AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಕ್ಷಿತ್​ ಶೆಟ್ಟಿ ಬರ್ತ್​ಡೇ ವಿಶ್​​ಗೆ ಪ್ರೀತಿಯಿಂದ ಉತ್ತರಿಸಿದ ರಶ್ಮಿಕಾ ಮಂದಣ್ಣ!

ಚಿತ್ರದ ಕೆಲವು ಡೈಲಾಗ್​ಗಳನ್ನು ಹೇಳುವಂತೆ ರಶ್ಮಿಕಾಗೆ ಸೂಚಿಸಲಾಗಿತ್ತು. ಈ ವಿಡಿಯೋವನ್ನು ರಕ್ಷಿತ್​ ಹಂಚಿಕೊಂಡು ಬರ್ತ್​ ಡೇ ವಿಶ್​ ತಿಳಿಸಿದ್ದರು.

Rashmika Mandanna: ರಕ್ಷಿತ್​ ಶೆಟ್ಟಿ ಬರ್ತ್​ಡೇ ವಿಶ್​​ಗೆ ಪ್ರೀತಿಯಿಂದ ಉತ್ತರಿಸಿದ ರಶ್ಮಿಕಾ ಮಂದಣ್ಣ!
ರಕ್ಷಿತ್​-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Apr 05, 2021 | 6:25 PM

Share

ನಟ ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಡುವೆ ಇದ್ದ ಪ್ರೀತಿ ಸೇತುವೆ ಮುರಿದು ಬಿದ್ದಿತ್ತು. ಈ ಎಲ್ಲಾ ಕಹಿ ಘಟನೆಗಳನ್ನು ರಕ್ಷಿತ್ ಮರೆತಿದ್ದಾರೆ. ಅಷ್ಟೇ ಅಲ್ಲ ಕಳೆದ ವರ್ಷಗಳಿಂದ ರಶ್ಮಿಕಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಇಂದು ರಶ್ಮಿಕಾ ಜನ್ಮದಿನ. ಇದಲ್ಲದೆ ವಿಶೇಷ ಟ್ವೀಟ್​ ಮೂಲಕ ಶುಭ ಹಾರೈಸಿದ್ದರು. ಇದಕ್ಕೆ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಬಣ್ಣದ ಲೋಕದಲ್ಲಿ ಭದ್ರ ಬುನಾದಿ ಹಾಕಿಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. 2016ರಲ್ಲಿ ಬಂದ ಆ ಚಿತ್ರವನ್ನು ರಕ್ಷಿತ್​ ಶೆಟ್ಟಿ ನಿರ್ಮಾಣ ಮಾಡಿದ್ದರು. ರಶ್ಮಿಕಾಗೆ ಕಿರಿಕ್​ ಪಾರ್ಟಿಯಲ್ಲಿ ರಕ್ಷಿತ್​ ಅವಕಾಶ ನೀಡಿದ್ದರು. ರಶ್ಮಿಕಾ ಬದುಕು ಬದಲಾಗಲು ಇದು ಪ್ರಮುಖ ಕಾರಣವಾಗಿತ್ತು. ಕಿರಿಕ್​ ಪಾರ್ಟಿ ಚಿತ್ರದ ಹೀರೋಯಿನ್​ ಪಾತ್ರಕ್ಕಾಗಿ ಹಲವಾರು ಹುಡುಗಿಯರ ಆಡಿಷನ್ ಮಾಡಲಾಗಿತ್ತು. ಅದರಲ್ಲಿ ರಶ್ಮಿಕಾ ಮಂದಣ್ಣ ಕೂಡ ಭಾಗವಹಿಸಿದ್ದರು. ಚಿತ್ರದ ಕೆಲವು ಡೈಲಾಗ್​ಗಳನ್ನು ಹೇಳುವಂತೆ ರಶ್ಮಿಕಾಗೆ ಸೂಚಿಸಲಾಗಿತ್ತು. ಈ ವಿಡಿಯೋವನ್ನು ರಕ್ಷಿತ್​ ಹಂಚಿಕೊಂಡು ಬರ್ತ್​ ಡೇ ವಿಶ್​ ತಿಳಿಸಿದ್ದರು.

‘ಕಿರಿಕ್​ ಪಾರ್ಟಿ ಸಿನಿಮಾದ ಆಡಿಷನ್​ನಿಂದ ಈ ಸುಂದರ ನೆನಪನ್ನು ಹಂಚಿಕೊಳ್ಳುತ್ತಿದ್ದೇನೆ. ಅಲ್ಲಿಂದ ನೀನು ತುಂಬ ದೂರ ಪ್ರಯಾಣ ಮಾಡಿದ್ದೀಯ. ನಿಜವಾದ ವಾರಿಯರ್​ ರೀತಿಯಲ್ಲಿ ನಿನ್ನ ಕನಸುಗಳ ಬೆನ್ನು ಹತ್ತಿದ್ದೀಯ. ನಿನ್ನ ಬಗ್ಗೆ ಹೆಮ್ಮೆ ಎನಿಸುತ್ತದೆ ಹುಡುಗಿ. ಜನ್ಮದಿನದ ಶುಭಾಶಯಗಳು. ನಿನಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗಲಿ’ ಎಂದು ರಕ್ಷಿತ್​ ಶೆಟ್ಟಿ ಟ್ವೀಟ್​ ಮಾಡಿದ್ದರು.

ಇದಕ್ಕೆ ಈಗ ರಶ್ಮಿಕಾ ಉತ್ತರಿಸಿದ್ದಾರೆ. ನನಗೆ ಇದು ಇನ್ನೂ ಸ್ಪಷ್ಟವಾಗಿ ನೆನಪಿದೆ. ಧನ್ಯವಾದಗಳು ರಕ್ಷಿತ್​ ಶೆಟ್ಟಿ. ಮೀನ್ಸ್​ ಅ ಲಾಟ್​ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: Rakshit Shetty: ರಶ್ಮಿಕಾ ಜೊತೆಗಿನ 6 ವರ್ಷದ ಹಳೇ ವಿಡಿಯೋ ಹಂಚಿಕೊಂಡ ರಕ್ಷಿತ್​ ಶೆಟ್ಟಿ! ಸಾನ್ವಿಗೆ ಕರ್ಣನ ಬರ್ತ್​ಡೇ ಗಿಫ್ಟ್​

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್