Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣಗೆ ‘ಪೊಗರು’, ಅವರು ಮಾಡಿದ ತಪ್ಪನ್ನು ಕನ್ನಡಿಗರು ಕ್ಷಮಿಸ್ತಾರಾ?

ರಶ್ಮಿಕಾ ಮಂದಣ್ಣ ಈಗ ಕನ್ನಡದ ನಟಿಯಾಗಿ ಮಾತ್ರ ಉಳಿದಿಲ್ಲ. ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಅವರು, ಹೈದರಾಬಾದ್​ನಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ.

Rashmika Mandanna: ರಶ್ಮಿಕಾ ಮಂದಣ್ಣಗೆ ‘ಪೊಗರು’, ಅವರು ಮಾಡಿದ ತಪ್ಪನ್ನು ಕನ್ನಡಿಗರು ಕ್ಷಮಿಸ್ತಾರಾ?
ರಶ್ಮಿಕಾ ಮಂದಣ್ಣ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 19, 2021 | 7:54 PM

ತಾವು ನಟಿಸಿರುವ ಸಿನಿಮಾ ತೆರೆಗೆ ಬರುತ್ತಿದೆ ಎಂದರೆ ನಟ-ನಟಿಯರು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ಜತೆಯೇ ಫಸ್ಟ್​ ಡೇ ಫಸ್ಟ್​ ಡೇ ಶೋ ನೋಡೊದು ಸಂಪ್ರದಾಯ. ಸ್ಯಾಂಡಲ್​ವುಡ್​ನಲ್ಲಂತೂ ಈ ಸಂಪ್ರದಾಯ ಮೊದಲಿನಿಂದಲೂ ನಡೆದುಕೊಂಡೇ ಬಂದಿದೆ. ಗಾಂಧಿ ನಗರವನ್ನು ದೇವಾಲಯದಂತೆ ಕಾಣುವ ಕಲಾವಿದರು, ಮೊದಲ ಶೋಗೆ ಹಾಜರಿ ಹಾಕುತ್ತಾರೆ. ಇಂದು ತೆರೆಕಂಡ ಪೊಗರು ಸಿನಿಮಾದಲ್ಲೂ ಅಷ್ಟೇ. ನಟ ಧ್ರುವ ಸರ್ಜಾ ಗಾಂಧಿ ನಗರದಲ್ಲಿರುವ ನರ್ತಕಿ ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ಜತೆ ಸಿನಿಮಾ ನೋಡಿದ್ದಾರೆ. ಆದರೆ, ಅಲ್ಲೆಲ್ಲೂ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡೇ ಇಲ್ಲ!

ರಶ್ಮಿಕಾ ಮಂದಣ್ಣ ಈಗ ಕನ್ನಡದ ನಟಿಯಾಗಿ ಮಾತ್ರ ಉಳಿದಿಲ್ಲ. ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಅವರು, ಹೈದರಾಬಾದ್​ನಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ. ಇದರ ಜತೆಗೆ ಬಾಲಿವುಡ್​ ಸಿನಿಮಾದಲ್ಲೂ ರಶ್ಮಿಕಾ ಬ್ಯುಸಿಯಾಗಿದ್ದಾರೆ. ರಶ್ಮಿಕಾಗೆ ಕೈತುಂಬ ಸಿನಿಮಾಗಳು ಇವೆ. ಬೇರೆ ಬೇರೆ ಚಿತ್ರದ ಶೂಟಿಂಗ್​ನಲ್ಲಿ ಅವರು ಬ್ಯುಸಿ ಇರುತ್ತಾರೆ. ಹೀಗಾಗಿ, ಅವರು ಫಸ್ಟ್​ ಡೇ ಫಸ್ಟ್​ ಡೇ ಶೋಗೆ ಬರಲು ಸಾಧ್ಯವಾಗಿಲ್ಲ ಎಂದಿಟ್ಟುಕೊಳ್ಳೋಣ.

ಆದರೆ.. ರಶ್ಮಿಕಾ ಕಡೆಯಿಂದ ಟ್ವಿಟ್ಟರ್​ನಲ್ಲಿ ಪೊಗರು ಸಿನಿಮಾ ಬಗ್ಗೆ ಇತ್ತೀಚಿನ ದಿನಗಳಲ್ಲಿ ಒಂದೇ ಒಂದು ಪೋಸ್ಟ್​​ ಬಿದ್ದಿಲ್ಲ. ಇನ್​ಸ್ಟಾಗ್ರಾಂನಲ್ಲಿ ಒಂದೇ ಒಂದು ಸ್ಟೇಟಸ್​ ಕೂಡ ಹಾಕಿಕೊಂಡಿಲ್ಲ. ಕೊನೆಯ ಪಕ್ಷ, ಇಂದು ಸಿನಿಮಾ ರಿಲೀಸ್​ ಆಗುತ್ತಿದೆ. ಅಭಿಮಾನಿಗಳು ಸಿನಿಮಾ ನೋಡಿ ಎಂದು ಇನ್​ಸ್ಟಾಗ್ರಾಂನಲ್ಲಿ ಒಂದು ಸ್ಟೇಟಸ್​ ಆದರೂ ಹಾಕಬಹುದಿತ್ತಲ್ಲ ಎನ್ನುವುದು ಕೆಲವರ ಅಭಿಪ್ರಾಯ.

ಇತ್ತೀಚೆಗೆ ರಶ್ಮಿಕಾ ನಟನೆಯ ಟಾಪ್​ ಟಕ್ಕರ್​ ವಿಡಿಯೋ ಸಾಂಗ್​ ರಿಲೀಸ್​ ಆಗಿತ್ತು. ಈ ವಿಡಿಯೋ ನೋಡಿ ಎಂದು ರಶ್ಮಿಕಾ ಮಂದಣ್ಣ ತುಂಬಾನೇ ವಿನಮ್ರವಾಗಿ ಅಭಿಮಾನಿಗಳ ಬಳಿ ಕೋರಿಕೊಂಡಿದ್ದರು. ಹೀಗಿರುವಾಗ, ಕನ್ನಡದ ಸಿನಿಮಾ ರಿಲೀಸ್​ ಆಗುತ್ತಿದ್ದರೂ ಅವರು ಒಂದೇ ಒಂದು ಪೋಸ್ಟ್​ ಹಾಕದೇ ಇರುವುದು ಏಕೆ ಎನ್ನುವ ಪ್ರಶ್ನೆಯನ್ನು ಅನೇಕರು ಕೇಳಿದ್ದಾರೆ.

ಇದನ್ನೂ ಓದಿ: Pogaru Movie Review: ಪೊಗರು ವಿಮರ್ಶೆ: ಫ್ಯಾನ್ಸ್​ ಖುಷಿಪಡಿಸಲು ಮತ್ತೆ ಮಾಸ್​ ಅವತಾರ ಎತ್ತಿದ ಧ್ರುವ ಸರ್ಜಾ

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ