ್ದಾರೆ.

ರಶ್ಮಿಕಾ ಮಂದಣ್ಣ ಈ ರೀತಿ ವಿವಾದಕ್ಕೆ ಸಿಲುಕಿದ್ದು ಇದೇ ಮೊದಲೇನಲ್ಲ. ಈ ಮೊದಲು ಕೂಡ ಅವರು ಇದೇ ರೀತಿಯ ತಪ್ಪನ್ನು ಮಾಡಿದ್ದರು. ಈ ವಿಚಾರದಲ್ಲಿ ಅವರು ಎಷ್ಟೇ ಟ್ರೋಲ್​ ಆದರೂ ತಲೆಕೆಡಿಸಿಕೊಳ್ಳುವುದಿಲ್ಲ.

ಸಿನಿಮಾ ವಿಚಾರಕ್ಕೆ ಬರೋದಾದರೆ, ಬಾಲಿವುಡ್​ನಲ್ಲಿ ರಶ್ಮಿಕಾ ನಟಿಸಿರುವ ‘ಮಿಷನ್​ ಮಜ್ನು’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾಗೆ ಅವರು ಜತೆಯಾಗಿದ್ದಾರೆ. ಅಮಿತಾಭ್​ ಬಚ್ಚನ್​ ನಟನೆಯ ‘ಗುಡ್​ಬೈ’ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ. ತೆಲುಗಿನ ‘ಪುಷ್ಪ 2’ ಸಿನಿಮಾ ಕೆಲಸಗಳು ಇನ್ನಷ್ಟೇ ಆರಂಭವಾಗಬೇಕಿದೆ.

ಇದನ್ನೂ ಓದಿ: ರಶ್ಮಿಕಾ ರೀತಿಯಲ್ಲಿ ಸೂಪರ್ ಆಗಿ​ ಡಾನ್ಸ್ ಮಾಡಿದ ವಂಶಿಕಾ; ‘ಪುಷ್ಪ ಪಾರ್ಟ್​ 10’ನಲ್ಲಿ ನೀನೇ ಇರ್ತೀಯಾ ಎಂದ ಸೃಜನ್

ಮೊನ್ನೆ ರಶ್ಮಿಕಾ, ನಿನ್ನೆ ಸಮಂತಾ; ದಕ್ಷಿಣ ಭಾರತದ ಬೆಡಗಿಯರ ಜತೆ ವರುಣ್​ ಧವನ್​ ಸುತ್ತಾಟ

ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ