AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಕ್ಷಿತ್​ ಶೆಟ್ಟಿ ಬರ್ತ್​ಡೇ ವಿಶ್​​ಗೆ ಪ್ರೀತಿಯಿಂದ ಉತ್ತರಿಸಿದ ರಶ್ಮಿಕಾ ಮಂದಣ್ಣ!

ಚಿತ್ರದ ಕೆಲವು ಡೈಲಾಗ್​ಗಳನ್ನು ಹೇಳುವಂತೆ ರಶ್ಮಿಕಾಗೆ ಸೂಚಿಸಲಾಗಿತ್ತು. ಈ ವಿಡಿಯೋವನ್ನು ರಕ್ಷಿತ್​ ಹಂಚಿಕೊಂಡು ಬರ್ತ್​ ಡೇ ವಿಶ್​ ತಿಳಿಸಿದ್ದರು.

Rashmika Mandanna: ರಕ್ಷಿತ್​ ಶೆಟ್ಟಿ ಬರ್ತ್​ಡೇ ವಿಶ್​​ಗೆ ಪ್ರೀತಿಯಿಂದ ಉತ್ತರಿಸಿದ ರಶ್ಮಿಕಾ ಮಂದಣ್ಣ!
ರಕ್ಷಿತ್​-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Apr 05, 2021 | 6:25 PM

Share

ನಟ ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಡುವೆ ಇದ್ದ ಪ್ರೀತಿ ಸೇತುವೆ ಮುರಿದು ಬಿದ್ದಿತ್ತು. ಈ ಎಲ್ಲಾ ಕಹಿ ಘಟನೆಗಳನ್ನು ರಕ್ಷಿತ್ ಮರೆತಿದ್ದಾರೆ. ಅಷ್ಟೇ ಅಲ್ಲ ಕಳೆದ ವರ್ಷಗಳಿಂದ ರಶ್ಮಿಕಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಇಂದು ರಶ್ಮಿಕಾ ಜನ್ಮದಿನ. ಇದಲ್ಲದೆ ವಿಶೇಷ ಟ್ವೀಟ್​ ಮೂಲಕ ಶುಭ ಹಾರೈಸಿದ್ದರು. ಇದಕ್ಕೆ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಬಣ್ಣದ ಲೋಕದಲ್ಲಿ ಭದ್ರ ಬುನಾದಿ ಹಾಕಿಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. 2016ರಲ್ಲಿ ಬಂದ ಆ ಚಿತ್ರವನ್ನು ರಕ್ಷಿತ್​ ಶೆಟ್ಟಿ ನಿರ್ಮಾಣ ಮಾಡಿದ್ದರು. ರಶ್ಮಿಕಾಗೆ ಕಿರಿಕ್​ ಪಾರ್ಟಿಯಲ್ಲಿ ರಕ್ಷಿತ್​ ಅವಕಾಶ ನೀಡಿದ್ದರು. ರಶ್ಮಿಕಾ ಬದುಕು ಬದಲಾಗಲು ಇದು ಪ್ರಮುಖ ಕಾರಣವಾಗಿತ್ತು. ಕಿರಿಕ್​ ಪಾರ್ಟಿ ಚಿತ್ರದ ಹೀರೋಯಿನ್​ ಪಾತ್ರಕ್ಕಾಗಿ ಹಲವಾರು ಹುಡುಗಿಯರ ಆಡಿಷನ್ ಮಾಡಲಾಗಿತ್ತು. ಅದರಲ್ಲಿ ರಶ್ಮಿಕಾ ಮಂದಣ್ಣ ಕೂಡ ಭಾಗವಹಿಸಿದ್ದರು. ಚಿತ್ರದ ಕೆಲವು ಡೈಲಾಗ್​ಗಳನ್ನು ಹೇಳುವಂತೆ ರಶ್ಮಿಕಾಗೆ ಸೂಚಿಸಲಾಗಿತ್ತು. ಈ ವಿಡಿಯೋವನ್ನು ರಕ್ಷಿತ್​ ಹಂಚಿಕೊಂಡು ಬರ್ತ್​ ಡೇ ವಿಶ್​ ತಿಳಿಸಿದ್ದರು.

‘ಕಿರಿಕ್​ ಪಾರ್ಟಿ ಸಿನಿಮಾದ ಆಡಿಷನ್​ನಿಂದ ಈ ಸುಂದರ ನೆನಪನ್ನು ಹಂಚಿಕೊಳ್ಳುತ್ತಿದ್ದೇನೆ. ಅಲ್ಲಿಂದ ನೀನು ತುಂಬ ದೂರ ಪ್ರಯಾಣ ಮಾಡಿದ್ದೀಯ. ನಿಜವಾದ ವಾರಿಯರ್​ ರೀತಿಯಲ್ಲಿ ನಿನ್ನ ಕನಸುಗಳ ಬೆನ್ನು ಹತ್ತಿದ್ದೀಯ. ನಿನ್ನ ಬಗ್ಗೆ ಹೆಮ್ಮೆ ಎನಿಸುತ್ತದೆ ಹುಡುಗಿ. ಜನ್ಮದಿನದ ಶುಭಾಶಯಗಳು. ನಿನಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗಲಿ’ ಎಂದು ರಕ್ಷಿತ್​ ಶೆಟ್ಟಿ ಟ್ವೀಟ್​ ಮಾಡಿದ್ದರು.

ಇದಕ್ಕೆ ಈಗ ರಶ್ಮಿಕಾ ಉತ್ತರಿಸಿದ್ದಾರೆ. ನನಗೆ ಇದು ಇನ್ನೂ ಸ್ಪಷ್ಟವಾಗಿ ನೆನಪಿದೆ. ಧನ್ಯವಾದಗಳು ರಕ್ಷಿತ್​ ಶೆಟ್ಟಿ. ಮೀನ್ಸ್​ ಅ ಲಾಟ್​ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: Rakshit Shetty: ರಶ್ಮಿಕಾ ಜೊತೆಗಿನ 6 ವರ್ಷದ ಹಳೇ ವಿಡಿಯೋ ಹಂಚಿಕೊಂಡ ರಕ್ಷಿತ್​ ಶೆಟ್ಟಿ! ಸಾನ್ವಿಗೆ ಕರ್ಣನ ಬರ್ತ್​ಡೇ ಗಿಫ್ಟ್​

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ