Rashmika Mandanna: ರಶ್ಮಿಕಾ ಮಂದಣ್ಣಗೆ ‘ಪೊಗರು’, ಅವರು ಮಾಡಿದ ತಪ್ಪನ್ನು ಕನ್ನಡಿಗರು ಕ್ಷಮಿಸ್ತಾರಾ?

ರಶ್ಮಿಕಾ ಮಂದಣ್ಣ ಈಗ ಕನ್ನಡದ ನಟಿಯಾಗಿ ಮಾತ್ರ ಉಳಿದಿಲ್ಲ. ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಅವರು, ಹೈದರಾಬಾದ್​ನಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ.

Rashmika Mandanna: ರಶ್ಮಿಕಾ ಮಂದಣ್ಣಗೆ ‘ಪೊಗರು’, ಅವರು ಮಾಡಿದ ತಪ್ಪನ್ನು ಕನ್ನಡಿಗರು ಕ್ಷಮಿಸ್ತಾರಾ?
ರಶ್ಮಿಕಾ ಮಂದಣ್ಣ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 19, 2021 | 7:54 PM

ತಾವು ನಟಿಸಿರುವ ಸಿನಿಮಾ ತೆರೆಗೆ ಬರುತ್ತಿದೆ ಎಂದರೆ ನಟ-ನಟಿಯರು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ಜತೆಯೇ ಫಸ್ಟ್​ ಡೇ ಫಸ್ಟ್​ ಡೇ ಶೋ ನೋಡೊದು ಸಂಪ್ರದಾಯ. ಸ್ಯಾಂಡಲ್​ವುಡ್​ನಲ್ಲಂತೂ ಈ ಸಂಪ್ರದಾಯ ಮೊದಲಿನಿಂದಲೂ ನಡೆದುಕೊಂಡೇ ಬಂದಿದೆ. ಗಾಂಧಿ ನಗರವನ್ನು ದೇವಾಲಯದಂತೆ ಕಾಣುವ ಕಲಾವಿದರು, ಮೊದಲ ಶೋಗೆ ಹಾಜರಿ ಹಾಕುತ್ತಾರೆ. ಇಂದು ತೆರೆಕಂಡ ಪೊಗರು ಸಿನಿಮಾದಲ್ಲೂ ಅಷ್ಟೇ. ನಟ ಧ್ರುವ ಸರ್ಜಾ ಗಾಂಧಿ ನಗರದಲ್ಲಿರುವ ನರ್ತಕಿ ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ಜತೆ ಸಿನಿಮಾ ನೋಡಿದ್ದಾರೆ. ಆದರೆ, ಅಲ್ಲೆಲ್ಲೂ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡೇ ಇಲ್ಲ!

ರಶ್ಮಿಕಾ ಮಂದಣ್ಣ ಈಗ ಕನ್ನಡದ ನಟಿಯಾಗಿ ಮಾತ್ರ ಉಳಿದಿಲ್ಲ. ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಅವರು, ಹೈದರಾಬಾದ್​ನಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ. ಇದರ ಜತೆಗೆ ಬಾಲಿವುಡ್​ ಸಿನಿಮಾದಲ್ಲೂ ರಶ್ಮಿಕಾ ಬ್ಯುಸಿಯಾಗಿದ್ದಾರೆ. ರಶ್ಮಿಕಾಗೆ ಕೈತುಂಬ ಸಿನಿಮಾಗಳು ಇವೆ. ಬೇರೆ ಬೇರೆ ಚಿತ್ರದ ಶೂಟಿಂಗ್​ನಲ್ಲಿ ಅವರು ಬ್ಯುಸಿ ಇರುತ್ತಾರೆ. ಹೀಗಾಗಿ, ಅವರು ಫಸ್ಟ್​ ಡೇ ಫಸ್ಟ್​ ಡೇ ಶೋಗೆ ಬರಲು ಸಾಧ್ಯವಾಗಿಲ್ಲ ಎಂದಿಟ್ಟುಕೊಳ್ಳೋಣ.

ಆದರೆ.. ರಶ್ಮಿಕಾ ಕಡೆಯಿಂದ ಟ್ವಿಟ್ಟರ್​ನಲ್ಲಿ ಪೊಗರು ಸಿನಿಮಾ ಬಗ್ಗೆ ಇತ್ತೀಚಿನ ದಿನಗಳಲ್ಲಿ ಒಂದೇ ಒಂದು ಪೋಸ್ಟ್​​ ಬಿದ್ದಿಲ್ಲ. ಇನ್​ಸ್ಟಾಗ್ರಾಂನಲ್ಲಿ ಒಂದೇ ಒಂದು ಸ್ಟೇಟಸ್​ ಕೂಡ ಹಾಕಿಕೊಂಡಿಲ್ಲ. ಕೊನೆಯ ಪಕ್ಷ, ಇಂದು ಸಿನಿಮಾ ರಿಲೀಸ್​ ಆಗುತ್ತಿದೆ. ಅಭಿಮಾನಿಗಳು ಸಿನಿಮಾ ನೋಡಿ ಎಂದು ಇನ್​ಸ್ಟಾಗ್ರಾಂನಲ್ಲಿ ಒಂದು ಸ್ಟೇಟಸ್​ ಆದರೂ ಹಾಕಬಹುದಿತ್ತಲ್ಲ ಎನ್ನುವುದು ಕೆಲವರ ಅಭಿಪ್ರಾಯ.

ಇತ್ತೀಚೆಗೆ ರಶ್ಮಿಕಾ ನಟನೆಯ ಟಾಪ್​ ಟಕ್ಕರ್​ ವಿಡಿಯೋ ಸಾಂಗ್​ ರಿಲೀಸ್​ ಆಗಿತ್ತು. ಈ ವಿಡಿಯೋ ನೋಡಿ ಎಂದು ರಶ್ಮಿಕಾ ಮಂದಣ್ಣ ತುಂಬಾನೇ ವಿನಮ್ರವಾಗಿ ಅಭಿಮಾನಿಗಳ ಬಳಿ ಕೋರಿಕೊಂಡಿದ್ದರು. ಹೀಗಿರುವಾಗ, ಕನ್ನಡದ ಸಿನಿಮಾ ರಿಲೀಸ್​ ಆಗುತ್ತಿದ್ದರೂ ಅವರು ಒಂದೇ ಒಂದು ಪೋಸ್ಟ್​ ಹಾಕದೇ ಇರುವುದು ಏಕೆ ಎನ್ನುವ ಪ್ರಶ್ನೆಯನ್ನು ಅನೇಕರು ಕೇಳಿದ್ದಾರೆ.

ಇದನ್ನೂ ಓದಿ: Pogaru Movie Review: ಪೊಗರು ವಿಮರ್ಶೆ: ಫ್ಯಾನ್ಸ್​ ಖುಷಿಪಡಿಸಲು ಮತ್ತೆ ಮಾಸ್​ ಅವತಾರ ಎತ್ತಿದ ಧ್ರುವ ಸರ್ಜಾ

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು