AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣಗೆ ‘ಪೊಗರು’, ಅವರು ಮಾಡಿದ ತಪ್ಪನ್ನು ಕನ್ನಡಿಗರು ಕ್ಷಮಿಸ್ತಾರಾ?

ರಶ್ಮಿಕಾ ಮಂದಣ್ಣ ಈಗ ಕನ್ನಡದ ನಟಿಯಾಗಿ ಮಾತ್ರ ಉಳಿದಿಲ್ಲ. ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಅವರು, ಹೈದರಾಬಾದ್​ನಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ.

Rashmika Mandanna: ರಶ್ಮಿಕಾ ಮಂದಣ್ಣಗೆ ‘ಪೊಗರು’, ಅವರು ಮಾಡಿದ ತಪ್ಪನ್ನು ಕನ್ನಡಿಗರು ಕ್ಷಮಿಸ್ತಾರಾ?
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
| Edited By: |

Updated on: Feb 19, 2021 | 7:54 PM

Share

ತಾವು ನಟಿಸಿರುವ ಸಿನಿಮಾ ತೆರೆಗೆ ಬರುತ್ತಿದೆ ಎಂದರೆ ನಟ-ನಟಿಯರು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ಜತೆಯೇ ಫಸ್ಟ್​ ಡೇ ಫಸ್ಟ್​ ಡೇ ಶೋ ನೋಡೊದು ಸಂಪ್ರದಾಯ. ಸ್ಯಾಂಡಲ್​ವುಡ್​ನಲ್ಲಂತೂ ಈ ಸಂಪ್ರದಾಯ ಮೊದಲಿನಿಂದಲೂ ನಡೆದುಕೊಂಡೇ ಬಂದಿದೆ. ಗಾಂಧಿ ನಗರವನ್ನು ದೇವಾಲಯದಂತೆ ಕಾಣುವ ಕಲಾವಿದರು, ಮೊದಲ ಶೋಗೆ ಹಾಜರಿ ಹಾಕುತ್ತಾರೆ. ಇಂದು ತೆರೆಕಂಡ ಪೊಗರು ಸಿನಿಮಾದಲ್ಲೂ ಅಷ್ಟೇ. ನಟ ಧ್ರುವ ಸರ್ಜಾ ಗಾಂಧಿ ನಗರದಲ್ಲಿರುವ ನರ್ತಕಿ ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ಜತೆ ಸಿನಿಮಾ ನೋಡಿದ್ದಾರೆ. ಆದರೆ, ಅಲ್ಲೆಲ್ಲೂ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡೇ ಇಲ್ಲ!

ರಶ್ಮಿಕಾ ಮಂದಣ್ಣ ಈಗ ಕನ್ನಡದ ನಟಿಯಾಗಿ ಮಾತ್ರ ಉಳಿದಿಲ್ಲ. ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಅವರು, ಹೈದರಾಬಾದ್​ನಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ. ಇದರ ಜತೆಗೆ ಬಾಲಿವುಡ್​ ಸಿನಿಮಾದಲ್ಲೂ ರಶ್ಮಿಕಾ ಬ್ಯುಸಿಯಾಗಿದ್ದಾರೆ. ರಶ್ಮಿಕಾಗೆ ಕೈತುಂಬ ಸಿನಿಮಾಗಳು ಇವೆ. ಬೇರೆ ಬೇರೆ ಚಿತ್ರದ ಶೂಟಿಂಗ್​ನಲ್ಲಿ ಅವರು ಬ್ಯುಸಿ ಇರುತ್ತಾರೆ. ಹೀಗಾಗಿ, ಅವರು ಫಸ್ಟ್​ ಡೇ ಫಸ್ಟ್​ ಡೇ ಶೋಗೆ ಬರಲು ಸಾಧ್ಯವಾಗಿಲ್ಲ ಎಂದಿಟ್ಟುಕೊಳ್ಳೋಣ.

ಆದರೆ.. ರಶ್ಮಿಕಾ ಕಡೆಯಿಂದ ಟ್ವಿಟ್ಟರ್​ನಲ್ಲಿ ಪೊಗರು ಸಿನಿಮಾ ಬಗ್ಗೆ ಇತ್ತೀಚಿನ ದಿನಗಳಲ್ಲಿ ಒಂದೇ ಒಂದು ಪೋಸ್ಟ್​​ ಬಿದ್ದಿಲ್ಲ. ಇನ್​ಸ್ಟಾಗ್ರಾಂನಲ್ಲಿ ಒಂದೇ ಒಂದು ಸ್ಟೇಟಸ್​ ಕೂಡ ಹಾಕಿಕೊಂಡಿಲ್ಲ. ಕೊನೆಯ ಪಕ್ಷ, ಇಂದು ಸಿನಿಮಾ ರಿಲೀಸ್​ ಆಗುತ್ತಿದೆ. ಅಭಿಮಾನಿಗಳು ಸಿನಿಮಾ ನೋಡಿ ಎಂದು ಇನ್​ಸ್ಟಾಗ್ರಾಂನಲ್ಲಿ ಒಂದು ಸ್ಟೇಟಸ್​ ಆದರೂ ಹಾಕಬಹುದಿತ್ತಲ್ಲ ಎನ್ನುವುದು ಕೆಲವರ ಅಭಿಪ್ರಾಯ.

ಇತ್ತೀಚೆಗೆ ರಶ್ಮಿಕಾ ನಟನೆಯ ಟಾಪ್​ ಟಕ್ಕರ್​ ವಿಡಿಯೋ ಸಾಂಗ್​ ರಿಲೀಸ್​ ಆಗಿತ್ತು. ಈ ವಿಡಿಯೋ ನೋಡಿ ಎಂದು ರಶ್ಮಿಕಾ ಮಂದಣ್ಣ ತುಂಬಾನೇ ವಿನಮ್ರವಾಗಿ ಅಭಿಮಾನಿಗಳ ಬಳಿ ಕೋರಿಕೊಂಡಿದ್ದರು. ಹೀಗಿರುವಾಗ, ಕನ್ನಡದ ಸಿನಿಮಾ ರಿಲೀಸ್​ ಆಗುತ್ತಿದ್ದರೂ ಅವರು ಒಂದೇ ಒಂದು ಪೋಸ್ಟ್​ ಹಾಕದೇ ಇರುವುದು ಏಕೆ ಎನ್ನುವ ಪ್ರಶ್ನೆಯನ್ನು ಅನೇಕರು ಕೇಳಿದ್ದಾರೆ.

ಇದನ್ನೂ ಓದಿ: Pogaru Movie Review: ಪೊಗರು ವಿಮರ್ಶೆ: ಫ್ಯಾನ್ಸ್​ ಖುಷಿಪಡಿಸಲು ಮತ್ತೆ ಮಾಸ್​ ಅವತಾರ ಎತ್ತಿದ ಧ್ರುವ ಸರ್ಜಾ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ