AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಕ್ಷಿತ್​ ಶೆಟ್ಟಿ ಬರ್ತ್​ಡೇ ವಿಶ್​​ಗೆ ಪ್ರೀತಿಯಿಂದ ಉತ್ತರಿಸಿದ ರಶ್ಮಿಕಾ ಮಂದಣ್ಣ!

ಚಿತ್ರದ ಕೆಲವು ಡೈಲಾಗ್​ಗಳನ್ನು ಹೇಳುವಂತೆ ರಶ್ಮಿಕಾಗೆ ಸೂಚಿಸಲಾಗಿತ್ತು. ಈ ವಿಡಿಯೋವನ್ನು ರಕ್ಷಿತ್​ ಹಂಚಿಕೊಂಡು ಬರ್ತ್​ ಡೇ ವಿಶ್​ ತಿಳಿಸಿದ್ದರು.

Rashmika Mandanna: ರಕ್ಷಿತ್​ ಶೆಟ್ಟಿ ಬರ್ತ್​ಡೇ ವಿಶ್​​ಗೆ ಪ್ರೀತಿಯಿಂದ ಉತ್ತರಿಸಿದ ರಶ್ಮಿಕಾ ಮಂದಣ್ಣ!
ರಕ್ಷಿತ್​-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Apr 05, 2021 | 6:25 PM

Share

ನಟ ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಡುವೆ ಇದ್ದ ಪ್ರೀತಿ ಸೇತುವೆ ಮುರಿದು ಬಿದ್ದಿತ್ತು. ಈ ಎಲ್ಲಾ ಕಹಿ ಘಟನೆಗಳನ್ನು ರಕ್ಷಿತ್ ಮರೆತಿದ್ದಾರೆ. ಅಷ್ಟೇ ಅಲ್ಲ ಕಳೆದ ವರ್ಷಗಳಿಂದ ರಶ್ಮಿಕಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಇಂದು ರಶ್ಮಿಕಾ ಜನ್ಮದಿನ. ಇದಲ್ಲದೆ ವಿಶೇಷ ಟ್ವೀಟ್​ ಮೂಲಕ ಶುಭ ಹಾರೈಸಿದ್ದರು. ಇದಕ್ಕೆ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಬಣ್ಣದ ಲೋಕದಲ್ಲಿ ಭದ್ರ ಬುನಾದಿ ಹಾಕಿಕೊಟ್ಟ ಸಿನಿಮಾ ಕಿರಿಕ್​ ಪಾರ್ಟಿ. 2016ರಲ್ಲಿ ಬಂದ ಆ ಚಿತ್ರವನ್ನು ರಕ್ಷಿತ್​ ಶೆಟ್ಟಿ ನಿರ್ಮಾಣ ಮಾಡಿದ್ದರು. ರಶ್ಮಿಕಾಗೆ ಕಿರಿಕ್​ ಪಾರ್ಟಿಯಲ್ಲಿ ರಕ್ಷಿತ್​ ಅವಕಾಶ ನೀಡಿದ್ದರು. ರಶ್ಮಿಕಾ ಬದುಕು ಬದಲಾಗಲು ಇದು ಪ್ರಮುಖ ಕಾರಣವಾಗಿತ್ತು. ಕಿರಿಕ್​ ಪಾರ್ಟಿ ಚಿತ್ರದ ಹೀರೋಯಿನ್​ ಪಾತ್ರಕ್ಕಾಗಿ ಹಲವಾರು ಹುಡುಗಿಯರ ಆಡಿಷನ್ ಮಾಡಲಾಗಿತ್ತು. ಅದರಲ್ಲಿ ರಶ್ಮಿಕಾ ಮಂದಣ್ಣ ಕೂಡ ಭಾಗವಹಿಸಿದ್ದರು. ಚಿತ್ರದ ಕೆಲವು ಡೈಲಾಗ್​ಗಳನ್ನು ಹೇಳುವಂತೆ ರಶ್ಮಿಕಾಗೆ ಸೂಚಿಸಲಾಗಿತ್ತು. ಈ ವಿಡಿಯೋವನ್ನು ರಕ್ಷಿತ್​ ಹಂಚಿಕೊಂಡು ಬರ್ತ್​ ಡೇ ವಿಶ್​ ತಿಳಿಸಿದ್ದರು.

‘ಕಿರಿಕ್​ ಪಾರ್ಟಿ ಸಿನಿಮಾದ ಆಡಿಷನ್​ನಿಂದ ಈ ಸುಂದರ ನೆನಪನ್ನು ಹಂಚಿಕೊಳ್ಳುತ್ತಿದ್ದೇನೆ. ಅಲ್ಲಿಂದ ನೀನು ತುಂಬ ದೂರ ಪ್ರಯಾಣ ಮಾಡಿದ್ದೀಯ. ನಿಜವಾದ ವಾರಿಯರ್​ ರೀತಿಯಲ್ಲಿ ನಿನ್ನ ಕನಸುಗಳ ಬೆನ್ನು ಹತ್ತಿದ್ದೀಯ. ನಿನ್ನ ಬಗ್ಗೆ ಹೆಮ್ಮೆ ಎನಿಸುತ್ತದೆ ಹುಡುಗಿ. ಜನ್ಮದಿನದ ಶುಭಾಶಯಗಳು. ನಿನಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗಲಿ’ ಎಂದು ರಕ್ಷಿತ್​ ಶೆಟ್ಟಿ ಟ್ವೀಟ್​ ಮಾಡಿದ್ದರು.

ಇದಕ್ಕೆ ಈಗ ರಶ್ಮಿಕಾ ಉತ್ತರಿಸಿದ್ದಾರೆ. ನನಗೆ ಇದು ಇನ್ನೂ ಸ್ಪಷ್ಟವಾಗಿ ನೆನಪಿದೆ. ಧನ್ಯವಾದಗಳು ರಕ್ಷಿತ್​ ಶೆಟ್ಟಿ. ಮೀನ್ಸ್​ ಅ ಲಾಟ್​ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: Rakshit Shetty: ರಶ್ಮಿಕಾ ಜೊತೆಗಿನ 6 ವರ್ಷದ ಹಳೇ ವಿಡಿಯೋ ಹಂಚಿಕೊಂಡ ರಕ್ಷಿತ್​ ಶೆಟ್ಟಿ! ಸಾನ್ವಿಗೆ ಕರ್ಣನ ಬರ್ತ್​ಡೇ ಗಿಫ್ಟ್​

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ