‘ಇದು ನನಗೆ ಚೆನ್ನಾಗಿ ನೆನಪಿದೆ’: ರಕ್ಷಿತ್​ಗೆ ಪ್ರತಿಕ್ರಿಯೆ ಕೊಟ್ಟ ರಶ್ಮಿಕಾ ಮಂದಣ್ಣ!

ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಡುವೆ ಈಗ ಒಡನಾಟ ಹೇಗಿದೆ? ಈ ಪ್ರಶ್ನೆ ಅಭಿಮಾನಿಗಳ ತಲೆಯಲ್ಲಿ ಕೊರೆಯುತ್ತಿತ್ತು. ರಕ್ಷಿತ್​ ಮಾಡಿದ ಹೊಸ ಟ್ವೀಟ್​ ನೋಡಿದ ಅನೇಕರಿಗೆ ಒಂದು ಚಿತ್ರಣ ಸಿಕ್ಕಿದೆ.

‘ಇದು ನನಗೆ ಚೆನ್ನಾಗಿ ನೆನಪಿದೆ’: ರಕ್ಷಿತ್​ಗೆ ಪ್ರತಿಕ್ರಿಯೆ ಕೊಟ್ಟ ರಶ್ಮಿಕಾ ಮಂದಣ್ಣ!
ರಕ್ಷಿತ್​ ಶೆಟ್ಟಿ - ರಶ್ಮಿಕಾ ಮಂದಣ್ಣ
Follow us
|

Updated on: Apr 06, 2021 | 8:04 AM

ಸ್ಯಾಂಡಲ್​ವುಡ್​ನ ಮುದ್ದಾದ ಜೋಡಿಗಳ ಸಾಲಿನಲ್ಲಿದ್ದ ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಕಾರಣಾಂತರಗಳಿಂದ ನಂತರದ ದಿನಗಳಲ್ಲಿ ಬೇರಾದರು. ಮೊದಲು ಅವರಿಬ್ಬರ ನಡುವೆ ಮನಸ್ತಾಪವಿತ್ತು. ಆದರೆ ಈಗ ಅದನ್ನೆಲ್ಲ ಮರೆತು ಮುಂದೆ ಸಾಗುತ್ತಿದ್ದಾರೆ. ಅಷ್ಟೇ ಅಲ್ಲದೆ, ಸೋಶಿಯಲ್​ ಮೀಡಿಯಾದಲ್ಲಿ ಪರಸ್ಪರ ವಿಶ್​ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ಕಂಡು ಅಭಿಮಾನಿಗಳಿಗೆ ಗೊಂದಲ ಆಗಿರುವುದಂತೂ ನಿಜ. ಈ ನಡುವೆ ರಶ್ಮಿಕಾ ಬರ್ತ್​ಡೇ ಸಲುವಾಗಿ ರಕ್ಷಿತ್​ ಮಾಡಿದ ಒಂದು ಟ್ವೀಟ್​ ಸಖತ್ ವೈರಲ್​ ಆಗಿತ್ತು. ಅದಕ್ಕೆ ರಶ್ಮಿಕಾ ಮಂದಣ್ಣ ಸೂಕ್ತ ಪ್ರತಿಕ್ರಿಯೆ ನೀಡಿದ್ದಾರೆ.

ಏ.5ರಂದು ರಶ್ಮಿಕಾ ಮಂದಣ್ಣ ಬರ್ತ್​ಡೇ. ಆ ಪ್ರಯುಕ್ತ ಅನೇಕ ಸೆಲೆಬ್ರಿಟಿಗಳು ಅವರಿಗೆ ಟ್ವಿಟರ್​ ಮೂಲಕ ಶುಭ ಹಾರೈಸಿದ್ದರು. ಅದೇ ರೀತಿ ರಕ್ಷಿತ್​ ಶೆಟ್ಟಿ ಕೂಡ ಒಂದು ವಿಶೇಷವಾದ ವಿಡಿಯೋ ಮೂಲಕ ವಿಶ್​ ಮಾಡಿದರು. ಕಿರಿಕ್​ ಪಾರ್ಟಿ ಸಿನಿಮಾದ ಹೀರೋಯಿನ್​ ಪಾತ್ರಕ್ಕಾಗಿ ಮಾಡಿದ ಆಡಿಷನ್​ ವಿಡಿಯೋವನ್ನು ಅವರು ಹಂಚಿಕೊಂಡರು. ಅದು ಸಖತ್ ವೈರಲ್​ ಆಗಿದೆ. ರಶ್ಮಿಕಾ ಗಮನಕ್ಕೂ ಬಂದಿದೆ.

‘ಕಿರಿಕ್​ ಪಾರ್ಟಿ ಸಿನಿಮಾದ ಆಡಿಷನ್​ನಿಂದ ಈ ಸುಂದರ ನೆನಪನ್ನು ಹಂಚಿಕೊಳ್ಳುತ್ತಿದ್ದೇನೆ. ಅಲ್ಲಿಂದ ನೀನು ತುಂಬ ದೂರ ಪ್ರಯಾಣ ಮಾಡಿದ್ದೀಯ. ನಿಜವಾದ ವಾರಿಯರ್​ ರೀತಿಯಲ್ಲಿ ನಿನ್ನ ಕನಸುಗಳ ಬೆನ್ನು ಹತ್ತಿದ್ದೀಯ. ನಿನ್ನ ಬಗ್ಗೆ ಹೆಮ್ಮೆ ಎನಿಸುತ್ತದೆ ಹುಡುಗಿ. ಜನ್ಮದಿನದ ಶುಭಾಶಯಗಳು. ನಿನಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗಲಿ’ ಎಂದು ರಕ್ಷಿತ್​ ಶೆಟ್ಟಿ ಟ್ವೀಟ್​ ಮಾಡಿದ್ದರು. ಅದನ್ನು ಕಂಡ ರಶ್ಮಿಕಾ ಖುಷಿ ಆಗಿದ್ದಾರೆ.

‘ಆ….. ನನಗೆ ಇದು ತುಂಬಾ ಚೆನ್ನಾಗಿ ನೆನಪಿದೆ. ಧನ್ಯವಾದಗಳು ರಕ್ಷಿತ್​ ಶೆಟ್ಟಿ’ ಎಂದು ರಶ್ಮಿಕಾ ಮಂದಣ್ಣ ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ಗೆ ಅಭಿಮಾನಿಗಳು ಹಲವು ಬಗೆಯಲ್ಲಿ ಕಾಮೆಂಟ್​ ಮಾಡುತ್ತಿದ್ದಾರೆ. ರಶ್ಮಿಕಾ ಮತ್ತು ರಕ್ಷಿತ್​ ಮತ್ತೆ ಒಂದಾಗಲಿ ಎಂದು ಅನೇಕರು ಬಯಸುತ್ತಿದ್ದಾರೆ. ಪ್ರೀತಿ ತಿರಸ್ಕರಿಸಿ ಹೋದ ಹುಡುಗಿಯ ಬಗ್ಗೆ ರಕ್ಷಿತ್​ ಇಂದಿಗೂ ಒಳ್ಳೆಯ ಭಾವನೆ ಇಟ್ಟುಕೊಂಡಿದ್ದಾರೆ ಎಂದು ತುಂಬ ಜನ ಕಾಮೆಂಟ್​ ಮಾಡಿದ್ದಾರೆ. ರಕ್ಷಿತ್​ ಅವರ ಈ ಟ್ವೀಟ್​ ಕೆಲವರಿಗೆ ಹಿಡಿಸಿಲ್ಲ. ದಯವಿಟ್ಟು ಇದನ್ನು ಡಿಲಿಟ್​ ಮಾಡಿ ಎಂದು ಅವರೆಲ್ಲ ಮನವಿ ಮಾಡಿಕೊಂಡಿದ್ದಾರೆ.

ಈ ಹಿಂದೆ ‘ಕಿರಿಕ್​ ಪಾರ್ಟಿ’ ಸಿನಿಮಾದ ‘ಬೆಳಗೆದ್ದು ಯಾರ ಮುಖವ..’ ಹಾಡು 100 ಮಿಲಿಯನ್​ ವೀಕ್ಷಣೆ ಕಂಡಾಗಲೂ ಅದರ ಬಗ್ಗೆ ರಶ್ಮಿಕಾ ಟ್ವೀಟ್​ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ರಕ್ಷಿತ್​, ‘ನೀನು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಹುಡುಗಿ. ನಿನ್ನ ಕನಸುಗಳೆಲ್ಲ ನನಸಾಗಲಿ’ ಎಂದು ಹಾರೈಸಿದ್ದರು. ಇಬ್ಬರ ನಡುವೆ ಇದ್ದ ವೈಮನಸ್ಸು ತಣ್ಣಗಾಗಿದೆ ಎಂಬುದಕ್ಕೆ ಆ ಟ್ವೀಟ್​ ಸಂಭಾಷಣೆ ಸಾಕ್ಷಿ ನೀಡಿತ್ತು.

ಇದನ್ನೂ ಓದಿ: Rakshit Shetty: ರಶ್ಮಿಕಾ ಜೊತೆಗಿನ 6 ವರ್ಷದ ಹಳೇ ವಿಡಿಯೋ ಹಂಚಿಕೊಂಡ ರಕ್ಷಿತ್​ ಶೆಟ್ಟಿ! ಸಾನ್ವಿಗೆ ಕರ್ಣನ ಬರ್ತ್​ಡೇ ಗಿಫ್ಟ್​

‘ಕಿರಿಕ್​ ಪಾರ್ಟಿ 2’ ಸಿನಿಮಾಗಾಗಿ ಕಾಯುತ್ತಿದ್ದೀರಾ? ಹಾಗಾದರೆ ಇಲ್ಲಿದೆ ರಕ್ಷಿತ್​ ಶೆಟ್ಟಿ ನೀಡಿದ ಗುಡ್​ ನ್ಯೂಸ್​!

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್