AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ನಾನು ಆರು ಭಾಷೆ ಮಾತನಾಡುತ್ತೇನೆ’ ಎಂದು ಹೇಳಿ ಕನ್ನಡದಲ್ಲಿ ತಪ್ಪಾಗಿ ಮಾತನಾಡಿದ ರಶ್ಮಿಕಾ ಮಂದಣ್ಣ

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಸ್ಟೇಟಸ್ ಒಂದನ್ನು ರಶ್ಮಿಕಾ ಹಂಚಿಕೊಂಡಿದ್ದರು. ‘ಹಾಯ್ ಮೈ ಲವ್ಸ್’ ಎಂದು ಅವರು ಸ್ಟೇಟಸ್​ನಲ್ಲಿ ಬರೆದುಕೊಂಡು ಕೆಳಗೆ ಪ್ರಶ್ನೆ ಕೇಳಲು ಅವಕಾಶ ನೀಡಿದ್ದರು.

Rashmika Mandanna: ‘ನಾನು ಆರು ಭಾಷೆ ಮಾತನಾಡುತ್ತೇನೆ’ ಎಂದು ಹೇಳಿ ಕನ್ನಡದಲ್ಲಿ ತಪ್ಪಾಗಿ ಮಾತನಾಡಿದ ರಶ್ಮಿಕಾ ಮಂದಣ್ಣ
ರಶ್ಮಿಕಾ
Follow us
ರಾಜೇಶ್ ದುಗ್ಗುಮನೆ
|

Updated on: Jul 11, 2023 | 1:23 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಒಂದು ವರ್ಗದ ಜನರು ಅವರನ್ನು ಯಾವಾಗಲೂ ದ್ವೇಷ ಮಾಡುತ್ತಾರೆ. ಅದರಲ್ಲೂ ಕನ್ನಡಿಗರಿಗೆ ರಶ್ಮಿಕಾ ಬಗ್ಗೆ ಸಾಕಷ್ಟು ಕೋಪ ಇದೆ. ಇದಕ್ಕೆ ಕಾರಣ ಹಲವು. ಅವರನ್ನು ಸಾಕಷ್ಟು ಮಂದಿ ಟ್ರೋಲ್ ಮಾಡಲೆಂದೇ ಕಾದಿರುತ್ತಾರೆ. ಈಗ ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಅವರು ಆಸ್ಕ್​ ಮಿ ಎನಿಥಿಂಗ್ ನಡೆಸಿದ್ದರು. ಈ ವೇಳೆ ಅವರಿಗೆ ವಿವಿಧ ರೀತಿಯ ಪ್ರಶ್ನೆಗಳು ಎದುರಾಗಿವೆ. ಅಲ್ಲಿಯೂ ಅವರು ಕನ್ನಡವನ್ನು ತಪ್ಪಾಗಿ ಮಾತನಾಡಿದ್ದಾರೆ.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಸ್ಟೇಟಸ್ ಒಂದನ್ನು ರಶ್ಮಿಕಾ ಹಂಚಿಕೊಂಡಿದ್ದರು. ‘ಹಾಯ್ ಮೈ ಲವ್ಸ್’ ಎಂದು ಅವರು ಸ್ಟೇಟಸ್​ನಲ್ಲಿ ಬರೆದುಕೊಂಡು ಕೆಳಗೆ ಪ್ರಶ್ನೆ ಕೇಳಲು ಅವಕಾಶ ನೀಡಿದ್ದರು. ‘ಕನ್ನಡದಲ್ಲಿ ಕೆಲವು ಶಬ್ದ ಮಾತನಾಡಿ’ ಎಂದು ರಶ್ಮಿಕಾಗೆ ಕೋರಲಾಯಿತು. ಇದಕ್ಕೆ ಉತ್ತರಿಸಿದ ರಶ್ಮಿಕಾ ‘ಎಲ್ಲರಿಗೂ ಹಾಯ್. ಹೇಗಿದ್ದೀರಾ? ಚೆನ್ನಾಗಿದ್ದೀರಾ? ಯಾವಾಗಲೂ ನೌತಾ (ನಗುತ್ತಾ) ಇರಿ. ನಾನು ನಿಮ್ಮ ಬಗ್ಗೆ ಯಾವಾಗಲೂ ಯೋಚನೆ ಮಾಡುತ್ತಾ ಇರುತ್ತೇನೆ’ ಎಂದು ಹೇಳಿದ್ದಾರೆ.

ಮತ್ತೊಂದು ಪ್ರಶ್ನೆಯಲ್ಲಿ ‘ರಶ್ಮಿಕಾ ನೀವು ಎಷ್ಟು ಭಾಷೆ ಮಾತನಾಡುತ್ತೀರಿ’ ಎಂದು ಕೇಳಲಾಗಿದೆ. ಇದಕ್ಕೆ ಅವರು ಬೆರಳಲ್ಲೆಲ್ಲ ಲೆಕ್ಕ ಹಾಕಿ ‘ಆರು’ ಎಂದು ಉತ್ತರಿಸಿದ್ದಾರೆ. ಈ ಎರಡು ಪ್ರಶ್ನೆಗಳ ವಿಚಾರ ಇಟ್ಟುಕೊಂಡು ರಶ್ಮಿಕಾ ಮಂದಣ್ಣ ಅವರನ್ನು ಸಖತ್ ಟ್ರೋಲ್ ಮಾಡಲಾಗುತ್ತಿದೆ.

ಕನ್ನಡದಲ್ಲಿ ಮಾತನಾಡುವಾಗ ರಶ್ಮಿಕಾ ಮಂದಣ್ಣ ಅವರು ‘ನಗುತ್ತಾ ಇರಿ’ ಅನ್ನೋದನ್ನು ಸರಿಯಾಗಿ ಉಚ್ಚಾರಣೆ ಮಾಡಿಲ್ಲ. ‘ನೌತಾ ಇರಿ’ ಎಂದು ಹೇಳಿದ್ದರು. ‘ನೀವು ಆರು ಭಾಷೆಯನ್ನು ಮಾತನಾಡುತ್ತೀರಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೀರಿ. ಆದರೆ, ಕರ್ನಾಟಕದವರಾಗಿ ಕನ್ನಡವನ್ನೇ ಸರಿಯಾಗಿ ಮಾತನಾಡುವುದಿಲ್ಲ. ಹೀಗಿರುವಾಗ ಎಷ್ಟು ಭಾಷೆ ಕಲಿತು ಏನು ಪ್ರಯೋಜನ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಆಗಮನಕ್ಕೆ ಹೊಸ ದಿನಾಂಕ ನಿಗದಿ: ಡಿ.1ಕ್ಕೆ ಬರಲಿದೆ ರಶ್ಮಿಕಾ-ರಣಬೀರ್​ ಜೋಡಿಯ ಚಿತ್ರ

ರಶ್ಮಿಕಾ ಮಂದಣ್ಣ ಅವರನ್ನು ಎಷ್ಟೇ ಟ್ರೋಲ್ ಮಾಡಿದರೂ ಅವರ ಖ್ಯಾತಿ ಮಾತ್ರ ಕಡಿಮೆ ಆಗಿಲ್ಲ. ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಲೇ ಇದ್ದಾರೆ. ಅವರ ನಟನೆಯ ‘ಅನಿಮಲ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ‘ಪುಷ್ಪ 2’, ‘ರೇನ್​ಬೋ’ ಮೊದಲಾದ ಚಿತ್ರಗಳನ್ನು ಒಪ್ಪಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ