Rashmika Mandanna: ‘ಈ ಸಲ ಕಪ್​ ನಮ್ದೇ’ ಎಂದ ರಶ್ಮಿಕಾ ಮಂದಣ್ಣಗೆ ಆರ್​ಸಿಬಿ ಫ್ಯಾನ್ಸ್​ ಫಿದಾ

Ee Sala Cup Namde: ರಶ್ಮಿಕಾ ಮಂದಣ್ಣ ಇತ್ತೀಚೆಗೆ ಲೈವ್​ ಬಂದಿದ್ದರು. ಈ ವೇಳೆ ಅವರು ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಅವರು ತಮ್ಮಿಷ್ಟದ ಐಪಿಎಲ್​ ಟೀಂ ಬಗ್ಗೆ ಹೇಳಿಕೊಂಡಿದ್ದಾರೆ.

Rashmika Mandanna: ಈ ಸಲ ಕಪ್​ ನಮ್ದೇ ಎಂದ ರಶ್ಮಿಕಾ ಮಂದಣ್ಣಗೆ ಆರ್​ಸಿಬಿ ಫ್ಯಾನ್ಸ್​ ಫಿದಾ
ರಶ್ಮಿಕಾ ಮಂದಣ್ಣ

Updated on: Apr 28, 2021 | 3:11 PM

ಐಪಿಎಲ್​ 14ನೇ ಸೀಸನ್​ ಆರಂಭವಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ತಮ್ಮಿಷ್ಟದ ತಂಡವನ್ನು ಬೆಂಬಲಿಸಿ ಟ್ವೀಟ್​ ಮಾಡುತ್ತಿದ್ದಾರೆ. ಕೊರೊನಾ ಹೆಚ್ಚುತ್ತಿರುವುದರಿಂದ ಜನರು ಮನೆಯಲ್ಲೇ ಉಳಿದುಕೊಳ್ಳುತ್ತಿದ್ದಾರೆ. ಹೀಗಾಗಿ, ಐಪಿಎಲ್​ ಸಾಕಷ್ಟು ಎಂಟರ್​ಟೇನ್​ಮೆಂಟ್​ ನೀಡುತ್ತಿದೆ. ಹೀಗಿರುವಾಗಲೇ ರಶ್ಮಿಕಾ ಮಂದಣ್ಣ ತಮ್ಮಿಷ್ಟದ ತಂಡ ಯಾವುದು ಎನ್ನುವ ಬಗ್ಗೆ ಹೇಳಿಕೊಂಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ರಶ್ಮಿಕಾ ಮಂದಣ್ಣ ಇತ್ತೀಚೆಗೆ ಲೈವ್​ ಬಂದಿದ್ದರು. ಈ ವೇಳೆ ಅವರು ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ನಾನು ಲೈವ್​​ ಬರಬೇಕು ಎಂದು ತುಂಬಾ ದಿನಗಳಿಂದ ಅಂದುಕೊಂಡಿದ್ದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಲೈವ್​ ಬಂದಿದ್ದೇನೆ ಎಂದಿದ್ದರು. ಅಲ್ಲದೆ ಸಾಕಷ್ಟು ವಿಚಾರಗಳ ಬಗ್ಗೆ ಅಭಿಮಾನಿಗಳ ಜತೆ ಚರ್ಚೆ ನಡೆಸಿದ್ದರು.

ಈ ವೇಳೆ ಅಭಿಮಾನಿಯೋರ್ವ ನಿಮ್ಮಿಷ್ಟದ ಟೀಂ ಯಾವುದು ಎಂದು ಕೇಳಿದ್ದಾರೆ. ಅದಕ್ಕೆ ಉತ್ತರಿಸಿರುವ ರಶ್ಮಿಕಾ, ಈ ಸಲ ಕಪ್​ ನಮ್ದೇ ಎಂದಿದ್ದಾರೆ. ಈ ಮೂಲಕ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಬೆಂಬಲ ನೀಡುತ್ತಿದ್ದೇನೆ ಎಂದು ನೇರವಾಗಿಯೇ ಹೇಳಿದ್ದಾರೆ.

ಆರ್​ಸಿಬಿ ತಂಡಕ್ಕೆ ಕಿಚ್ಚ ಸುದೀಪ್​ ಸೇರಿದಂತೆ ಸಾಕಷ್ಟು ಕನ್ನಡ ನಟ-ನಟಿಯರು ಬೆಂಬಲ ನೀಡುತ್ತಿದ್ದಾರೆ. ಈಗ ರಶ್ಮಿಕಾ ಕೂಡ ಆರ್​ಸಿಬಿಗೆ ಬೆಂಬಲ ನೀಡುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

ಆಡಿದ ಆರು ಪಂದ್ಯಗಳ ಪೈಕಿ ಐದು ಪಂದ್ಯಗಳನ್ನು ಗೆದ್ದು ಆರ್​ಸಿಬಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಮಂಗಳವಾರ (ಏಪ್ರಿಲ್​ 27) ದೆಹಲಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಒಂದು ರನ್​ನಿಂದ ಆರ್​ಸಿಬಿ ಗೆದ್ದಿದೆ. ಶುಕ್ರವಾರ (28) ಕೆಎಲ್​ ರಾಹುಲ್​ ನೇತೃತ್ವದ ಪಂಜಾಬ್​ ಕಿಂಗ್ಸ್​ ವಿರುದ್ಧ ಆರ್​ಸಿಬಿ ಸೆಣೆಸಲಿದೆ.

ಸದ್ಯ ಲಾಕ್ಡೌನ್ ಇರುವ ಕಾರಣಕ್ಕೆ ರಶ್ಮಿಕಾ ಕರ್ನಾಟಕಕ್ಕೆ ಬರಲು ಸಾಧ್ಯವಾಗಿಲ್ಲ. ಅಲ್ಲು ಅರ್ಜುನ್ ಜೊತೆಗಿನ ಪುಷ್ಪ ಸೇರಿದಂತೆ ಅನೇಕ ಸಿನಿಮಾ ಕೆಲಸಗಳ ಸಲುವಾಗಿ ಹೈದರಾಬಾದ್ನಲ್ಲೇ ಅವರು ಕಾಲ ಕಳೆಯುತ್ತಿದ್ದಾರೆ. ಕುಟುಂಬದವರನ್ನು ಭೇಟಿ ಮಾಡದೇ ತಿಂಗಳುಗಳೇ ಕಳೆದಿವೆ ಎಂದು ಅವರು ಹೇಳಿದ್ದಾರೆ. ಬಾಲಿವುಡ್ನಲ್ಲಿ ಗುಡ್ ಬೈ, ಮಿಷನ್ ಮಜ್ನು ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ಇದನ್ನೂ ಒದಿ: Rashmika Mandanna: ಒಳ್ಳೆ ಸ್ಕ್ರೀಪ್ಟ್ ಬಂದ್ರೆ ನಟ ವಿಜಯ್‌ ದೇವರಕೊಂಡ ಜತೆ ನಟಿಸ್ತೀನಿ: ರಶ್ಮಿಕಾ ಮಂದಣ್ಣ

Published On - 2:47 pm, Wed, 28 April 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us