AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತ-ಬಾಲಿವುಡ್ ಎಂದು ಬೇರೆ ಮಾಡುವವರಿಗೆ ರಶ್ಮಿಕಾ ಮಂದಣ್ಣ ಕೊಟ್ಟರು ಉತ್ತರ

ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ ಬಳಿಕ ಅವರಿಗೆ ಹಿಂದಿ ಚಿತ್ರರಂಗದಿಂದ ಆಫರ್ ಬಂತು. ಅಲ್ಲಿ ನಟಿಸಿ ಭೇಷ್ ಎನಿಸಿಕೊಂಡರು. ಇತ್ತೀಚೆಗೆ ‘ಅನಿಮಲ್’ ಸಿನಿಮಾ ಮೂಲಕ ಅವರು ಗೆದ್ದು ಬೀಗಿದ್ದಾರೆ.

ದಕ್ಷಿಣ ಭಾರತ-ಬಾಲಿವುಡ್ ಎಂದು ಬೇರೆ ಮಾಡುವವರಿಗೆ ರಶ್ಮಿಕಾ ಮಂದಣ್ಣ ಕೊಟ್ಟರು ಉತ್ತರ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Mar 06, 2024 | 7:02 AM

Share

ದಕ್ಷಿಣ ಭಾರತ ಚಿತ್ರರಂಗ ಹಾಗೂ ಬಾಲಿವುಡ್ (Bollywood)​ ಚರ್ಚೆ ಇಂದು ನಿನ್ನೆಯದಲ್ಲ. ಎರಡನ್ನೂ ಸೇರಿ ಭಾರತ ಚಿತ್ರರಂಗ ಎಂದು ಕೆಲವರು ಪರಿಗಣಿಸಿದರೆ ಇನ್ನೂ ಕೆಲವರು ಇದನ್ನು ಬೇರೆ ಬೇರೆ ಆಗಿಯೇ ನೋಡುತ್ತಾರೆ. ಚಿತ್ರರಂಗದ ಅನೇಕರಿಗೆ ಈ ಬಗ್ಗೆ ಬೇರೆ ಬೇರೆ ರೀತಿಯ ಅಭಿಪ್ರಾಯ ಇದೆ. ಈಗ ನಟಿ ರಶ್ಮಿಕಾ ಮಂದಣ್ಣ ಅವರು ಈ ಬಗ್ಗೆ ಮಾತನಾಡಿದ್ದಾರೆ. ಇತ್ತೀಚಿಗಿನ ಸಂದರ್ಶನ ಒಂದರಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಇದನ್ನು ಅವರು ‘ಭಾರತೀಯ ಚಿತ್ರರಂಗ’ ಎಂದು ಕರೆದಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ ಬಳಿಕ ಅವರಿಗೆ ಹಿಂದಿ ಚಿತ್ರರಂಗದಿಂದ ಆಫರ್ ಬಂತು. ಅಲ್ಲಿ ನಟಿಸಿ ಭೇಷ್ ಎನಿಸಿಕೊಂಡರು. ಇತ್ತೀಚೆಗೆ ‘ಅನಿಮಲ್’ ಸಿನಿಮಾ ಮೂಲಕ ಅವರು ಗೆದ್ದು ಬೀಗಿದ್ದಾರೆ. ದಕ್ಷಿಣ ಭಾರತ ಹಾಗೂ ಹಿಂದಿ ಚಿತ್ರರಂಗ ಎಂದು ಬೇರ್ಪಡಿಸುವವರಿಗೆ ಅವರು ಉತ್ತರ ನೀಡಿದ್ದಾರೆ.

‘ನಾವೆಲ್ಲರೂ ಮನರಂಜನಾ ಉದ್ಯಮದಲ್ಲಿದ್ದೇವೆ. ನಾವೆಲ್ಲರೂ ಒಂದೇ ದೇಶದವಾಗಿರುವುದರಿಂದ ನಾವು ಉದ್ಯಮವನ್ನು ಭಾರತೀಯ ಸಿನಿಮಾ ರಂಗ ಎಂದು ಕರೆಯಲು ಪ್ರಾರಂಭಿಸುವ ಸಮಯ ಬಂದಿದೆ. ನಮ್ಮ ದೇಶದಲ್ಲಿ ಇರುವ ಎಲ್ಲಾ ಚಿತ್ರೋದ್ಯಮ ಒಂದೇ ಆಗಿವೆ ಎಂದು ನಾವು ಒಪ್ಪಿಕೊಳ್ಳಬೇಕಿದೆ’ ಎಂದಿದ್ದಾರೆ ರಶ್ಮಿಕಾ ಮಂದಣ್ಣ.

‘ನಾವು ಒಂದೊಳ್ಳೆ ಸಿನಿಮಾ ಮಾಡಲು ಇಲ್ಲಿದ್ದೇವೆ. ಅಡೆತಡೆಗಳು ಕಡಿಮೆಯಾಗುತ್ತಿವೆ ಮತ್ತು ಜನರು ಎಲ್ಲಿಗೆ ಸೇರಿದವರಾಗಿದ್ದರೂ ಬೇರೆ ಬೇರೆ ಭಾಷೆಗಳಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎಂಬ ವಿಚಾರವನ್ನು ನಾನು ಪ್ರೀತಿಸುತ್ತೇನೆ. ನಾನು ಬದಲಾವಣೆಯ ಭಾಗವಾಗಿದ್ದೇನೆ ಎಂದು ನನಗೆ ನಿಜವಾಗಿಯೂ ಸಂತೋಷವಾಗಿದೆ’ ಎಂದಿದ್ದಾರೆ ರಶ್ಮಿಕಾ ಮಂದಣ್ಣ.

ಇದನ್ನೂ ಓದಿ: ಯಶ್ To ರಶ್ಮಿಕಾ ಮಂದಣ್ಣ; ದಕ್ಷಿಣದ ಕಲಾವಿದರಿಗೆ ಇದೆ ವಿವಿಧ ಕ್ರೇಜ್

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಜಪಾನ್​ಗೆ ತೆರಳಿದ್ದರು. ಅಲ್ಲಿ ಎನಿಮೇ ಅವಾರ್ಡ್​ ಕಾರ್ಯಕ್ರಮದಲ್ಲಿ ಜ್ಯೂರಿ ಆಗಿ ಭಾಗಿ ಆಗಿದ್ದರು. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ರಶ್ಮಿಕಾ ಮಂದಣ್ಣ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರು ‘ಪುಷ್ಪ 2’, ‘ರೇನ್​ಬೋ’ ಸೇರಿ ಅನೇಕ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ