AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತ-ಬಾಲಿವುಡ್ ಎಂದು ಬೇರೆ ಮಾಡುವವರಿಗೆ ರಶ್ಮಿಕಾ ಮಂದಣ್ಣ ಕೊಟ್ಟರು ಉತ್ತರ

ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ ಬಳಿಕ ಅವರಿಗೆ ಹಿಂದಿ ಚಿತ್ರರಂಗದಿಂದ ಆಫರ್ ಬಂತು. ಅಲ್ಲಿ ನಟಿಸಿ ಭೇಷ್ ಎನಿಸಿಕೊಂಡರು. ಇತ್ತೀಚೆಗೆ ‘ಅನಿಮಲ್’ ಸಿನಿಮಾ ಮೂಲಕ ಅವರು ಗೆದ್ದು ಬೀಗಿದ್ದಾರೆ.

ದಕ್ಷಿಣ ಭಾರತ-ಬಾಲಿವುಡ್ ಎಂದು ಬೇರೆ ಮಾಡುವವರಿಗೆ ರಶ್ಮಿಕಾ ಮಂದಣ್ಣ ಕೊಟ್ಟರು ಉತ್ತರ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Mar 06, 2024 | 7:02 AM

Share

ದಕ್ಷಿಣ ಭಾರತ ಚಿತ್ರರಂಗ ಹಾಗೂ ಬಾಲಿವುಡ್ (Bollywood)​ ಚರ್ಚೆ ಇಂದು ನಿನ್ನೆಯದಲ್ಲ. ಎರಡನ್ನೂ ಸೇರಿ ಭಾರತ ಚಿತ್ರರಂಗ ಎಂದು ಕೆಲವರು ಪರಿಗಣಿಸಿದರೆ ಇನ್ನೂ ಕೆಲವರು ಇದನ್ನು ಬೇರೆ ಬೇರೆ ಆಗಿಯೇ ನೋಡುತ್ತಾರೆ. ಚಿತ್ರರಂಗದ ಅನೇಕರಿಗೆ ಈ ಬಗ್ಗೆ ಬೇರೆ ಬೇರೆ ರೀತಿಯ ಅಭಿಪ್ರಾಯ ಇದೆ. ಈಗ ನಟಿ ರಶ್ಮಿಕಾ ಮಂದಣ್ಣ ಅವರು ಈ ಬಗ್ಗೆ ಮಾತನಾಡಿದ್ದಾರೆ. ಇತ್ತೀಚಿಗಿನ ಸಂದರ್ಶನ ಒಂದರಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಇದನ್ನು ಅವರು ‘ಭಾರತೀಯ ಚಿತ್ರರಂಗ’ ಎಂದು ಕರೆದಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ ಬಳಿಕ ಅವರಿಗೆ ಹಿಂದಿ ಚಿತ್ರರಂಗದಿಂದ ಆಫರ್ ಬಂತು. ಅಲ್ಲಿ ನಟಿಸಿ ಭೇಷ್ ಎನಿಸಿಕೊಂಡರು. ಇತ್ತೀಚೆಗೆ ‘ಅನಿಮಲ್’ ಸಿನಿಮಾ ಮೂಲಕ ಅವರು ಗೆದ್ದು ಬೀಗಿದ್ದಾರೆ. ದಕ್ಷಿಣ ಭಾರತ ಹಾಗೂ ಹಿಂದಿ ಚಿತ್ರರಂಗ ಎಂದು ಬೇರ್ಪಡಿಸುವವರಿಗೆ ಅವರು ಉತ್ತರ ನೀಡಿದ್ದಾರೆ.

‘ನಾವೆಲ್ಲರೂ ಮನರಂಜನಾ ಉದ್ಯಮದಲ್ಲಿದ್ದೇವೆ. ನಾವೆಲ್ಲರೂ ಒಂದೇ ದೇಶದವಾಗಿರುವುದರಿಂದ ನಾವು ಉದ್ಯಮವನ್ನು ಭಾರತೀಯ ಸಿನಿಮಾ ರಂಗ ಎಂದು ಕರೆಯಲು ಪ್ರಾರಂಭಿಸುವ ಸಮಯ ಬಂದಿದೆ. ನಮ್ಮ ದೇಶದಲ್ಲಿ ಇರುವ ಎಲ್ಲಾ ಚಿತ್ರೋದ್ಯಮ ಒಂದೇ ಆಗಿವೆ ಎಂದು ನಾವು ಒಪ್ಪಿಕೊಳ್ಳಬೇಕಿದೆ’ ಎಂದಿದ್ದಾರೆ ರಶ್ಮಿಕಾ ಮಂದಣ್ಣ.

‘ನಾವು ಒಂದೊಳ್ಳೆ ಸಿನಿಮಾ ಮಾಡಲು ಇಲ್ಲಿದ್ದೇವೆ. ಅಡೆತಡೆಗಳು ಕಡಿಮೆಯಾಗುತ್ತಿವೆ ಮತ್ತು ಜನರು ಎಲ್ಲಿಗೆ ಸೇರಿದವರಾಗಿದ್ದರೂ ಬೇರೆ ಬೇರೆ ಭಾಷೆಗಳಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎಂಬ ವಿಚಾರವನ್ನು ನಾನು ಪ್ರೀತಿಸುತ್ತೇನೆ. ನಾನು ಬದಲಾವಣೆಯ ಭಾಗವಾಗಿದ್ದೇನೆ ಎಂದು ನನಗೆ ನಿಜವಾಗಿಯೂ ಸಂತೋಷವಾಗಿದೆ’ ಎಂದಿದ್ದಾರೆ ರಶ್ಮಿಕಾ ಮಂದಣ್ಣ.

ಇದನ್ನೂ ಓದಿ: ಯಶ್ To ರಶ್ಮಿಕಾ ಮಂದಣ್ಣ; ದಕ್ಷಿಣದ ಕಲಾವಿದರಿಗೆ ಇದೆ ವಿವಿಧ ಕ್ರೇಜ್

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಜಪಾನ್​ಗೆ ತೆರಳಿದ್ದರು. ಅಲ್ಲಿ ಎನಿಮೇ ಅವಾರ್ಡ್​ ಕಾರ್ಯಕ್ರಮದಲ್ಲಿ ಜ್ಯೂರಿ ಆಗಿ ಭಾಗಿ ಆಗಿದ್ದರು. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ರಶ್ಮಿಕಾ ಮಂದಣ್ಣ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರು ‘ಪುಷ್ಪ 2’, ‘ರೇನ್​ಬೋ’ ಸೇರಿ ಅನೇಕ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ