AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣಗೆ ‘ಪೊಗರು’, ಅವರು ಮಾಡಿದ ತಪ್ಪನ್ನು ಕನ್ನಡಿಗರು ಕ್ಷಮಿಸ್ತಾರಾ?

ರಶ್ಮಿಕಾ ಮಂದಣ್ಣ ಈಗ ಕನ್ನಡದ ನಟಿಯಾಗಿ ಮಾತ್ರ ಉಳಿದಿಲ್ಲ. ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಅವರು, ಹೈದರಾಬಾದ್​ನಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ.

Rashmika Mandanna: ರಶ್ಮಿಕಾ ಮಂದಣ್ಣಗೆ ‘ಪೊಗರು’, ಅವರು ಮಾಡಿದ ತಪ್ಪನ್ನು ಕನ್ನಡಿಗರು ಕ್ಷಮಿಸ್ತಾರಾ?
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
| Edited By: |

Updated on: Feb 19, 2021 | 7:54 PM

Share

ತಾವು ನಟಿಸಿರುವ ಸಿನಿಮಾ ತೆರೆಗೆ ಬರುತ್ತಿದೆ ಎಂದರೆ ನಟ-ನಟಿಯರು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ಜತೆಯೇ ಫಸ್ಟ್​ ಡೇ ಫಸ್ಟ್​ ಡೇ ಶೋ ನೋಡೊದು ಸಂಪ್ರದಾಯ. ಸ್ಯಾಂಡಲ್​ವುಡ್​ನಲ್ಲಂತೂ ಈ ಸಂಪ್ರದಾಯ ಮೊದಲಿನಿಂದಲೂ ನಡೆದುಕೊಂಡೇ ಬಂದಿದೆ. ಗಾಂಧಿ ನಗರವನ್ನು ದೇವಾಲಯದಂತೆ ಕಾಣುವ ಕಲಾವಿದರು, ಮೊದಲ ಶೋಗೆ ಹಾಜರಿ ಹಾಕುತ್ತಾರೆ. ಇಂದು ತೆರೆಕಂಡ ಪೊಗರು ಸಿನಿಮಾದಲ್ಲೂ ಅಷ್ಟೇ. ನಟ ಧ್ರುವ ಸರ್ಜಾ ಗಾಂಧಿ ನಗರದಲ್ಲಿರುವ ನರ್ತಕಿ ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ಜತೆ ಸಿನಿಮಾ ನೋಡಿದ್ದಾರೆ. ಆದರೆ, ಅಲ್ಲೆಲ್ಲೂ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡೇ ಇಲ್ಲ!

ರಶ್ಮಿಕಾ ಮಂದಣ್ಣ ಈಗ ಕನ್ನಡದ ನಟಿಯಾಗಿ ಮಾತ್ರ ಉಳಿದಿಲ್ಲ. ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಅವರು, ಹೈದರಾಬಾದ್​ನಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ. ಇದರ ಜತೆಗೆ ಬಾಲಿವುಡ್​ ಸಿನಿಮಾದಲ್ಲೂ ರಶ್ಮಿಕಾ ಬ್ಯುಸಿಯಾಗಿದ್ದಾರೆ. ರಶ್ಮಿಕಾಗೆ ಕೈತುಂಬ ಸಿನಿಮಾಗಳು ಇವೆ. ಬೇರೆ ಬೇರೆ ಚಿತ್ರದ ಶೂಟಿಂಗ್​ನಲ್ಲಿ ಅವರು ಬ್ಯುಸಿ ಇರುತ್ತಾರೆ. ಹೀಗಾಗಿ, ಅವರು ಫಸ್ಟ್​ ಡೇ ಫಸ್ಟ್​ ಡೇ ಶೋಗೆ ಬರಲು ಸಾಧ್ಯವಾಗಿಲ್ಲ ಎಂದಿಟ್ಟುಕೊಳ್ಳೋಣ.

ಆದರೆ.. ರಶ್ಮಿಕಾ ಕಡೆಯಿಂದ ಟ್ವಿಟ್ಟರ್​ನಲ್ಲಿ ಪೊಗರು ಸಿನಿಮಾ ಬಗ್ಗೆ ಇತ್ತೀಚಿನ ದಿನಗಳಲ್ಲಿ ಒಂದೇ ಒಂದು ಪೋಸ್ಟ್​​ ಬಿದ್ದಿಲ್ಲ. ಇನ್​ಸ್ಟಾಗ್ರಾಂನಲ್ಲಿ ಒಂದೇ ಒಂದು ಸ್ಟೇಟಸ್​ ಕೂಡ ಹಾಕಿಕೊಂಡಿಲ್ಲ. ಕೊನೆಯ ಪಕ್ಷ, ಇಂದು ಸಿನಿಮಾ ರಿಲೀಸ್​ ಆಗುತ್ತಿದೆ. ಅಭಿಮಾನಿಗಳು ಸಿನಿಮಾ ನೋಡಿ ಎಂದು ಇನ್​ಸ್ಟಾಗ್ರಾಂನಲ್ಲಿ ಒಂದು ಸ್ಟೇಟಸ್​ ಆದರೂ ಹಾಕಬಹುದಿತ್ತಲ್ಲ ಎನ್ನುವುದು ಕೆಲವರ ಅಭಿಪ್ರಾಯ.

ಇತ್ತೀಚೆಗೆ ರಶ್ಮಿಕಾ ನಟನೆಯ ಟಾಪ್​ ಟಕ್ಕರ್​ ವಿಡಿಯೋ ಸಾಂಗ್​ ರಿಲೀಸ್​ ಆಗಿತ್ತು. ಈ ವಿಡಿಯೋ ನೋಡಿ ಎಂದು ರಶ್ಮಿಕಾ ಮಂದಣ್ಣ ತುಂಬಾನೇ ವಿನಮ್ರವಾಗಿ ಅಭಿಮಾನಿಗಳ ಬಳಿ ಕೋರಿಕೊಂಡಿದ್ದರು. ಹೀಗಿರುವಾಗ, ಕನ್ನಡದ ಸಿನಿಮಾ ರಿಲೀಸ್​ ಆಗುತ್ತಿದ್ದರೂ ಅವರು ಒಂದೇ ಒಂದು ಪೋಸ್ಟ್​ ಹಾಕದೇ ಇರುವುದು ಏಕೆ ಎನ್ನುವ ಪ್ರಶ್ನೆಯನ್ನು ಅನೇಕರು ಕೇಳಿದ್ದಾರೆ.

ಇದನ್ನೂ ಓದಿ: Pogaru Movie Review: ಪೊಗರು ವಿಮರ್ಶೆ: ಫ್ಯಾನ್ಸ್​ ಖುಷಿಪಡಿಸಲು ಮತ್ತೆ ಮಾಸ್​ ಅವತಾರ ಎತ್ತಿದ ಧ್ರುವ ಸರ್ಜಾ

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು